ಶೀಘ್ರದಲ್ಲೇ ಶಿರಾಡಿ ಘಾಟ್ ಬೈಪಾಸ್ ಕಾಮಗಾರಿ : ಗಡ್ಕರಿ
ಮಂಗಳೂರು, ಡಿಸೆಂಬರ್ 16 : '2016ರ ಡಿಸೆಂಬರ್ ಅಂತ್ಯದೊಳಗೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ನಲ್ಲಿ ಉದ್ದೇಶಿತ ಬೈಪಾಸ್ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದು' ಎಂದು ಕೇಂದ್ರ ಬಂದರು ಹಾಗೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಮಂಗಳವಾರ
ಮಂಗಳೂರಿನಲ್ಲಿ
ಮಾಧ್ಯಮಗಳ
ಜೊತೆ
ಮಾತನಾಡಿದ
ಸಚಿವರು,
'ಕಾಮಗಾರಿಗೆ
ಸಂಬಂಧಪಟ್ಟಂತೆ
ಡಿಪಿಆರ್
ಸರ್ವೆ
ಕೈಗೆತ್ತಿಕೊಳ್ಳಲಾಗಿದೆ.
ಇದರಲ್ಲಿ
6
ಸುರಂಗಗಳು
ಮತ್ತು
12
ಸೇತುವೆಗಳ
ನಿರ್ಮಾಣಗೊಳ್ಳಲಿವೆ.
ಯೋಜನೆಗೆ
ಸುಮಾರು
12
ಸಾವಿರ
ಕೋಟಿ
ರೂ.
ವೆಚ್ಚವಾಗಲಿದೆ'
ಎಂದು
ತಿಳಿಸಿದರು.
[ಶೀಘ್ರದಲ್ಲೇ
ಪುನಃ
ಶಿರಾಡಿಯಲ್ಲಿ
ವಾಹನ
ಸಂಚಾರ
ಬಂದ್]
'ಕೇಂದ್ರ ಸರ್ಕಾರದ ಸ್ಮಾರ್ಟ್ಪೋರ್ಟ್ ಸಿಟಿ ಯೋಜನೆಯಡಿ ನಿರ್ಮಾಣವಾಗಲಿರುವ ಬಳ್ಳಾರಿಯಿಂದ ಬೇಲೆಕೇರಿ ಬಂದರಿಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಹುಬ್ಬಳ್ಳಿ-ಅಂಕೋಲಾ ನಡುವೆ ಅರಣ್ಯಭಾಗದ ರಸ್ತೆ ವಿಸ್ತರಣೆ ಮಾಡಬೇಕು. ಈ ಕಾಮಗಾರಿಗೆ ಪರಿಸರ ಇಲಾಖೆಯ ಅನುಮತಿ ಸಿಕ್ಕಿಲ್ಲ' ಎಂದರು. [ಶಿರಾಡಿ ಘಾಟ್ ಸಂಚಾರಕ್ಕೆ ಮುಕ್ತ : ಚಿತ್ರಗಳು]
ಕಟ್ಟಡ ಲೋಕಾರ್ಪಣೆ : ನಿತಿನ್ ಗಡ್ಕರಿ ಅವರು ನಂತರ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಶ್ರೀರಾಮ ಪದವಿ ಮಹಾ ವಿದ್ಯಾಲಯದ ನೂತನ ಕಟ್ಟಡ ಲೋಕಾರ್ಪಣೆಗೊಳಿಸಿದರು. ವಿದ್ಯಾಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿ, ಬಳ್ಳಾರಿ ಸಂಸದ ಶ್ರೀರಾಮುಲು, ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ನಾಗರಾಜ ಶೆಟ್ಟಿ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.