ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇಸ್ಮಾಯಿಲ್ ಕೊಲೆ ನಾಲ್ವರಿಗೆ ಸುಪಾರಿ, 7 ಮಂದಿ ಬಂಧನ

By Mahesh
|
Google Oneindia Kannada News

ಸುಳ್ಯ, ಅಕ್ಟೋಬರ್ 03: ಸುಳ್ಯ ತಾಲೂಕು ಪಂಚಾಯಿತಿಯ ಮಾಜಿ ಸದಸ್ಯೆ ವಹೀದಾ ಇಸ್ಮಾಯಿಲ್ ಅವರ ಪತಿ ಕರಾವಳಿ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಇಸ್ಮಾಯಿಲ್ ನೇಲ್ಯಮಜಲು (52 ವರ್ಷ) ಹತ್ಯೆಗೆ ಸಂಬಂಧಿಸಿದಂತೆ ಏಳು ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಮಸೀದಿಯಲ್ಲಿ ನಮಾಜು ಮಾಡಿ ಹಿಂತಿರುಗುತ್ತಿದ್ದ ಇಸ್ಮಾಯಿಲ್ ಅವರನ್ನು ತಲವಾರಿನಿಂದ ಕಡಿದು ಕೊಲೆ ಮಾಡಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಬೆಚ್ಚಿ ಬೀಳುವಂತೆ ಮಾಡಿತ್ತು. ಸೆಪ್ಟೆಂಬರ್ 23ರಂದು ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ಅಪರಾಧ ಪತ್ತೆ ದಳದ ಪೊಲೀಸರು ಬಂಧಿಸಿರುವುದಾಗಿ ತಿಳಿದುಬಂದಿದೆ.[ಇಸ್ಮಾಯಿಲ್ ರನ್ನು ಕೊಂದಿದ್ದು ಸುಪಾರಿ ಕಿಲ್ಲರ್ಸ್!]

Sullia : Ismail Nelyamajalu murder case : Seven Accused Arrested

ಇಸ್ಮಾಯಿಲ್‌ರವರನ್ನು ಸುಳ್ಯ ತಾಲೂಕಿನ ಐವರ್ನಾಡಿನಲ್ಲಿ ತಲವಾರಿನಿಂದ ಕಡಿದು ಕೊಲೆಗೈಯ್ಯಲಾಗಿತ್ತು. ಇಸ್ಮಾಯಿಲ್ ಅವರು ಮಸೀದಿಯಲ್ಲಿ ಜುಮಾ ಪ್ರಾರ್ಥನೆ ಮುಗಿಸಿ ಹೊರಬಂದು ತಮ್ಮ ವಾಹನದತ್ತ ಬಂದಾಗ ಕಾರಿನಲ್ಲಿ ಬಂದ ಹಂತಕರ ತಂಡ ಇವರ ಮುಖ ಸಹಿತ ದೇಹದ ವಿವಿಧ ಭಾಗಗಳಿಗೆ ತಲವಾರಿನಿಂದ ಕಡಿದಾಗ ಗಂಭೀರ ಗಾಯಗೊಂಡ ಇಸ್ಮಾಯಿಲ್ ಸ್ಥಳದಲ್ಲೇ ಕುಸಿದುಬಿದ್ದು ಮೃತಪಟ್ಟಿದ್ದರು.

ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಏಳು ಮಂದಿಯನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ. ಈ ಪೈಕಿ ನಾಲ್ವರು ಹತ್ಯೆಗೆ ಸುಪಾರಿ ನೀಡಿದವರು ಮತ್ತು ಮೂವರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳು ಎಂದು ಮೂಲಗಳಿಂದ ತಿಳಿದು ಬಂದಿದೆ.

English summary
Sullia : Bellare police in Dakshina Kannada district are investigating Ismail Nelyamajalu murder case. Police have arrested seven accused in connection with the case. Now it is confirmed that Congress leader Ismail Nelyamajalu was killed by Professionals.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X