ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪುತ್ತೂರು: ಹಲವು ಸಂಶಯಕ್ಕೆ ಎಡೆಮಾಡಿಕೊಟ್ಟ ಕಾರು ಅಪಘಾತ

|
Google Oneindia Kannada News

ಮಂಗಳೂರು, ಜುಲೈ 31 : ಪುತ್ತೂರು ತಾಲೂಕಿನ ವಿಟ್ಲಾ ಸಮೀಪ ದೆಹಲಿ ನೋಂದಾಣಿ ಕಾರೊಂದು ಅಪಘಾತಕ್ಕೀಡಾಗಿದ್ದು, ಕಾರಿನಲ್ಲಿದ್ದವರು ಸ್ಥಳದಿಂದ ಪರಾರಿಯಾಗಿದ್ದಾರೆ.

ಕಳೆದ ತಡರಾತ್ರಿ ವಿಟ್ಲ ವೀರಕಂಬ -ಮಜ್ಜೋಣಿ -ಕೋಡಪದವು ಒಳ ರಸ್ತೆಯಲ್ಲಿ ಈ ಅಫಘಾತ ಸಂಭವಿಸಿದೆ. ಕಾರು ಅಪಘಾತಕ್ಕೀಡಾಗುತ್ತಿದ್ದಂತೆಯೇ ಕಾರಿನಲ್ಲಿದ್ದವರು ಕಾರನ್ನು ಬಿಟ್ಟು ಪರಾರಿಯಾಗಿದ್ದು, ಇದೀಗ ಈ ಘಟನೆ ಹಲವು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ

Suspicious Delhi registration car found at Vitla

ಕಾರು ದೆಹಲಿಯಲ್ಲಿ ನೋಂದಾಣಿಯಾಗಿದ್ದು, ಜಸ್ ಜೀತ್ ಸಿಂಗ್ ಎಂಬವರಿಗೆ ಸೇರಿದ್ದಾಗಿದೆ. ಆದರೆ, ದೆಹಲಿ ಮೂಲದ ಕಾರು ವಿಟ್ಲದಲ್ಲಿ ಸಂಚರಿಸುತ್ತಿದ್ದುದು ಯಾಕೆ ? ಕಾರಿನಲ್ಲಿದ್ದವರು ಯಾರು ? ಎಂಬ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಕೇರಳ ರಾಜ್ಯದ ಗಡಿಭಾಗವಾದ ವಿಟ್ಲ ಪರಿಸರದಲ್ಲಿ ಸಮಾಜ ಘಾತಕ ಚಟುವಟಿಕೆಗಳನ್ನು ನಡೆಸಲು ಯೋಜನೆ ರೂಪಿಸಲಾಗಿತ್ತೇ ಎಂಬ ಸಂಶಯವನ್ನು ಹುಟ್ಟು ಹಾಕಿದೆ.

ಈ ನಿಟ್ಟಿನಲ್ಲಿ ಸ್ಥಳೀಯ ಪೋಲಿಸರು, ಗುಪ್ತಚಾರ ಇಲಾಖೆ ತನಿಖೆ ಆರಂಭಿಸಿದ್ದಾರೆ. ಕಾರಿನ ಅಸಲಿ ವಾರಸುದಾರನ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ.

English summary
Suspicious Delhi registration car was found in an accident condition at the interior of Vitla town here on July 31. The car was found completely in damaged condition. It is said that the car belongs to Jas Jeeth singh of Delhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X