ಸುಳ್ಯ:ದುರ್ಗಾಪರಮೇಶ್ವರಿ ಉತ್ಸವ ಮೂರ್ತಿಯನ್ನೇ ದೋಚಿದ ಕಳ್ಳರು
ಮಂಗಳೂರು, ಸೆಪ್ಟೆಂಬರ್ 01 : ಜಿಲ್ಲೆಯ ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಮರಕಟ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.
ನಿನ್ನೆ ರಾತ್ರಿ ಕಳ್ಳರು ದೇವಸ್ಥಾನದೊಳಗೆ ನುಗ್ಗಿ ದೇವರ ಆಭರಣಗಳು, ಕಾಣಿಕೆ ಹುಂಡಿ, ದೇವರ ಉತ್ಸವ ಮೂರ್ತಿ ಸೇರಿದಂತೆ ಹಲವು ಬೆಲೆಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ.

ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿರುವ ಉತ್ಸವ ಮೂರ್ತಿಯು ಸುಮಾರು 1600 ವರ್ಷಗಳ ಹಳೆಯ ಮೂರ್ತಿಯಾಗಿದೆ ಎನ್ನಲಾಗುತ್ತಿದ್ದು, ಪುರಾತನ ಕಾಲದ ಮೂರ್ತಿಯಾಗಿರುವುದರಿಂದ ಬೆಲೆಕಟ್ಟಲಾಗದಂತಹ ಸೊತ್ತು ಇದೀಗ ಕಳ್ಳರ ಕೈ ಸೇರಿದೆ.
ಇಂದು ಮುಂಜಾನೆ ದೇವಸ್ಥಾನದಲ್ಲಿ ಪೂಜೆ ನೆರವೇರಿಸಲು ಬಂದ ಸಿಬ್ಬಂದಿಗಳಿಂದ ಈ ವಿಚಾರ ಬೆಳಕಿಗೆ ಬಂದಿದ್ದು, ಕೂಡಲೇ ಸುಬ್ರಮಣ್ಯ ಪೋಲೀಸರಿಗೆ ಮಾಹಿತಿ ನೀಡಲಾಗಿದೆ.
ದೇವಸ್ಥಾನದಲ್ಲಿ ಸಿ.ಸಿ.ಕ್ಯಾಮಾರಾ ಹಾಕಲಾಗಿದ್ದು, ಕಳ್ಳರು ಸಿ.ಸಿ.ಕ್ಯಾಮಾರಾವನ್ನು ಮೊದಲು ಪುಡಿಗೈದು ಈ ಕೃತ್ಯ ಎಸಗಿದ್ದಾರೆ.
More From
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ












Click it and Unblock the Notifications