ಯೇನೆಪೋಯ ಶಾಲೆಯ 6 ವಿದ್ಯಾರ್ಥಿಗಳು ಅಮೆರಿಕ ಸಮ್ಮೇಳನಕ್ಕೆ ಆಯ್ಕೆ
ಮಂಗಳೂರು, ಆಗಸ್ಟ್ 10: ನಗರದ ಯೆನೆಪೋಯಾ ಶಾಲೆಯ ಆರು ವಿದ್ಯಾರ್ಥಿಗಳ ತಂಡ ಮುಂಬರುವ ಐಐಎಂಯುಎನ್ (ಇಂಡಿಯನ್ ಇಂಟರ್ನ್ಯಾಷನಲ್ ಮಾಡೆಲ್ ಯುನೈಟೆಡ್ ನೇಷನ್ಸ್) ಯು.ಎಸ್.ಎ 2017 ಸಮ್ಮೇಳನದಲ್ಲಿ ಭಾಗವಹಿಸಲು ಆಯ್ಕೆಯಾಗಿದೆ.
ಸಮ್ಮೇಳನದಲ್ಲಿ ಭಾರತದ ವಿವಿಧ ಭಾಗಗಳ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಆಗಸ್ಟ್ ನಲ್ಲಿ ನ್ಯೂಯಾರ್ಕ್ ನಲ್ಲಿರುವ ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಇದನ್ನು ಆಯೋಜಿಸಲಾಗಿದೆ.

ಅಮೇರಿಕಾದಲ್ಲಿ ವಿದ್ಯಾರ್ಥಿಗಳು ಮೂರು ದಿನಗಳ ಸಮ್ಮೇಳನದಲ್ಲಿ ಭಾಗವಹಿಸಲಿದ್ದು ಅದಾದ ನಂತರ ನ್ಯೂಯಾರ್ಕ್, ವಾಷಿಂಗ್ಟನ್ ಡಿ.ಸಿ ಮತ್ತು ಒರ್ಲ್ಯಾಂಡೊಗಳಿಗೆ ಭೇಟಿ ನೀಡಲಿದ್ದಾರೆ. ವಿದ್ಯಾರ್ಥಿಗಳ ಅಮೆರಿಕಾ ಭೇಟಿ ಶೈಕ್ಷಣಿಕ ಪ್ರವಾಸವನ್ನೂ ಒಳಗೊಂಡಿದೆ.
ವಿದ್ಯಾರ್ಥಿಗಳು ವಿವಿಧ ಅಂತಾರಾಷ್ಟ್ರೀಯ ವ್ಯವಹಾರಗಳು ಮತ್ತು ಸಮಸ್ಯೆಗಳ ಬಗ್ಗೆ ಸಮ್ಮೇಳನದಲ್ಲಿ ಚರ್ಚೆ ನಡೆಸಲಿದ್ದಾರೆ. ಹಾಗೂ ಇದಕ್ಕೆ ತಮ್ಮ ಪರಿಮಿತಿಯ ವ್ಯಾಪ್ತಿತಿಯಲ್ಲಿ ಹೊಸ ಪರಿಹಾರಗಳನ್ನು ಒದಗಿಸಲಿದ್ದಾರೆ.
ಯೆನೆಪೋಯಾ ಶಾಲೆಯ 10ನೆ ತರಗತಿಯ ವಿದ್ಯಾರ್ಥಿಗಳಾದ ಶೋಯಿಬ್ ಶಿಕ್ ಮುಹಮ್ಮದ್, ಅಂಜಲಿ ಮಾರಿಯಾ ಅಗಸ್ಟೀನ್, ಕ್ಯಾರೋಲಿನ್ ಕ್ಯಾಸ್ಟೆಲಿನೊ, 9ನೆ ತರಗತಿಯ ದ್ರೂವ್ ಕೆ. ಷಾ ಮತ್ತು 8ನೆ ತರಗತಿಯ ಇಲ್ಹಾನ್ ಇರ್ಫಾನ್, ವೈಷ್ಣವಿ ರಾವ್ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಇವರಿಗೆ ತಮ್ಮ ಶಿಕ್ಷಕಿ ಮತ್ತು ಮಾರ್ಗದರ್ಶಿಯಾದ ಮರ್ಸಿ ರೇಗೊ ಸಾಥ್ ನೀಡಲಿದ್ದಾರೆ.
"ಇದು ಸಾಮಾಜಿಕ ಮತ್ತು ಆರ್ಥಿಕ ಪ್ರಾಮುಖ್ಯತೆಯ ವಿಷಯಗಳ ಬಗ್ಗೆ ಚರ್ಚಿಸಲು ಮತ್ತು ಪರಿಹಾರ ಕಂಡುಕೊಳ್ಳಲು ಆಯೋಜಿಸಿರುವ ಸಮ್ಮೇಳನವಾಗಿದೆ. ಇದಕ್ಕೆ ನಮ್ಮ ಶಾಲೆಯ ಆರು ವಿದ್ಯಾರ್ಥಿಗಳು ಆಯ್ಕೆಯಾಗಿರುವುದು ಬಹಳ ಸಂತಸದ ವಿಷಯ," ಎಂದು ಸಂಸ್ಥೆ ತಿಳಿಸಿದೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
SSLC ಪರೀಕ್ಷೆಗೆ ಹಾಜರಾತಿ ಶಾಕ್: ನಿಯಮ ಉಲ್ಲಂಘಿಸಿದ 35,000 ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಹನುಮ ಜಯಂತಿ ಮುನ್ನವೇ ಅಯೋಧ್ಯೆಗೆ ಗೌತಮ್ ಅದಾನಿ ಭೇಟಿ: ಪ್ರಾಚೀನ ಗುರುಕುಲಕ್ಕೆ AI ಲ್ಯಾಬ್ ಘೋಷಣೆ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ?












Click it and Unblock the Notifications