64 ವರ್ಷದ ಬಳಿಕ ತೀವ್ರ ಕುಸಿತ ಕಂಡ ಕೆ ಆರ್ ಎಸ್ ನೀರಿನ ಮಟ್ಟ
ಮೈಸೂರು, ಅಕ್ಟೋಬರ್, 28: ಇಲ್ಲಿನ ಕೃಷ್ಣರಾಜ ಸಾಗರ ಜಲಾಶಯ ನೀರಿನ ಮಟ್ಟ ಅಕ್ಟೋಬರ್ ತಿಂಗಳಲ್ಲಿ ದಾಖಲೆ ಪ್ರಮಾಣದಲ್ಲಿ ಕುಸಿತಕಂಡಿದ್ದು, 64ವರ್ಷದ ಬಳಿಕ ಜಲಾಶಯದ ನೀರಿನ ಪ್ರಮಾಣ ತೀವ್ರ ಇಳಿಮುಖವಾಗಿದೆ.
ಅಂಕಿ ಅಂಶಗಳ ಪ್ರಕಾರ 1952 ಅಕ್ಟೋಬರ್ 27ರಂದು 94.40 ಅಡಿ ನೀರಿನ ಸಂಗ್ರಹವಾಗಿತ್ತು. ಇದಾದ ಬಳಿಕ ಇದೇ ಮೊದಲ ಬಾರಿಗೆ ಅಂದರೆ ಈ ವರ್ಷ ಗುರುವಾರಕ್ಕೆ (ಅ.27) 79 ಅಡಿ ನೀರು ಸಂಗ್ರಹವಾಗಿದೆ. (ಗರಿಷ್ಠ ಮಟ್ಟ 124.80)

ಈ ಬಾರಿ ಮುಂಗಾರು ಕೈಕೊಟ್ಟಿದ್ದರಿಂದಾಗಿ ಕಾವೇರಿ ಜಲಾನಯನ ಪ್ರದೇಶಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೆ ಇರುವುದರಿಂದ ಅಣೆಕಟ್ಟೆಗಳಲ್ಲಿ ನೀರು ಸಂಗ್ರಹವಾಗಿಲ್ಲ.
ಬಿದ್ದ ಅಲ್ಪ ಸ್ವಲ್ಪ ಮಳೆಯಿಂದಾಗಿ ಈ ಬಾರಿ ಜಲಾಶಯದಲ್ಲಿ ನೂರು ಅಡಿ ನೀರು ಸಂಗ್ರವಾಗುವ ನಿರೀಕ್ಷೆ ಇತ್ತು. ಆದರೆ ಆಗಸ್ಟ್ ತಿಂಗಳಲ್ಲಿ ಸಂಗ್ರಹವಾದ 99.50 ಅಡಿ ನೀರು ಗರಿಷ್ಠ ಮಟ್ಟವಾಗಿದೆ.
ಇದಲ್ಲದೇ ತಮಿಳುನಾಡಿನ ಸಾಂಬಾ ಬೆಳೆಗೆ ಜಲಾಶಯದಿಂದ ನೀರು ಹರಿಸುವಂತೆ ಸರ್ವೋಚ್ಛ ನ್ಯಾಯಲಯ ಆದೇಶ ನೀಡಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೀರು ಹರಿಸಿದ್ದರಿಂದ ಜಲಶಾಯದ ನೀರಿನ ಮಟ್ಟ ಕಡಿಮೆಯಾಗುವುದಕ್ಕೆ ಪ್ರಮುಖ ಕಾರಣವಾಗಿದೆ.
ಪ್ರಸ್ತುತ ಲಭ್ಯವಿರುವ 10.5 ಟಿಎಂಸಿ ನೀರಿನಲ್ಲಿ 2 ಟಿಎಂಸಿ ನೀರು ಮತ್ರ ಬೆಳೆಗೆ ಕೊಡಬಹುದಾಗಿದ್ದು, ಉಳಿದ 8.5ಟಿಎಂಸಿ ನೀರಿನಲ್ಲಿ 4 ಟಿಎಂಸಿ ನೀರನ್ನು ಕುಡಿಯಲು ಬಳಸಬಹುದಾಗಿದೆ.
ಉಳಿದ 4.5ಟಿಎಂಸಿ ನೀರು ಡೆಡ್ ಸ್ಟೋರೇಜ್ ಆಗಿದ್ದು, ಬಳಸಲು ಸಾಧ್ಯವಿಲ್ಲ. ಕಳೆದ ವರ್ಷ ಅಕ್ಟೋಬರ್ ನಲ್ಲಿ ಅ.27ರಂದು 105.29 ಅಡಿ ನೀರು ಸಂಗ್ರಹವಾಗಿತ್ತು. ಅದಕ್ಕೆ ಹೋಲಿಸಿದರೆ ಈ ವರ್ಷ 26 ಅಡಿ ಅಂದರೆ 16ಟಿಎಂಸಿ ನೀರು ಕಡಿಮೆಯಾಗಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications