ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉ.ಪ್ರ. ಗೆಲುವು: ಮೈಸೂರು ಬಿಜೆಪಿಯಲ್ಲಿ ಸಂಭ್ರಮಾಚರಣೆ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಮಾರ್ಚ್ 11; ಭಾರೀ ಕುತೂಹಲ ಕೆರಳಿಸಿದ್ದ ಪಂಚ ರಾಜ್ಯಗಳ ಚುನಾವಣೆಯಲ್ಲಿ ಉತ್ತರಪ್ರದೇಶ ಹಾಗೂ ಉತ್ತರಾಖಂಡದಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದರಿಂದಾಗಿ ಮೈಸೂರು ನಗರ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿಹಂಚಿ ಸಂಭ್ರಮಿಸಿದರು.

ಗೋವಾ</a> | <a title=ಮಣಿಪುರ | ಪಂಜಾಬ್ | ಉತ್ತರಪ್ರದೇಶ | ಉತ್ತರಾಖಂಡ್" title="ಗೋವಾ | ಮಣಿಪುರ | ಪಂಜಾಬ್ | ಉತ್ತರಪ್ರದೇಶ | ಉತ್ತರಾಖಂಡ್" />ಗೋವಾ | ಮಣಿಪುರ | ಪಂಜಾಬ್ | ಉತ್ತರಪ್ರದೇಶ | ಉತ್ತರಾಖಂಡ್

ಮೈಸೂರಿನ ಅಗ್ರಹಾರ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿಗೆ ಜೈಕಾರ ಕೂಗಿದರು. ಬಳಿಕ ಪಟಾಕಿ ಸಿಡಿಸಿ, ಸಿಹಿಹಂಚುವ ಮೂಲಕ ತಮ್ಮ ಸಂತಸವನ್ನು ವ್ಯಕ್ತಪಡಿಸಿದರು.[ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿರುಗಾಳಿ ಎಬ್ಬಿಸಿದ ಮೋದಿ 9 ಹೇಳಿಕೆ]

BJP activists celebrating success in Mysore

ಈ ಸಂದರ್ಭ ಮಾತನಾಡಿದ ಕಾರ್ಯಕರ್ತರು ಮೋದಿಯವರು ಕಾಂಗ್ರೆಸ್ ಮುಕ್ತ ಭಾರತವನ್ನು ನಿರ್ಮಾಣ ಮಾಡಬೇಕೆನ್ನುವ ಸದಾಶಯ ಹೊಂದಿದ್ದು, ಅದರಂತೆ ಜನತೆ ಬಿಜೆಪಿಯತ್ತ ಒಲವು ತೋರುತ್ತಿದ್ದಾರೆ. ಸ್ವಾತಂತ್ರ್ಯಾನಂತರದಿಂದ ಕಾಂಗ್ರೆಸ್ ಆಡಳಿತ ದೇಶದಲ್ಲಿ ಯಾವುದೇ ಬದಲಾವಣೆಯನ್ನೂ ತಂದಿಲ್ಲ. ಈಗ ದೇಶದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಜನತೆ ಬಿಜೆಪಿಯತ್ತ ಒಲವು ತೋರಿದ್ದಾರೆ ಎಂದರು.

ಸುಮಾರು ಐವತ್ತಕ್ಕೂ ಅಧಿಕ ಕಾರ್ಯಕರ್ತರು ಸಂಭ್ರಮದಲ್ಲಿ ಪಾಲ್ಗೊಂಡಿದ್ದರು.

English summary
BJP activists celebrating success of the party in Uttar Pradesh Election by sharing sweets . More than 50 workers gatherd in the event.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X