ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ಕೊಟ್ಟ ಸಿದ್ದರಾಮಯ್ಯ
ಮೈಸೂರು, ಮೇ 09 : ಅಕ್ಷಯ ತದಿಗೆ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ಕೊಟ್ಟರು. ' ಮೇ ತಿಂಗಳ ಅಂತ್ಯದೊಳಗೆ ಸಂಪುಟ ಪುನಾರಚನೆ ಮಾಡುತ್ತೇವೆ ' ಎಂದು ಹೇಳಿದರು.
ಸೋಮವಾರ
ಮೈಸೂರು
ವಿಮಾನ
ನಿಲ್ದಾಣದಲ್ಲಿ
ಮಾತನಾಡಿದ
ಸಿದ್ದರಾಮಯ್ಯ
ಅವರು,
'ಶೀಘ್ರವೇ
ಸಂಪುಟ
ಪುನಾರಚನೆ
ಮಾಡುತ್ತೇವೆ.
ಈ
ವೇಳೆ
ಕೆಲವು
ಸಚಿವರನ್ನು
ಕೈ
ಬಿಟ್ಟು,
ಹೊಸಬರಿಗೆ
ಅವಕಾಶ
ನೀಡುತ್ತೇವೆ'
ಎಂದರು.
[ಸಚಿವ
ಸ್ಥಾನ
ಬೇಕಾದರೆ
ಮುಂಗಾರು
ಮಳೆ
ಬರಬೇಕು!]
'ಮೂರು ವರ್ಷಗಳ ಆಡಳಿತ ತೃಪ್ತಿ ತಂದಿದೆ' ಎಂದು ಹೇಳಿ ಸಿದ್ದರಾಮಯ್ಯ ಅವರು, 'ನಮ್ಮ ಸರ್ಕಾರದ ವಿರುದ್ಧ ಯಾವುದೇ ಗುರುತರ ಆರೋಪಗಳಿಲ್ಲ. ಕೇವಲ ರಾಜಕೀಯ ಉದ್ದೇಶಕ್ಕಾಗಿ ಆರೋಪ ಮಾಡಲಾಗಿದೆ. ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳ ಜೊತೆ ಹೊಸ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದೇವೆ' ಎಂದು ಹೇಳಿದರು. [ಸಂಪುಟ ಪುನಾಚರನೆ, 10ಕ್ಕೂ ಹೆಚ್ಚು ಸಚಿವರ ಬದಲಾವಣೆ]
ಮೂರು ತಿಂಗಳು ವಿಸ್ತರಣೆ : ನಿಗಮ-ಮಂಡಳಿಗಳ ನೇಮಕಾತಿ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ ಅವರು, 'ಹೈಕಮಾಂಡ್ ಸೂಚನೆಯಂತೆ ನಿಗಮ ಮಂಡಳಿ ಅಧ್ಯಕ್ಷರ ಅವಧಿಯನ್ನು 3 ತಿಂಗಳು ವಿಸ್ತರಿಸಲಾಗಿದೆ. 3 ತಿಂಗಳ ಬಳಿಕ ಹೊಸಬರಿಗೆ ಅವಕಾಶ ನೀಡುತ್ತೇವೆ' ಎಂದರು. ['ಯುಗಾದಿ ಬಳಿಕ ಹೊಸ ಖುರ್ಚಿ, ಹೊಸ ಮಂತ್ರಿ ನೋಡೋಣ']
ಮಳೆ ಬರಲಿ ಎಂದು ಹೇಳಿದ್ದರು : ಏಪ್ರಿಲ್ 22 ರಂದು ಮಾಧ್ಯಮಗಳ ಜೊತೆ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 'ರಾಜ್ಯದಲ್ಲಿನ ಭೀಕರ ಬರಗಾಲದ ಪರಿಸ್ಥಿತಿ ಹಿನ್ನಲೆಯಲ್ಲಿ ಬಹು ನಿರೀಕ್ಷಿತ ಸಂಪುಟ ಪುನಾರಚನೆಯನ್ನು ಮುಂದೂಡಲಾಗಿದೆ. ಮುಂದಿನ ದಿನಗಳಲ್ಲಿ ಈ ವಿಷಯದ ಕುರಿತು ಚಿಂತನೆ ನಡೆಸಲಾಗುತ್ತದೆ' ಎಂದು ಹೇಳಿದ್ದರು.
'ರಾಜ್ಯದಲ್ಲಿ ಭೀಕರ ಬರಗಾಲವಿದೆ. ಬರ ಪರಿಹಾರ ಕಾರ್ಯಕ್ಕೆ ಈಗ ಆದ್ಯತೆ ನೀಡಬೇಕಾಗಿದೆ. ತಾವು ಸಂಪುಟ ಸೇರಬೇಕೆಂಬ ಹಿನ್ನಲೆಯಲ್ಲಿ ಶಾಸಕರು ಒತ್ತಡ ಹೇರುತ್ತಿರಬಹುದು. ಆದರೆ, ಸಂಪುಟ ಪುನಾರಚನೆಗೆ ಇದು ಸಕಾಲವಲ್ಲ ಎಂದು' ಮುಖ್ಯಮಂತ್ರಿಗಳು ತಿಳಿಸಿದ್ದರು.