ಮೈಸೂರು ನಗರ ಪ್ರದಕ್ಷಿಣೆ ಮಾಡಿದ ಸಿದ್ದರಾಮಯ್ಯ
ಮೈಸೂರು, ಆಗಸ್ಟ್ 30 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಮಂಗಳವಾರ ನಗರ ಪ್ರದಕ್ಷಿಣೆ ನಡೆಸಿದರು. ಶಿಥಿಲಾವಸ್ಥೆಯಲ್ಲಿರುವ ಲ್ಯಾನ್ಸ್ ಡೌನ್ ಕಟ್ಟಡಕ್ಕೆ ಭೇಟಿ ನೀಡಿ, ದುರಸ್ತಿ ಕಾಮಗಾರಿಗಳನ್ನು ವೀಕ್ಷಿಸಿದರು.
ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮೈಸೂರು ನಗರ ಪ್ರದಕ್ಷಿಣೆ ನಡೆಸಿದರು. ಭಾನುವಾರ ಕುಸಿದಿದ್ದ ದೇವರಾಜ ಮಾರುಕಟ್ಟೆ ಕಟ್ಟಡದ ಸ್ಥಳಕ್ಕೆ ಭೇಟಿ ನೀಡಿ ದುರಸ್ತಿ ಕಾಮಗಾರಿಯನ್ನು ಪರಿಶೀಲಿಸಿದರು.[ಮೈಸೂರಿನ ದೇವರಾಜ ಮಾರುಕಟ್ಟೆ ಕುಸಿತ]
ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ ಅವರು, 'ಚನ್ನೈನ ಐಐಟಿ ತಜ್ಞರು ವರದಿ ನೀಡಿದ ಬಳಿಕ ಕಟ್ಟಡ ನೆಲಸಮ ಕುರಿತು ನಿರ್ಧಾರ ಕೈಗೊಳ್ಳುವುದಾಗಿ' ಹೇಳಿದರು.
English summary
Karnataka Chief Minister Siddaramaiah inspected Mysuru city development works on August 30, 2016.