ಮಾಜಿ ಸಂಸದ ಎಚ್.ವಿಶ್ವನಾಥ್ ಜೆಡಿಎಸ್ ಸೇರ್ಪಡೆ?
ಕಾಂಗ್ರೆಸ್ ಪಕ್ಷದಲ್ಲಿ ತಮ್ಮನ್ನು ಕಡೆಗಣಿಸುತ್ತಿದ್ದಾರೆಂಬ ಕಾರಣಕ್ಕೆ ಮಾಜಿ ಸಂಸದ ಎಚ್.ವಿಶ್ವನಾಥ್ ಜೆ.ಡಿ.ಎಸ್ ಸೇರುತ್ತಾರೆ ಎಂಬ ಮಾತು ಎಲ್ಲೆಡೆ ಕೇಳಿಬರುತ್ತಿದೆ.
ಮೈಸೂರು, ಮಾರ್ಚ್ 18: ಮಾಜಿ ಸಂಸದ ಎಚ್. ವಿಶ್ವನಾಥ್ ಜೆಡಿ ಎಸ್ ಸೇರಲಿದ್ದಾರಾ? ಹಾಗೊಂದು ಸುದ್ದಿ ಹರಿದಾಡುತ್ತಿದೆ.
ಆದರೆ ಈ ಬಗ್ಗೆ ಪ್ರತಿಕ್ರಿಯಿಸಿದ ಎಚ್.ವಿಶ್ವನಾಥ್ ಜೆಡಿ ಎಸ್ ನನ್ನನ್ನು ಆಹ್ವಾನಿಸುತ್ತಿರುವುದು ನಿಜ, ಹಾಗಂತ ಕಾಂಗ್ರೆಸ್ ನನ್ನನ್ನು ಕಡೆಗಣಿಸಿಲ್ಲ. ಈ ವದಂತಿ ಸುಳ್ಳು ಎಂದಿದ್ದಾರೆ. [ಒಬ್ಬರ ಹಿಂದೊಬ್ಬರಂತೆ ಕಾಂಗ್ರೆಸ್ ತೊರೆಯುತ್ತಿರುವವರು]
ಆದರೂ ಕಾಂಗ್ರೆಸ್ ಪಕ್ಷದಲ್ಲಿ ತಮ್ಮನ್ನು ಕಡೆಗಣಿಸುತ್ತಿದ್ದಾರೆಂಬ ಕಾರಣಕ್ಕೆ ಮಾಜಿ ಸಂಸದ ಎಚ್.ವಿಶ್ವನಾಥ್ ಜೆ.ಡಿ.ಎಸ್ ಸೇರುತ್ತಾರೆ ಎಂಬ ಮಾತು ಎಲ್ಲೆಡೆ ಕೇಳಿಬರುತ್ತಿದೆ. ಈ ಕಾರಣಕ್ಕೆಂದೇ ಅವರು ಇತ್ತೀಚೆಗೆ ಕಾಂಗ್ರೆಸ್ ನಾಯಕರ ಬಗ್ಗೆ ಸಾರ್ವಜನಿಕವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು ಎಂದೂ ಹೇಳಲಾಗುತ್ತಿದೆ. [ನನಗೆ ನೋಟೀಸ್ ನೀಡುವ ಅಧಿಕಾರ ನಿಮಗೆ ಕೊಟ್ಟವರ್ಯಾರು?: ಎಚ್.ವಿಶ್ವನಾಥ್ ಆಕ್ರೋಶ]
ಶಾಸಕ ಸಾ ರಾ ಮಹೇಶ್, ಸಂಸದ ಪುಟ್ಟರಾಜು ನೇತೃತ್ವದಲ್ಲಿ ವಿಶ್ವನಾಥ್ ರನ್ನು ತೆನೆ ಪಕ್ಷಕ್ಕೆ ಕರೆತರಲು ಕಾರ್ಯತಂತ್ರ ರೂಪಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.