ಮೈಸೂರಿನಲ್ಲಿ ಭೀಕರ ರಸ್ತೆ ಅಪಘಾತ: ಮೂವರ ದುರ್ಮರಣ
ಮೈಸೂರು, ಜನವರಿ 31: ಟ್ಯಾಂಕರ್ ಮತ್ತು ದ್ವಿಚಕ್ರವಾಹನ ಮುಖಾಮುಖಿ ಡಿಕ್ಕಿಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತರಾದ ಘಟನೆ ಎಚ್.ಡಿ.ಕೋಟೆ ಬಳಿ ಹುಣಸೂರು ರಸ್ತೆಯ ಬೋಚಿಕಟ್ಟೆ ಬಳಿ ಜರುಗಿದೆ.
ಶ್ರೀನಿವಾಸ್(35), ಉಮಾ(30), ಚೈತ್ರ(9) ಮೃತ ದುರ್ದೈವಿಗಳು. ಎಚ್.ಡಿ.ಕೋಟೆ ತಾಲೂಕಿನ ನಂಜನಾಯಕನಹಳ್ಳಿಯ ಈ ದಂಪತಿಗಳು ಮತ್ತು ಮಗು ಊರಿಗೆ ಹೋಗಲೆಂದು ಹುಣಸೂರು ರಸ್ತೆಯ ಬೋಚಿಕಟ್ಟೆ ರಸ್ತೆಯಲ್ಲಿ ತಮ್ಮ ದ್ವಿಚಕ್ರವಾಹನದಲ್ಲಿ ಬರುತ್ತಿದ್ದಾಗ ಎದುರಿನಿಂದ ಬಂದ ಟ್ಯಾಂಕರ್ ಪರಸ್ಪರ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಬೈಕಿನಲ್ಲಿದ್ದ ಕುಟುಂಬ ಸ್ಥಳದಲ್ಲಿಯೇ ಮೃತವಾಗಿದೆ.[ಕೋಲಾರದಲ್ಲಿ ಕಾರು-ಬೈಕ್ ಡಿಕ್ಕಿ: ಮೂವರ ದುರ್ಮರಣ]
ಇನ್ನು ಟ್ಯಾಂಕರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಅಲ್ಲದೆ ಎಚ್.ಡಿ.ಕೋಟೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಶವಗಳನ್ನು ಎಚ್ ಡಿ ಕೋಟೆ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಪರಿವಾರಕ್ಕೆ ನೀಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.