ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೆಎಸ್ಆರ್ಟಿಸಿ ಬಸ್ ಹರಿದು ಮೈಸೂರಿನಲ್ಲಿ ಎರಡು ಬಲಿ

ನಿಂತಿದ್ದ ದ್ವಿಚಕ್ರ ವಾಹನದಲ್ಲಿ ಕುಳಿತು ಮಾತನಾಡುತ್ತಿದ್ದ ಈರ್ವರ ಮೇಲೆ ಕೆಎಸ್ಆರ್ಟಿಸಿ ಬಸ್ ಹರಿದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾದ ಘಟನೆ ಮೈಸೂರಿನಲ್ಲಿ ನಡೆದಿದೆ.

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಏಪ್ರಿಲ್ 24: ನಿಂತಿದ್ದ ದ್ವಿಚಕ್ರ ವಾಹನದಲ್ಲಿ ಕುಳಿತು ಮಾತನಾಡುತ್ತಿದ್ದ ಈರ್ವರ ಮೇಲೆ ಕೆಎಸ್ಆರ್ಟಿಸಿ ಬಸ್ ಹರಿದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾದ ಘಟನೆ ಮೈಸೂರಿನ ಬನ್ನೂರು ರಿಂಗ್ ರಸ್ತೆಯಲ್ಲಿ ನಡೆದಿದೆ.

ಸಾತಗಳ್ಳಿ ಕಡೆಯಿಂದ ಕೊಲಂಬಿಯಾ ಏಷ್ಯಾ ಕಡೆಗೆ ಚಲಿಸುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಎದುರಿನಿಂದ ಬರುತ್ತಿದ್ದ ಲಾರಿಗೆ ಮುಖಾಮುಖಿಯಾಗಿತ್ತು. ಲಾರಿಗೆ ತಾಕಿ ಅನಾಹುತವಾಗದಂತೆ ತಪ್ಪಿಸುವ ಧಾವಂತದಲ್ಲಿ ಚಾಲಕ ಬಸ್ಸನ್ನು ಎಡಕ್ಕೆ ತಿರುಗಿಸಿದ್ದಾನೆ.[ನಿರ್ದೇಶಕ ಪುಟ್ಟಣ್ಣ ಕಣಗಾಲ್ ಮನೆಯಲ್ಲಿ ಕಳ್ಳತನ]

In a tragic accident two men dies in Mysuru

ಆದರೆ ಅಷ್ಟರಲ್ಲಾಗಲೇ ಲಾರಿ ಬಂದು ಬಸ್ಸಿಗೆ ಗುದ್ದಿದ ಪರಿಣಾಮ, ಬಸ್ಸು ಹತ್ತಿರದ ಪೆಟ್ಟಿಗೆ ಅಂಗಡಿ, ವಿದ್ಯುತ್ ಕಂಬಗಳಿಗೆ ಗುದ್ದಿದ್ದಲ್ಲದೆ, ರಸ್ತೆ ಬದಿಯಲ್ಲಿ ಮಾತನಾಡುತ್ತ ನಿಂತಿದ್ದ ಇಬ್ಬರು ಸವಾರರ ಮೇಲೆ ನುಗ್ಗಿದೆ. ಬಸ್ ಹರಿದ ಪರಿಣಾಮ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ ಸಿದ್ದಾರ್ಥ ನಗರ ಸಂಚಾರಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

English summary
In a tragic accident two men died in Mysuru. The accident took place in Bannur road, Mysuru between KSRTC bus and a truck.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X