ಕಾಂಗ್ರೆಸ್ ನಾಯಕರನ್ನೇ ಗುರಿಯಾಗಿಸಿದ ಐಟಿ ದಾಳಿ ಖಂಡನಾರ್ಹ: ಸಿದ್ದು
Recommended Video

ಮೈಸೂರು, ಆಗಸ್ಟ್ 30: 'ಕಾಂಗ್ರೆಸ್ ನಾಯಕರನ್ನೇ ಹುಡುಕಿ ಹುಡುಕಿ ಐಟಿ ಅಧಿಕಾರಿಗಳು ದಾಳಿ ನಡೆಸುತ್ತಿರುವುದು ಸರಿಯಲ್ಲ. ಇದು ಚುನಾವಣಾ ಸಂದರ್ಭದಲ್ಲಿ ಆತ್ಮಸ್ಥೈರ್ಯ ಕುಗ್ಗಿಸುವ ಯತ್ನ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮೈಸೂರಿನಲ್ಲಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಆಪ್ತ, ಕೆಪಿಸಿಸಿ ಕಾರ್ಯದರ್ಶಿ ವಿಜಯ ಮುಳಗುಂದ ನಿವಾಸದ ಮೇಲೆ ಐಟಿ ದಾಳಿ ಪ್ರಕರಣ ಕುರಿತು ಮಾತನಾಡಿದ ಅವರು, 'ಐಟಿ ಅಧಿಕಾರಿಗಳ ಬಳಿ ಮಾಹಿತಿ ಇರುತ್ತೆ. ಅವರು ದಾಳಿ ಮಾಡಲಿ ಅದಕ್ಕೆ ನಮ್ಮ ಅಭ್ಯಂತರವಿಲ್ಲ. ಆದರೆ ಕಾಂಗ್ರೆಸ್ ನಾಯಕರನ್ನೆ ಹುಡುಕಿ ಹುಡುಕಿ ದಾಳಿ ನಡೆಸುತ್ತಿರುವುದು ಸರಿಯಲ್ಲ. ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು ಐಟಿ ದಾಳಿ ನಡೆಸುತ್ತಿರುವುದು ರಾಜಕೀಯ ದುರುದ್ದೇಶದಿಂದ ಕೂಡಿದೆ' ಎಂದರು.

ಗೋವಿಂದ ಕಾರಜೋಳ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ನೆಹರು ಕುಟುಂಬದಲ್ಲಿ ಆಗಿರುವಷ್ಟು ಅಂತರ್ ಧರ್ಮೀಯ ವಿವಾಹಗಳು ಬೇರೆ ಎಲ್ಲಿಯೂ ಆಗಿಲ್ಲ. ಇಂದಿರಾಗಾಂಧಿ, ರಾಜೀವ್ ಗಾಂಧೀಜಿಯವರು ಅನ್ಯ ಧರ್ಮೀಯರನ್ನು ಮದುವೆಯಾಗಿದ್ದಾರೆ. ರಾಹುಲ್ ಗಾಂಧಿಗೆ ದಲಿತ ಕನ್ಯೆ ಕೊಡುವ ವಿಚಾರ ಈಗ ಅನವಶ್ಯಕ ಎಂದಿದ್ದಾರೆ. ಬಿಜೆಪಿ ನಾಯಕರಿಗೆ ಈ ಬಗ್ಗೆ ಪ್ರಶ್ನಿಸಲು ಯಾವುದೇ ರೀತಿಯ ನೈತಿಕತೆಯಿಲ್ಲ, ಬಿಜೆಪಿ ನಾಯಕರಿಂದ ಪಾಠ ಕಲಿಯುವ ಅಗತ್ಯವಿಲ್ಲ ಎಂದು ತಿರುಗೇಟು ನೀಡಿದರು.
ಅಹವಾಲು ಸ್ವೀಕಾರ
ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ವಾಸ್ತವ್ಯ ಹೂಡಿರುವ ಹಿನ್ನೆಲೆಯಲ್ಲಿ ಮೈಸೂರಿನ ಟಿ.ಕೆ ಬಡಾವಣೆಯಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸದ ಬಳಿ ನೂರಾರು ಮಂದಿ ಜಮಾಯಿಸಿ ಅಹವಾಲು ನೀಡಿದರು.
ಹಲವರು ಸಿ.ಎಂ ಸಿದ್ದರಾಮಯ್ಯ ನಿವಾಸದೊಳಕ್ಕೆ ಹೋಗಲು ಯತ್ನಿಸಿದ ವೇಳೆ ನೂಕುನುಗ್ಗಲು ಉಂಟಾಗಿತ್ತು. ಪರಿಸ್ಥಿತಿ ನಿಯಂತ್ರಿಸುವ ವೇಳೆ ಪೊಲೀಸ್ ಪೇದೆಯೋರ್ವರು ಅವಾಚ್ಯ ಶಬ್ದ ಬಳಕೆ ಮಾಡಿದರು. ಪೊಲೀಸ್ ಪೇದೆ ಅವಾಚ್ಯ ಶಬ್ದ ಬಳಸಿದ್ದರಿಂದ ಸಾರ್ವಜನಿಕರು ಕುಪಿತಗೊಂಡಿದ್ದರು. ಪೊಲೀಸ್ ಪೇದೆಯನ್ನು ಜನರು ತರಾಟೆಗೆ ತೆಗೆದುಕೊಂಡರು. ಬಳಿಕ ಪೊಲೀಸ್ ಪೇದೆ ಏನು ನಡೆದಿಲ್ಲವೇನೋ ಎಂಬಂತೆ ಸದ್ದಿಲ್ಲದೆ ಜಾಗ ಖಾಲಿ ಮಾಡಿದರು. ನೂರಾರು ಜನರಿಂದ ಅಹವಾಲು ಸ್ವೀಕರಿಸಿದ ಮುಖ್ಯಮಂತ್ರಿಗಳು ಸಮಸ್ಯೆಗಳನ್ನು ಪರಿಹರಿಸುವ ಭರವಸೆಯನ್ನು ನೀಡಿದರು.
-
By Election: ಒಬ್ಬರಿಂದ ಪಕ್ಷ ಗೆಲ್ಲಲ್ಲ, ಇದು ಕಾಂಗ್ರೆಸ್ ಸಿದ್ಧಾಂತಕ್ಕೆ ಸಿಗುವ ಜಯ: ಸಲೀಂ ಅಹ್ಮದ್ ಟಾಂಗ್ ಕೊಟ್ಟಿದ್ಯಾರಿಗೆ? -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು












Click it and Unblock the Notifications