ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಂಬಳ ಇರಲಿ, ಪನಿಕುಲ್ಲನೆ ಬೇಡ: ದೇವನೂರು ಮಹಾದೇವ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಜನವರಿ 27 : ನಾಡಿನ ಹಿರಿಯ ಪ್ರಗತಿಪರ ಚಿಂತಕ ಹಾಗೂ ಬಂಡಾಯ ಸಾಹಿತಿ ದೇವನೂರ ಮಹಾದೇವ ಕಂಬಳ ಆಟ ಇರಲಿ, 'ಪನಿಕುಲ್ಲನೆ' ಎನ್ನುವ ಅಜಲು ಪದ್ದತಿಯ ಎಂಜಲು ಆಚರಣೆ ಬೇಡ ಎಂದು ಆಗ್ರಹಿಸಿದ್ದಾರೆ.

ಕಂಬಳವು ಜಲ್ಲಿಕಟ್ಟಿನಷ್ಟು ಪ್ರಾಣಾಂತಿಕವಾಗಿಲ್ಲ.ಆದರೆ ಕಂಬಳ ಆಟ ಮಾತ್ರವಲ್ಲ, ಈ ಆಟದೊಳಗೆ ಅನಿಷ್ಠ ಪದ್ಧತಿ ಅಡಗಿದೆ. ಅದೆನೆಂದರೆ ಕೊರಗ ಸಮುದಾಯವನ್ನು ಬಳಸಿಕೊಂಡು ಜರುಗುವ 'ಪನಿಕುಲ್ಲನೆ' ಆಚರಣೆ. ಕಂಬಳ ನಡೆಯುವ ಹಿಂದಿನ ದಿನ ಇಡೀ ರಾತ್ರಿ ಕೊರಗ ಸಮುದಾಯವರು ಡೋಲು ಬಾರಿಸುತ್ತ ಕುಣಿಯುವ ಲೈಂಗಿಕ ಆಚರಣೆ ಬೇಡ ಎಂದು ತಿಳಿಸಿದ್ದಾರೆ.[ಕಂಬಳ ಉಳಿಸಲು ಬದ್ಧ-ಪ್ರಮೋದ್ ಮಧ್ವರಾಜ್]

Kambala: let's not kind of parasitic growth methods Devanuru Mahadeva

ಈ ಆಚರಣೆ ಲೈಂಗಿಕ ಚೇಷ್ಟೆಗಳನ್ನು ಒಳಗೊಂಡಿದ್ದು, ಬೆಳಗಾಗುವಾಗ ಕೊರಗ ಸಮುದಾಯದವರು ತಾವೇ ಕೋಣಗಳು ಎಂದು ಆವಾಹಿಸಿಕೊಂಡು ಕಂಬಳದ ಕೆಸರು ಗದ್ದೆಯಲ್ಲಿ ಓಡುತ್ತಾರೆ. ಈ ರೀತಿಯ ಓಟ ಕೋಣಗಳ ಓಟಕ್ಕೆ ಪೂರ್ವಭಾವಿಯಾಗಿ ನಡೆಯುತ್ತದೆ. ಕೊರಗರು ಕೋಣಗಳಾಗಿ ಗದ್ದೆಯಲ್ಲಿ ಓಡುವ ಮೂಲಕ ಗದ್ದೆಯನ್ನು ಕೆಟ್ಟ ಕಣ್ಣಿನಿಂದ ಮುಕ್ತಗೊಳಿಸುತ್ತಾರೆ. ಗದ್ದೆಯನ್ನು ಹೀಗೆ ಮುಕ್ತಗೊಳಿಸಿದ ನಂತರವೇ ಭೂಮಾಲೀಕರ ಕೋಣಗಳು ಕಂಬಳದ ಗದ್ದೆಗೆ ಇಳಿಯುತ್ತವೆ. ಅಂದರೆ ಇದು ಅನಿಷ್ಠ ಕೆಡುಕನ್ನು ಕೊರಗರ ಮೇಲೆ ಆವಾಹಿಸುವ ಅಜಲು ಪದ್ಧತಿಯ ಎಂಜಲು ಆಚರಣೆ.[ಪ್ರಶಸ್ತಿ ವಾಪಸ್ ನೀಡಲಿದ್ದಾರೆ ದೇವನೂರು ಮಹಾದೇವ]

Kambala: let's not kind of parasitic growth methods Devanuru Mahadeva

ಹಾಗೆ ಕಂಬಳದ ಹಿಂದಿನ ದಿನ ರಾತ್ರಿ ಜರುಗುವ ಲೈಂಗಿಕ ಚೇಷ್ಟೆ ಕ್ರಿಯೆಗಳನ್ನು ಫಲವಂತಿಕೆಗಾಗಿ ಅನ್ನುವುದಾದರೆ ಕಂಬಳದ ಸಿರಿವಂತಿಕೆಯನ್ನು ಪ್ರದರ್ಶಿಸುವ ಫಲಾನುಭವಿಗಳಾದ ಭೂಮಾಲೀಕರ ಕುಟುಂಬದ ಸ್ತ್ರೀ ಪುರುಷರು ಇದನ್ನು ಆಚರಿಸಬಾರದೇಕೆ? ಎಂದು ಕೊರಗ ಸಮುದಾಯಕ್ಕೆ ಸೇರದೆ ಇರುವವರು ನಮ್ಮನ್ನು ನಾವೇ ಪ್ರಶ್ನಿಸಿಕೊಳ್ಳಬೇಕಾಗಿದೆ ಎಂದಿದ್ದಾರೆ.

ಅಜಲು ಪದ್ಧತಿಯ ಎಂಜಲಾದ ಪನಿಕುಲ್ಲನೆ ಆಚರಣೆಯನ್ನು ಕೈಬಿಟ್ಟು ಕಂಬಳವನ್ನು ಒಂದು ಆಟವಾಗಿ ಉಳಿಸಿಕೊಳ್ಳಬಹುದೇನೊ. ಇದಕ್ಕೆ ಮೊದಲು ಸರ್ಕಾರ ಅನಿಷ್ಠ ಅಜಲು ಪದ್ಧತಿಯನ್ನು ನಿಷೇಧಿಸುವ ಕಾನೂನನ್ನು ಜಾರಿಗೆ ತಂದು ತನ್ನ ಮಾನಮರ್ಯಾದೆ ಕಾಪಾಡಿಕೊಳ್ಳಬೇಕಾಗಿದೆ ಎಂದು ತಿಳಿಸಿದ್ದಾರೆ.

English summary
The celebration can take place in Kambala. But let's not kind of parasitic growth methods says writer Devanuru Mahadeva in Mysuru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X