ಮಾರುಕಟ್ಟೆಗೆ ಹಣ್ಣುಗಳ ರಾಜ: ತಿನ್ನುವ ಮುನ್ನ ಇರಲಿ ಎಚ್ಚರ!
ಹಣ್ಣುಗಳ ರಾಜ ಮಾವು ಮಾರುಕಟ್ಟೆಗೆ ಲಗ್ಗೆ ಇಟ್ಟಾಗಿದೆ. ಇದು ಮಾವು ಪ್ರಿಯರಿಗೆ ಖುಷಿಯ ಸುದ್ದಿಯಾದರೆ, ಬೆಳೆಗಾರರಿಗೂ ಸಂತಸದ ಸುದ್ದಿ. ಆದರೂ ಕೊಳ್ಳುವ ಮುನ್ನ ಕೆಲ ಎಚ್ಚರಿಕೆ ವಹಿಸಿ.
ಮೈಸೂರು, ಏಪ್ರಿಲ್ 27 - ಹಣ್ಣುಗಳ ರಾಜ ಮಾವು ಮಾರುಕಟ್ಟೆಗೆ ಲಗ್ಗೆ ಇಟ್ಟಾಗಿದೆ. ಇದು ಮಾವು ಪ್ರಿಯರಿಗೆ ಖುಷಿಯ ಸುದ್ದಿಯಾದರೆ, ಬೆಳೆಗಾರರಿಗೂ ಸಂತಸದ ಸುದ್ದಿ. ಮೈಸೂರಿನ ಪ್ರಮುಖ ರಸ್ತೆ ಬದಿಯಲ್ಲಿ, ಹಣ್ಣಿನ ಅಂಗಡಿಗಳಲ್ಲಿ ಜೋಡಿಸಿಟ್ಟ ವಿವಿಧ ಬಗೆಯ ಮಾವಿನ ಹಣ್ಣುಗಳು ಕಾಣಿಸತೊಡಗಿವೆ.
ನಗರದ ವಿವಿಧ ಪ್ರಮುಖ ವೃತ್ತಗಳಲ್ಲಿ ತಳ್ಳುವ ಗಾಡಿಗಳಲ್ಲಿ ಜೋಡಿಸಿಟ್ಟ ಮಾವಿನ ಹಣ್ಣು ಆಕರ್ಷಣೆಯ ಕೇಂದ್ರಬಿಂದುವಾಗಿದೆ. ರಸಪುರಿ ಮಾವಿನಹಣ್ಣು ಕೆ.ಜಿ.ಗೆ 50 ರೂ. ಆಗಿದೆ. ಬಾದಾಮಿ, ಮಲಗೋವಾ, ಮಲ್ಲಿಕಾ ಮದನಪಲ್ಲಿ, ತೋತಾ ಪುರಿ, ನೀಲಂ ಸೇರಿದಂತೆ ವಿವಿಧ ಜಾತಿಯ ಮಾವಿನ ಹಣ್ಣುಗಳು ಹೆಚ್ಚಾಗಿ ಬಂದಿಲ್ಲ. ಅಲ್ಲೊಂದು ಇಲ್ಲೊಂದು ಅಂಗಡಿಗಳಲ್ಲಿ ಮಾತ್ರ ಕಾಣಸಿಗುತ್ತಿವೆ. ಆದರೆ ಬೆಲೆ ಮಾತ್ರ ದುಬಾರಿ! [10 ಸಾವಿರ ಟನ್ ದಾಟಲಿದೆ ಕರ್ನಾಟಕದ ಮಾವು ರಫ್ತು]

ರಾಜ್ಯದಲ್ಲಿ ಬರಗಾಲ ಮತ್ತು ಅಕಾಲಿಕ ಮಳೆಯಿಂದಾಗಿ ಈ ಬಾರಿ ಮಾವು ಬೆಳೆ ಕಡಿಮೆಯಾಗಿದ್ದರೂ, ವಿದೇಶಗಳಿಂದ ಮಾವಿಗೆ ಒಳ್ಳೆ ಬೇಡಿಕೆಗಳು ಬಂದಿವೆ. ಅಂದಾಜು 10 ಸಾವಿರ ಟನ್ ಮಾವು ವಿದೇಶಗಳಿಗೆ ರಫ್ತಾಗುವ ಸಾಧ್ಯತೆ ಇದೆ. ರೈತರು ವರ್ಷವೊಂದಕ್ಕೆ 13-18 ಲಕ್ಷ ಟನ್ ಮಾವು ಬೆಳೆಯುತ್ತಾರೆ. ಇದರಲ್ಲಿ ಕೋಲಾರದ ಪಾಲೇ ಅತೀ ಹೆಚ್ಚಾಗಿದೆ.
ದೇಶದಲ್ಲಿ ಉತ್ತರಪದೇಶ ಮತ್ತು ಆಂಧ್ರ ಹೊರತುಪಡಿಸಿದರೆ ಅತೀ ಹೆಚ್ಚು ಮಾವು ಬೆಳೆಯುವ ರಾಜ್ಯ ಕರ್ನಾಟಕ. ಈ ಬಾರಿ ಮಾತ್ರ ರಾಜ್ಯದಲ್ಲಿ ಅತೀವ ಬರಗಾಲ ಬಂದಿರುವುದರಿಂದ ಕೇವಲ 10 ಲಕ್ಷ ಟನ್ ಬೆಳೆ ಸಿಗಬಹುದು ಎಂದು ಅಂದಾಜು ಮಾಡಲಾಗಿದೆ. ಕಳೆದ ವರ್ಷ 14 ಲಕ್ಷ ಟನ್ ಮಾವು ಉತ್ಪಾದನೆಯಾಗಿತ್ತು. [ಮಾವಿನ ತೋಟದಲ್ಲಿ ಬೇಕೆಂದ ಹಣ್ಣು ಖರೀದಿಸಬೇಕಾ, ಹತ್ತಿ ಬಸ್ಸು..]
ರಸ್ತೆಯಲ್ಲೇ ಮಾವಿನ ಸಂತೆ
ಈ ಮಧ್ಯೆ ಮೈಸೂರಿನಿಂದ ಹುಣಸೂರಿಗೆ ತೆರಳುವ ರಸ್ತೆಯಲ್ಲಿ ಅದಾಗಲೇ 'ಮಾವಿನಸಂತೆ' ಆರಂಭವಾಗಿದೆ. ಮೈಸೂರಿನಿಂದ ಹುಣಸೂರು ಕಡೆಗೆ ತೆರಳುವ ರಾಜ್ಯ ಹೆದ್ದಾರಿ 88ರಲ್ಲಿ ಸುಮಾರು 20 ಕಿ.ಮೀ ದೂರದಲ್ಲಿರುವ ಚಿಕ್ಕಾಡನ 1,500 ಟನ್ ಮಾವಿಗೆ ಬೇಡಿಕೆ ಬಂದಿದೆ. ಕರ್ನಾಟಕದಲ್ಲಿ ಸುಮಾರು 2.2 ಲಕ್ಷ ಹೆಕ್ಟೇರ್ ಭೂಮಿಯಲ್ಲಿ ಮಾವು ಬೆಳೆಯಲಾಗುವ ಹಳ್ಳಿಯೇ ಮಾವಿನಸಂತೆಗೆ ಕೇಂದ್ರ ಬಿಂದು. ಮೈಸೂರಿನಿಂದ ಹುಣಸೂರು ಮಾರ್ಗವಾಗಿ ಸಾಗುವವರು ಚಿಕ್ಕಾಡನಹಳ್ಳಿಯಲ್ಲಿ ತಳ್ಳುವ ಗಾಡಿಗಳಲ್ಲಿ ಕಿಲೋಮೀಟರ್ ಗಟ್ಟಲೆ ವಿವಿಧ ಬಗೆಯ ಮಾವಿನ ಹಣ್ಣುಗಳನ್ನು ಜೋಡಿಸಿಟ್ಟು ಮಾರಾಟ ಮಾಡುವುದನ್ನು ನೋಡುವುದೇ ಒಂದು ಸುಂದರ ದೃಶ್ಯ. ಹಾಗೆ ನೋಡಿದರೆ ಇಲ್ಲಿ ನಡೆಯುವ ಮಾವಿನ ಹಣ್ಣಿನ ಸಂತೆಗೆ ಹಲವು ದಶಕಗಳ ಇತಿಹಾಸವಿದೆ.

ರಾಸಾಯನಿಕ ಬಳಕೆ
ಜನರು ಮಾವನ್ನು ಕೊಳ್ಳುವದಕ್ಕಿಂತ ಮುಂಚಿತವಾಗಿ ಸಾವಿರ ಬಾರಿ ಯೋಚಿಸದುತ್ತಿದ್ದಾರೆ. ಕಾರಣ ಕೆಲ ವ್ಯಾಪಾರಿಗಳು ಮರದಲ್ಲಿರುವ ಕಾಯಿಗಳನ್ನೇ ಕಿತ್ತು ಹಣ್ಣು ಮಾಡಿ ಮಾರಾಟಕ್ಕೆ ಮುಂದಾಗಿರುವುದರಿಂದ ಹಣ್ಣು ಮಾಡಲು ರಾಸಾಯನಿಕ ಬಳಕೆ ಮಾಡುತ್ತಾರೆ ಎಂಬುದು. ಕ್ಯಾಲ್ಸಿಯಂ ಕಾರ್ಬೈಡ್ ಎಂಬ ರಾಸಾಯನಿಕ ವಸ್ತುವನ್ನು ಮಾವಿನ ಕಾಯಿಯನ್ನು ಹಣ್ಣಾಗಿ ಪರಿವರ್ತಿಸಲು ಬಳಕೆ ಮಾಡುತ್ತಿದ್ದು, ಇದರಿಂದ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮವಾಗಲಿದೆ.
ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ
ಹಣ್ಣುಗಳ ಮೇಲೆ ಚುಕ್ಕೆಗಳಿರುವುದು. ಅಲ್ಲಲ್ಲಿ ಒಣಗಿದ ರೀತಿಯಲ್ಲಿ ಕಾಣುವುದು. ರುಚಿ ಇಲ್ಲದೇ ಇರುವುದು. ಇಂತಹ ಅಂಶಗಳು ಗಮನಿಸಿದರೆ ಅದು ರಾಸಾಯನಿಕ ವಸ್ತುವಿನಿಂದ ಮಾಗಿಸಿದ ಹಣ್ಣು ಎಂಬುವುದು ತಿಳಿಯಲಿದೆ. ಈ ಹಣ್ಣುಗಳ ಸೇವೆನೆಯಿಂದ ಮೊದಲಿಗೆ ಹೊಟ್ಟೆ ನೋವು ಕಾಣಿಸಿಕೊಂಡರೆ ನಂತರ ನಿಧಾನವಾಗಿ ಗ್ಯಾಸ್ಟ್ರಿಕ್, ಉಬ್ಬಸ ವಾಂತಿ ಹೊಟ್ಟೆ ಹುರಿ, ಅತಿಸಾರದಂತೆ ಸಮಸ್ಯೆ ಮಾವು ಹಣ್ಣು ಸೇವಿಸಿದ ವ್ಯಕ್ತಿಗಳಲ್ಲಿ ಕಾಣಿಸಿಕೊಳ್ಳುತ್ತದೆ. ಏನೂ ಆಗುವುದಿಲ್ಲವೆಂದು ತಿನ್ನಲು ಹೋದರೆ ಕರುಳಿನ ತೊಂದರೆಯಾಗುವುದರ ಜೊತೆಗೆ ಕ್ಯಾನ್ಸರ್ ಆಗುವ ಸಾಧ್ಯತೆಯೂ ಇದೆ. ಹೀಗಾಗಿ ಮಾವು ಖರೀದಿಯ ಮುನ್ನ ಸರಿಯಾಗಿ ವಿಚಾರಿಸಿ ಖರೀದಿಸಿ ಎಂಬುದು ನಮ್ಮ ಕಾಳಜಿ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications