ಮೋದಿ ಸರ್ಕಾರದಿಂದ ದೇಶಾಭಿವೃದ್ಧಿ : ಕೃಷ್ಣಪಾಲ್ ಗುರ್ಜಾರ್
ಮೂರು ವರ್ಷದಲ್ಲಿ ಭ್ರಷ್ಟಚಾರ ಮುಕ್ತ ಆಡಳಿತವನ್ನು ಕೇಂದ್ರದ ಬಿಜೆಪಿ ಸರ್ಕಾರ ನೀಡಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವ ಕೃಷ್ಣಪಾಲ್ ಗುರ್ಜಾರ್ ತಿಳಿಸಿದರು.
ಮೈಸೂರು, ಮೇ.29 : ಮೂರು ವರ್ಷದಲ್ಲಿ ಭ್ರಷ್ಟಚಾರ ಮುಕ್ತ ಆಡಳಿತವನ್ನು ಕೇಂದ್ರದ ಬಿಜೆಪಿ ಸರ್ಕಾರ ನೀಡಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವ ಕೃಷ್ಣಪಾಲ್ ಗುರ್ಜಾರ್ ತಿಳಿಸಿದರು.
ಮೈಸೂರು ಖಾಸಗಿ ಹೋಟೆಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನರೇಂದ್ರ ಮೋದಿಯವರು ಮೂರು ವರ್ಷದ ಆಡಳಿತದಲ್ಲಿ ಹಳ್ಳಿ ,ಪಟ್ಟಣ ರೈತರ ಅಭಿವೃದ್ಧಿಗೆ ದುಡಿದಿದ್ದಾರೆ. ಅವರ ಆಡಳಿತವನ್ನು ಜನ ಮೆಚ್ಚಿದ್ದಾರೆ. ಈ ಹಿನ್ನಲೆಯಲ್ಲಿ ಸ್ಥಳೀಯ ಸಂಸ್ಥೆಯ ಚುನಾವಣೆಯಿಂದ ಹಿಡಿದು ಲೋಕಸಭಾ ಚುನಾವಣೆಯವರೆಗೂ ಜನಾದೇಶ ನೀಡಿದ್ದಾರೆ.[ಯುಪಿಎ ಸರಕಾರದ ಸಾಧನೆಯಿಂದ ಬಿಜೆಪಿಗೆ ಹೊಟ್ಟೆಕಿಚ್ಚು: ಮೊಯಿಲಿ]

ನಮ್ಮ ಸರ್ಕಾರ ಬಡವರ ಪರ ಇದೆ ಎಂದರು. ಜನಧನ್ ಯೋಜನೆಯಿಂದ ಪ್ರತಿಯೊಬ್ಬ ಬಡವನು ಬ್ಯಾಂಕ್ ನ ಖಾತೆದಾರನಾಗಿದ್ದಾನೆ. ಸ್ವಾತಂತ್ರ್ಯ ನಂತರ ಹೊಸ ಸಂಚಲನ ಸೃಷ್ಟಿ ಮಾಡಿದ್ದೇವೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯಿಂದ ಸೂರು ಇಲ್ಲದವರು ಸೂರು ಪಡೆದಿದ್ದಾರೆ. ವಿದೇಶಿ ಬಂಡವಾಳ ಹೂಡಿಕೆ ದೇಶದಲ್ಲಿ ಹೆಚ್ಚುತ್ತಿದೆ ಎಂದು ತಿಳಿಸಿದರು.
ನಮ್ಮ ಸರ್ಕಾರ ಪಾರದರ್ಶಕವಾಗಿದೆ. ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ ಮೂರು ವರ್ಷಗಳಲ್ಲಿ ಭ್ರಷ್ಟಾಚಾರ ಮುಕ್ತವಾದ ಆಡಳಿತ ನೀಡುವಲ್ಲಿ ಯಶಸ್ವಿಯಾಗಿದೆ. ಪ್ರಧಾನಿ ಮೋದಿ ಕಡಿಮೆ ಮಾತನಾಡಿದರೂ, ಹೆಚ್ಚಿನ ಕೆಲಸ ಮಾಡಿ ತೋರಿಸಿದ್ದಾರೆ. ಮೋದಿ ವಿಶ್ವ ನಾಯಕರಾಗಿ ಹೊರಹೊಮ್ಮಿದ್ದಾರೆ.

ಕಳೆದ ಮೂರು ವರ್ಷದ ಅವಧಿಯಲ್ಲಿ ದೇಶವನ್ನು ಭ್ರಷ್ಟಾಚಾರ ಮುಕ್ತ ಮಾಡಲು ಪ್ರಧಾನಿ ಮೋದಿ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದ್ದಾರೆ. ಎಲ್ಲಾ ವರ್ಗದ ಜನರ ಏಳಿಗೆಗಾಗಿ ಅಭಿವೃದ್ಧಿ ಕಾರ್ಯಗಳನ್ನು ಪ್ರಕಟಿಸಲಾಗಿದೆ. ಕಳೆದ ಮೂರು ವರ್ಷಗಳ ಆಡಳಿತದಲ್ಲಿ ಒಂದೂ ಭ್ರಷ್ಟಾಚಾರ, ಹಗರಣ ನಡೆದಿಲ್ಲ.
ಜಾತಿ ರಾಜಕಾರಣ, ತುಷ್ಠೀಕರಣ ರಾಜಕೀಯ ಕೊನೆಗೊಂಡಿದೆ. ದೇಶದ ಜಿ.ಡಿ.ಪಿ ದರ ಏರಿಕೆಯಾಗಿದೆ. ಪರಿಣಾಮ ಇತ್ತೀಚೆಗೆ ನಡೆದ ಬಹುತೇಕ ಚುನಾವಣೆಗಳಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಪಡೆದಿದೆ ಎಂದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications