ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ನನ್ನ ಹೆಸರು ಸಿದ್ದರಾಮ, ನಾನು ಕೂಡ ಹಿಂದೂ'

By ಯಶಸ್ವಿನಿ ಎಂ ಕೆ
|
Google Oneindia Kannada News

ಮೈಸೂರು, ಜುಲೈ 15: "ನನ್ನ ಹೆಸರು ಸಿದ್ದರಾಮ. ನಾನು ಕೂಡ ಹಿಂದೂ. ಅದೇನು ಬಿಜೆಪಿಯವರು ಮಾತ್ರ ಹಿಂದೂಗಳಾ?" ಎನ್ನುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಯವರಿಗೆ ಒಂದೇ ವಾರದ ಫಾಸಲೆಯಲ್ಲಿ ಎರಡನೇ ಬಾರಿಗೆ ನಾನು ಕೂಡ ಹಿಂದೂ ಎಂಬ ಮಾತನ್ನು ಹೇಳಿದ್ದಾರೆ.

ಸಿಎಂ ದಾವೂದ್ ಇಬ್ರಾಹಿಂ ಚಿಕ್ಕಪ್ಪನಂತೆ ವರ್ತಿಸುತ್ತಿದ್ದಾರೆ: ಜೋಶಿಸಿಎಂ ದಾವೂದ್ ಇಬ್ರಾಹಿಂ ಚಿಕ್ಕಪ್ಪನಂತೆ ವರ್ತಿಸುತ್ತಿದ್ದಾರೆ: ಜೋಶಿ

ಮೈಸೂರಿಗೆ ಭೇಟಿ ನೀಡಿದ್ದ ಅವರಿಗೆ ಮಾಧ್ಯಮದವರು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮಾಡಿದ ಆರೋಪದ ಬಗ್ಗೆ ಗಮನ ಸೆಳೆದರು. ಅದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಬಿಜೆಪಿಯವರು ಮಾತ್ರ ಹಿಂದೂವಲ್ಲ, ಯಡಿಯೂರಪ್ಪ ಒಬ್ಬನೇ ಹಿಂದುನಾ, ನಾನು ಕೂಡಾ ಹಿಂದೂ ಎಂದು ಹೇಳಿದರು.

Siddaramaiah

ಇದೇ ವೇಳೆ ಬಿಜೆಪಿ ಆಯೋಜಿಸುತ್ತಿರುವ ವಿಸ್ತಾರಕ್ ಬಗ್ಗೆ ಕೇಳಿದ ಪ್ರಶ್ನೆಗೆ, ವಿಸ್ತಾರಕ್ ಅಂದರೆ ಹಿಂದುತ್ವದ ವಿಸ್ತರಣೆ. ಬಿಜೆಪಿಯವರು ಈಗಲೂ ಬೆಂಕಿ ಹಚ್ಚಲು ಯತ್ನಿಸುತ್ತಿದ್ದಾರೆ. ನಾವು ಅದನ್ನು ಆರಿಸುತ್ತೇವೆ ಎಂದು ಉತ್ತರ ನೀಡಿದರು.

ಮುಂದಿನ ವಿಧಾನಸಭೆ ಚುನಾವಣೆಗೆ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಗಲಭೆಗೆ ಸಂಬಂಧಿಸಿದಂತೆ ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದರು.

English summary
My name is Siddarama, I am also Hindu, said by Karnataka CM Siddaramaiah in Mysuru, responding to BJP state president BS Yeddyurappa's allegation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X