ಮೈಸೂರು ದಸರಾ ಗಜಪಡೆ ಮೇಲೆ ಸಿಸಿಟಿವಿ ಹದ್ದಿನ ಕಣ್ಣು
ಮೈಸೂರು, ಸೆಪ್ಟೆಂಬರ್ 9 : ನಾಡಹಬ್ಬ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಆನೆಗಳು ಅರಮನೆ ಆವರಣದಲ್ಲಿ ಬೀಡುಬಿಟ್ಟಿದ್ದು, ಅರ್ಜುನ ನೇತೃತ್ವದ ಈ ಆನೆಗಳಿಗೆ ಸಿಸಿ ಕ್ಯಾಮೆರಾ ಕಣ್ಗಾವಲು ಅಳವಡಿಸಲಾಗಿದೆ.
ದಸರಾ ಮಹೋತ್ಸವದಲ್ಲಿ ಆನೆಗಳ ಪಾತ್ರ ಪ್ರಮುಖ. ಇದನ್ನು ಮನಗೊಂಡು ಆನೆಗಳ ಮೇಲೆ ತೀವ್ರ ನಿಗಾ ವಹಿಸಲು ಅರಣ್ಯ ಇಲಾಖೆ ಮುಂದಾಗಿದ್ದು , ಇಲಾಖೆಯ ಸಿಬ್ಬಂದಿ ಆನೆಗಳ ಮಾವುತರು, ಕಾವಾಡಿಗಳು ಮೇಲ್ವಿಚಾರಕರೊಂದಿಗೆ 8 ಸಿಸಿ ಕ್ಯಾಮೆರಾಗಳನ್ನು ಅಳವಡಿಸುವ ಮೂಲಕ ಕಣ್ಗಾವಲು ಹಾಕಲಾಗಿದೆ. ದಸರಾ ಆನೆಗಳೊಂದಿಗೆ ಫೋಟೋ ತೆಗೆಸಿಕೊಳ್ಳುವ ವೇಳೆ ಸಾರ್ವಜನಿಕರು ಆನೆಗಳೊಂದಿಗೆ ಅಸಂಬದ್ಧವಾಗಿ ವರ್ತಿಸಿ ಉದ್ರೇಕಗೊಳಿಸುವ ಸಾಧ್ಯತೆಯೇ ಹೆಚ್ಚಾಗಿರುವುದರಿಂದ ಸಿಸಿ ಕ್ಯಾಮೆರಾಗಳ ಮೊರೆ ಹೋಗಲಾಗಿದೆ.

ಜಂಬೂಸವಾರಿ ಮೆರವಣಿಗೆಯಲ್ಲಿ ನಾಡದೇವಿ ಶ್ರೀ ಚಾಮುಂಡೇಶ್ವರಿ ಉತ್ಸವಮೂರ್ತಿ ಇರುವ 750 ಕೆ. ಜಿ ತೂಕದ ಚಿನ್ನದ ಅಂಬಾರಿಯನ್ನು ಹೊರುವ ಗಜಪಡೆಯ ನಾಯಕ ಅರ್ಜುನ , ವಿವಿಧ ಜವಾಬ್ದಾರಿ ನಿರ್ವಹಿಸುವ ಅಭಿಮನ್ಯು ಗಜೇಂದ್ರ ಬಲರಾಮ , ಕಾವೇರಿ, ವಿಜಯ, ವರಲಕ್ಷ್ಮಿ ಹಾಗೂ ಭೀಮ ಆನೆಗಳ ಮೇಲೆ ಸಿಸಿ ಕ್ಯಾಮೆರಾಗಳ ಹದ್ದಿನ ಕಣ್ಣಿಟ್ಟಿದೆ .
ಅರ್ಜುನನ ಬಳಿ ಎರಡು ದಿಕ್ಕುಗಳಲ್ಲಿಯೂ ಒಂದೊಂದು ಸಿಸಿ ಕ್ಯಾಮೆರಾ , ಆನೆಗಳಿಗೆ ಪೌಷ್ಟಿಕ ಆಹಾರ ತಯಾರಿಸುವ ಅಡುಗೆ ಮನೆ ಆಹಾರ ಪದಾರ್ಥಗಳನ್ನು ಸಂಗ್ರಹಿಸಿರುವ ಕೊಠಡಿ ಹಾಗೂ ಉಳಿದ ಆನೆಗಳ ಚಲನವಲನ ಗಮನಿಸಲುವುದಕ್ಕೆ ಒಟ್ಟು 8 ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ವಿವಿಧ ಆಯಕಟ್ಟಿನ ಸ್ಥಳದಲ್ಲಿ ಅಳವಡಿಸಿರುವ ಸಿಸಿ ಕ್ಯಾಮೆರಾಗಳ ದೃಶ್ಯವನ್ನು ನಿರಂತರವಾಗಿ ಗಮನಿಸಲು ಅರಣ್ಯ ಇಲಾಖೆ ಸಿಬ್ಬಂದಿಯೊಬ್ಬರನ್ನು ನೇಮಿಸಿದೆ. ಎಂಟು ಕ್ಯಾಮೆರಾಗಳಲ್ಲಿ ದೃಶ್ಯಗಳು ಪರದೆಯ ಮೇಲೆ ಬಿತ್ತರವಾಗಲಿದೆ .
ಅಕಸ್ಮಾತ್ ಸಿಬ್ಬಂದಿ ಕಣ್ತಪ್ಪಿಸಿ ಯಾರಾದರೂ ಆನೆಗಳ ಸಮೀಪ ತೆರಳಿದರೆ ಅದನ್ನು ಗಮನಿಸಿ ಕೂಡಲೇ ಎಚ್ಚರಿಸಲಾಗುತ್ತಿದೆ. ಎರಡನೇ ಹಂತದ ಆನೆಗಳಿಗೂ ಕೂಡ ಸಿಸಿ ಕ್ಯಾಮೆರಾ ಕಣ್ಗಾವಲು ಇರಿಸಲಾಗಿದೆ ಎಂದು ಡಿಸಿಎಫ್ ಏಡುಕೊಂಡಲು ತಿಳಿಸಿದ್ದಾರೆ .
ದಸರಾ ಆನೆಗಳ ಮೇಲೆ ಹೆಚ್ಚಿನ ಕಾಳಜಿ ಇಡಲಾಗಿದ್ದು ಇದರಿಂದಲೇ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಇನ್ನು ಸೂಕ್ಷ್ಮವಾಗಿ ಗಮನಿಸುವ ಸಲುವಾಗಿ ಸಾರ್ವಜನಿಕರ ವರ್ತನೆ ಆನೆಗಳ ಸ್ವಭಾವದಲ್ಲಿ ಏನಾದರೂ ಬದಲಾವಣೆಯಾಗಿದೆಯೇ ಎಂಬುದನ್ನು ಗಮನಿಸಲಾಗುತ್ತದೆ. ಕೆಲವರು ಫೋಟೋ ತೆಗೆಸಿಕೊಳ್ಳಲು ಆನೆಗಳಿಗೆ ಹಣ್ಣು ಹಂಪಲು ನೀಡಲು ಮಾವುತರು ಹಾಗೂ ಕಾವಾಡಿಗಳ ಕಣ್ತಪ್ಪಿಸಿ ಆನೆಗಳ ಸಮೀಪ ನುಸುಳುವ ಸಾಧ್ಯತೆಯೂ ಇದೆ. ಈ ಹಿನ್ನೆಲೆಯಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications