Get Updates
Get notified of breaking news, exclusive insights, and must-see stories!

ನಾಲೆಗಳಿಗೆ ನೀರು, 4ನೇ ದಿನಕ್ಕೆ ಕಾಲಿಟ್ಟ ಜೆಡಿಎಸ್ ಪ್ರತಿಭಟನೆ

ಮೈಸೂರು, ಜುಲೈ 27 : ನಾಲೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಕೆಆರ್ ನಗರ ಶಾಸಕ ಸಾ.ರಾ ಮಹೇಶ್ ನೇತೃತ್ವದಲ್ಲಿ ಮೈಸೂರಿನ ಕಾಡಾಕಚೇರಿ ಆವರಣದಲ್ಲಿ ನಡೆಯುತ್ತಿರುವ ಹೋರಾಟ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.

ತಮಿಳುನಾಡಿಗೆ ನೀರು ಹರಿಸುವುದನ್ನ ನಿಲ್ಲಿಸಿ ಹಾರಂಗಿ ನಾಲೆಗಳಿಗೆ ನೀರು ಹರಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿ ಶಾಸಕ ಸಾ.ರಾ ಮಹೇಶ್ ಅವರ ನೇತೃತ್ವದಲ್ಲಿ ಮೈಸೂರಿನ ಕಾಡಾ ಕಚೇರಿ ಆವರಣದಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಸ್ಥಳಕ್ಕೆ ಚಿತ್ರನಟ ಸಾಧುಕೋಕಿಲ ಬುಧವಾರ ರಾತ್ರಿ ಭೇಟಿ ನೀಡಿ ಬೆಂಬಲ ಸೂಚಿಸಿದರು.

Mysuru: JDS Protest continues 4th day for release water to canals

ಶಾಸಕರ ಹೋರಾಟಕ್ಕೆ ಕೆ.ಆರ್.ನಗರ ಪತ್ರಕರ್ತರೂ ಬೆಂಬಲ ನೀಡಿದ್ದು, ಹೋರಾಟದಲ್ಲಿ ಪತ್ರಕರ್ತರು ಪಾಲ್ಗೊಂಡಿದ್ದಾರೆ.

ಜಿಲ್ಲಾಧಿಕಾರಿಗಳಿಂದ ಮನವೊಲಿಕೆಗೆ ಯತ್ನ : ಜಿಲ್ಲಾಧಿಕಾರಿ ಡಿ.ರಂದೀಪ್ ಪ್ರತಿಭಟನೆಯ ನೇತೃತ್ವ ವಹಿಸಿರುವ ಶಾಸಕ ಸಾ.ರಾ ಮಹೇಶ್ ಜೊತೆ ಮಾತುಕತೆ ನಡೆಸಿದರಲ್ಲದೇ, ಪ್ರತಿಭಟನೆ ಹಿಂಪಡೆಯುವಂತೆ ಮನವೊಲಿಕೆಗೆ ಮುಂದಾದರು.

ಆದರೆ ಕೆರೆ ಕಟ್ಟೆಗಳನ್ನು ತುಂಬಿಸಿಕೊಳ್ಳಲು ಅನುವಾಗುವಂತೆ ಮೊದಲು ನಾಲೆಗಳಿಗೆ ನೀರು ಹರಿಸುವಂತೆ ಶಾಸಕ ಸಾ.ರಾ ಮಹೇಶ್ ಆಗ್ರಹಿಸಿದರು.

ಶಾಸಕ ಸಾ.ರಾ ಮಹೇಶ್ ಮತ್ತು ಮೈಸೂರು ಜಿಲ್ಲಾಧಿಕಾರಿ ಡಿ. ರಂದೀಪ್ ನಡುವಿನ ಮಾತುಕತೆ ವಿಫಲಗೊಂಡಿದ್ದು, ಕಾಡಾ ಕಚೇರಿ ಆವರಣದಲ್ಲಿ ಸತತ ನಾಲ್ಕನೇ ದಿನಕ್ಕೆ ಕಾಲಿಟ್ಟಿರುವ ಅಹೋರಾತ್ರಿ ಅನಿರ್ದಿಷ್ಟಾವಧಿ ಧರಣಿ ಪ್ರತಿಭಟನೆ ಮುಂದುವರಿದಿದೆ.

ನಾಳೆ ನಡೆಯಲಿರುವ ನೀರಾವರಿ ಸಲಹಾ ಸಮಿತಿ ಸಭೆಯ ಬಳಿಕ ನಾಲೆಗಳಿಗೆ ನೀರು ಬಿಡುವ ಕುರಿತು ನಿರ್ಧಾರ ಕೈಗೊಳ್ಳುವ ಬಗ್ಗೆ ಡಿ. ರಂದೀಪ್ ಭರವಸೆ ನೀಡಿದರು.

ನಾಳೆ ರಾಜ್ಯ ಸರ್ಕಾರ ಕೈಗೊಳ್ಳುವ ನಿಲುವಿನ ನಂತರ ಮುಂದಿನ ಹಂತದ ಹೋರಾಟ ರೂಪಿಸಲು ಶಾಸಕ ಸಾ.ರಾ ಮಹೇಶ್ ನಿರ್ಧರಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+