ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೆದ್ದಾರಿಗಳಿಗೆ ಅನುದಾನ, ಸಂಸದರೊಂದಿಗೆ ಸಭೆ

|
Google Oneindia Kannada News

ನವದೆಹಲಿ, ಮಾ.10 : ಕರ್ನಾಟಕದ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಪಡೆಯಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕೆಂದು ರಾಜ್ಯದ ಸಂಸದರಲ್ಲಿ ಮನವಿ ಮಾಡಿರುವ ಲೋಕೋಪಯೋಗಿ ಸಚಿವ ಎಚ್.ಸಿ.ಮಹದೇವಪ್ಪ ಅವರು ಶಿರಾಢಿ ಘಾಟ್ ರಸ್ತೆ ಕಾಮಗಾರಿ 6 ತಿಂಗಳಿನಲ್ಲಿ ಮುಕ್ತಾಯಗೊಳ್ಳಲಿದೆ ಎಂದು ಹೇಳಿದ್ದಾರೆ.

ದೆಹಲಿಯ ಕರ್ನಾಟಕ ಭವನದಲ್ಲಿ ಮಂಗಳವಾರ ರಾಜ್ಯದ ಸಂಸದರ ಜೊತೆ ಉಪಹಾರ ಕೂಟ ನಡೆಸಿದ ಸಚಿವ ಮಹದೇವಪ್ಪ ಅವರು, ಕರ್ನಾಟಕದಲ್ಲಿ 10 ರಾಜ್ಯ ಹೆದ್ದಾರಿಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ. ಈ ಯೋಜನೆಗಳಿಗೆ ಬೇಗ ಅನುದಾನ ಮಂಜೂರಾಗುವಂತೆ ಸರ್ಕಾರದ ಮೇಲೆ ಒತ್ತಡ ಹೇರಬೇಕೆಂದು ಸಂಸದರಿಗೆ ಮನವಿ ಮಾಡಿದರು. [ಬೆಂಗಳೂರು-ಮೈಸೂರು ಆರು ಪಥದ ರಸ್ತೆ ವಿಳಂಬ?]

hc mahadevappa

ಗಡ್ಕರಿ ಭೇಟಿ : ಮಂಗಳವಾರ ಮಧ್ಯಾಹ್ನ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ ರಾಜ್ಯದ ರಸ್ತೆಯ ಅಭಿವೃದ್ಧಿಗಾಗಿ ಹೆಚ್ಚಿನ ನೆರವು ನೀಡುವಂತೆ ಮನವಿ ಮಾಡಲಾಗುತ್ತದೆ ಎಂದು ಸಚಿವರು ತಿಳಿಸಿದರು. [ಶಿರಾಡಿ ರಸ್ತೆ ರಿಪೇರಿಗೆ ಇನ್ನೆಷ್ಟು ದಿನ ಬೇಕು?]

ಶಿರಾಡಿ ಘಾಟ್ 6 ತಿಂಗಳಲ್ಲಿ ಪೂರ್ಣ : ಬೆಂಗಳೂರು-ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟ್ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, 6 ತಿಂಗಳಿನಲ್ಲಿ ಈ ಕಾಮಗಾರಿಯನ್ನು ಪೂರ್ಣಗೊಳಿಸಲಾಗುತ್ತದೆ ಎಂದು ಸಚಿವರು ಹೇಳಿದರು.

ಸಭೆಯಲ್ಲಿ ಕೇಂದ್ರ ಸಚಿವ ಅನಂತ್ ಕುಮಾರ್, ಜೆ.ಎಂ. ಸಿದ್ದೇಶ್ವರ್, ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಶಿವಮೊಗ್ಗ ಸಂಸದ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ಸಂಸದರು ಪಾಲ್ಗೊಂಡಿದ್ದರು.

English summary
Karnataka Public Works Department (PWD) minister HC Mahadevappa on Tuesday said, Up-gradation work of the Shiradi Ghat stretch on the Mangaluru-Bengaluru National Highway will take six months.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X