ನಾಲ್ವರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ, ವ್ಯಕ್ತಿಯ ಕೊಲೆ
ನವದೆಹಲಿ, ಮೇ 25: ವ್ಯಕ್ತಿಯನ್ನು ಗುಂಡಿಟ್ಟು ಕೊಂದು, ಆತನ ಕುಟುಂಬದ ನಾಲ್ವರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ದೆಹಲಿಗೆ ಅರವತ್ತೆಂಟು ಕಿಲೋಮೀಟರ್ ದೂರದ ಉತ್ತರ ಪ್ರದೇಶದ ಜೇವರ್ ನಲ್ಲಿ ಗುರುವಾರ ಘಟನೆ ನಡೆದಿದೆ.
ನಾಲ್ವರು ಪುರುಷರು ಹಾಗೂ ನಾಲ್ವರು ಮಹಿಳೆಯರಿದ್ದ ಕುಟುಂಬ ಕಾರಿನಲ್ಲಿ ಜೇವರ್ ನಿಂದ ಬುಲಂದ್ ಶಹರ್ ಗೆ ತೆರಳುತ್ತಿತ್ತು. ಅಲ್ಲಿನ ಆಸ್ಪತ್ರೆಯಲ್ಲಿ ಸಂಬಂಧಿಕರೊಬ್ಬರು ದಾಖಲಾಗಿದ್ದರು. ಅವರನ್ನು ನೋಡಲು ತೆರಳುತ್ತಿದ್ದರು. ಲೋಹದಂಥ ವಸ್ತುವೊಂದು ಕಾರಿಗೆ ಬಡಿದು, ರಾತ್ರಿ ಒಂದು ಗಂಟೆ ಸುಮಾರಿಗೆ ನಿಂತಿದೆ.

ಏನಾಗಿದೆ ಎಂದು ತಿಳಿಯಲು ಕುಟುಂಬದ ಕೆಲವರು ಕಾರಿನಿಂದ ಇಳಿದಿದ್ದಾರೆ. ಆಗ ಶಸ್ತ್ರಸಜ್ಜಿತ ಆರು ಮಂದಿ ಕಾರನ್ನು ಸುತ್ತುವರೆದಿದ್ದಾರೆ. ಮಹಿಳೆಯರನ್ನು ಹೊರಗೆಳೆದು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಆ ನಂತರ ಅವರ ಬಳಿಯಿದ್ದ ವಸ್ತುಗಳನ್ನು ದೋಚಿದ್ದಾರೆ. ಮಹಿಳೆಯರನ್ನು ರಕ್ಷಿಸಲು ಯತ್ನಿಸಿದ ನಲವತ್ತೈದು ವರ್ಷದ ವ್ಯಕ್ತಿಯನ್ನು ಗುಂಡಿಟ್ಟು ಕೊಂದಿದ್ದಾರೆ.
ಲೋಹದಂಥ ವಸ್ತು ಕಾರಿಗೆ ತಾಗಿದಾಗಲೇ ನಾವು ಪೊಲೀಸರಿಗೆ ಕರೆ ಮಾಡಿದೆವು. ಆದರೆ ಅವರು ತಡವಾಗಿ ಬಂದರು ಎಂದು ಕುಟುಂಬದವರು ಹೇಳಿದ್ದಾರೆ. ಮಹಿಳೆಯರ ಮೇಲೆ ದೌರ್ಜನ್ಯ ನಡೆದಿದೆ. ಆದರೆ ಲೈಂಗಿಕ ದೌರ್ಜನ್ಯ ನಡೆದಿದೆಯೇ ಎಂಬುದು ವೈದ್ಯಕೀಯ ಪರೀಕ್ಷೆ ನಂತರ ಗೊತ್ತಾಗುತ್ತದೆ ಎಂದು ಪೊಲೀಸರು ಹೇಳಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications