ಸಚಿವ ಅರುಣ್ ಜೇಟ್ಲಿ ಕೈಲಿ ಸನ್ ಟಿವಿ ಭವಿಷ್ಯ?
ನವದೆಹಲಿ, ಜೂ.8: ಮಾರನ್ ಬ್ರದರ್ಸ್ ಒಡೆತನದ ಸನ್ ನೆಟ್ವರ್ಕ್ಸ್ ಸಂಸ್ಥೆಯ ಟಿವಿ ಚಾನೆಲ್ ಹಾಗೂ ಎಫ್ ಎಂ ವಾಹಿನಿಗೆ ಭದ್ರತಾ ಅನುಮತಿ ನೀಡಲು ನಿರಾಕರಿಸಿರುವ ಗೃಹ ಸಚಿವಾಲಯ ಈಗ ಲೈಸನ್ಸ್ ರದ್ದುಪಡಿಸಲು ಮುಂದಾಗಿದೆ. ಸನ್ ನೆಟ್ವರ್ಕ್ ಲೈಸನ್ಸ್ ರದ್ದು ಮಾಡುವ ಬಗ್ಗೆ ನಿರ್ಧರಿಸುವಂತೆ ವಾರ್ತಾ ಮತ್ತು ಪ್ರಸಾರ ಸಚಿವಾಲಯಕ್ಕೆ ಮನವಿ ಸಲ್ಲಿಸಲಾಗಿದೆ.
ಈಗ ಮಾರನ್ ಬ್ರದರ್ಸ್ ಒಡೆತನದ ಟಿವಿ ಚಾನೆಲ್ ಹಾಗೂ ಎಫ್ ಎಂ ವಾಹಿನಿಗಳ ಭವಿಷ್ಯ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅರುಣ್ ಜೇಟ್ಲಿ ಕೈಲಿದೆ. ಕಳೆದ ವರ್ಷ ಕೂಡಾ ಗೃಹ ಸಚಿವಾಲಯ ಸುಮಾರು 40ಕ್ಕೂ ಅಧಿಕ ಎಫ್ ಎಂ ವಾಹಿನಿಗಳಿಗೆ ಅನುಮತಿ ನೀಡಲು ನಿರಾಕರಿಸಿದ್ದನ್ನು ಇಲ್ಲಿ ಸ್ಮರಿಸಬಹುದು. [ಸನ್ ನೆಟ್ವರ್ಕ್ 33 ಟಿವಿ ವಾಹಿನಿ, 45 ಎಫ್ ಎಂ ಬಂದ್?]

ಲೈಸನ್ಸ್ ರದ್ದು: ಸನ್ ನೆಟ್ವರ್ಕ್ ಜಾಲದ ಟಿವಿ ಹಾಗೂ ಎಫ್ ಎಂ ವಾಹಿನಿಗಳಿಗೆ ಭದ್ರತಾ ಅನುಮತಿ ನೀಡಲು ನಿರಾಕರಿಸಿದ್ದೇಕೆ? ಎಂಬುದರ ಬಗ್ಗೆ ವಿಸ್ತೃತ ವರದಿಯನ್ನು ಗೃಹ ಸಚಿವಾಲಯ ತಯಾರಿಸಿದೆ. ಇದರ ಪ್ರತಿಯನ್ನು ವಾರ್ತಾ ಮತ್ತು ಪ್ರಸಾರ ಸಚಿವಾಲಯಕ್ಕೆ ಕಳಿಸಲಾಗಿದ್ದು, ಲೈಸನ್ಸ್ ರದ್ದು ಪಡಿಸಬಾರದೇಕೆ? ಎಂದು ಪ್ರಶ್ನಿಸಲಾಗಿದೆ. [ಲೈಸನ್ಸ್ ರದ್ದು ಭೀತಿ, ನೆಲ ಕಚ್ಚಿದ ಸನ್ ಟಿವಿ ಷೇರು]
ಭ್ರಷ್ಟಾಚಾರ, ಮನಿ ಲಾಂಡ್ರಿಂಗ್ ಹಾಗೂ ಅಕ್ರಮವಾಗಿ ಟೆಲಿಕಾಂ ಸಂಪರ್ಕ ಹೊಂದಿದ ಆರೋಪ ಇರುವುದರಿಂದ ಸನ್ ನೆಟ್ವರ್ಕ್ ಸಲ್ಲಿಸಿದ ಲೈಸನ್ ನವೀಕರಣ ಅರ್ಜಿ ಪುರಸ್ಕರಿಸಲು ಸಾಧ್ಯವಿಲ್ಲ ಎಂದು ಹೇಳಲಾಗಿದೆ. ಹೀಗಾಗಿ ಪ್ರಕರಣಗಳ ವಿಚಾರಣೆ ಜಾರಿಯಲ್ಲಿರುವ ತನಕ ಸನ್ ಟಿವಿಗೆ ಭದ್ರತಾ ಅನುಮತಿ ನೀಡಲು ಗೃಹ ಸಚಿವಾಲಯ ನಿರಾಕರಿಸಿದೆ.
ಸನ್ ಟಿವಿ ಏನು ಮಾಡಬಹುದು?: ಮೊದಲಿಗೆ ಲೈಸನ್ಸ್ ನವೀಕರಣಕ್ಕಾಗಿ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಮೊರೆ ಹೋಗಬಹುದು. ಲೈಸನ್ಸ್ ಸಿಕ್ಕ ಮೇಲೆ, ಈ ಸಚಿವಾಲಯದ ನೆರವಿನಿಂದ ಪುನಃ ಗೃಹ ಸಚಿವಾಲಯಕ್ಕೆ ಅರ್ಜಿ ಹಾಕಬಹುದು. ಕೊನೆಯದಾಗಿ ಕಳೆದ ಬಾರಿಯಂತೆ ಈ ಬಾರಿ ಕೂಡಾ ಕೋರ್ಟ್ ಮೆಟ್ಟಿಲೇರಬಹುದು. (ಒನ್ ಇಂಡಿಯಾ ಸುದ್ದಿ)
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications