ತೀರ್ಥಹಳ್ಳಿಯಲ್ಲಿ ಅಪ್ರಾಪ್ತ ಬಾಲಕಿ ಕೊಲೆ, ಅತ್ಯಾಚಾರ ಶಂಕೆ
ಶಿವಮೊಗ್ಗ, ನ.1 : ಅಪ್ರಾಪ್ತ ಶಾಲಾ ಬಾಲಕಿ ಅಪಹರಣ ಮತ್ತು ಕೊಲೆ ಖಂಡಿಸಿ ತೀರ್ಥಹಳ್ಳಿಯಲ್ಲಿ ಇಂದು ಸ್ವಯಂ ಪ್ರೇರಿತ ಬಂದ್ ಆಚರಿಸಲಾಗಿದೆ. ಅ.29ರಂದು ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಬಾಲಕಿ ಮಣಿಪಾಲ್ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ಸಾವನ್ನಪ್ಪಿದ್ದಾಳೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ತೀರ್ಥಹಳ್ಳಿಯ
ಸರ್ಕಾರಿ
ಕಾಲೇಜಿನ
ಪ್ರೌಢಶಾಲಾ
ವಿಭಾಗದಲ್ಲಿ
8ನೇ
ತರಗತಿ
ವ್ಯಾಸಂಗ
ಮಾಡುತ್ತಿದ್ದ
ನಂದಿತಾ
ಬಾಳೆಬೈಲಿನ
ನಿವಾಸಿ
ಕೃಷ್ಣಪ್ಪ
ಅವರ
ಪುತ್ರಿ.
ಮೂವರು
ಯುವಕರ
ಗುಂಪು
ಆಕೆಯನ್ನು
ಅಪಹರಿಸಿ
ಆನಂದ
ಗಿರಿ
ಬೆಟ್ಟಕ್ಕೆ
ಕರೆದುಕೊಂಡು
ಹೋಗಿ
ವಿಷಪ್ರಾಶನ
ಮಾಡಿದ್ದರು.
ಅ.29 ಆನಂದಗಿರಿ ಬೆಟ್ಟದಲ್ಲಿ ಬಾಲಕಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಸ್ಥಳೀಯರು ಬಾಲಕಿಯನ್ನು ರಕ್ಷಿಸಿ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಶುಕ್ರವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಸಾವನ್ನಪ್ಪಿದ್ದಾಳೆ. ಬಾಲಕಿ ತಂದೆ ಈ ಕುರಿತು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಅತ್ಯಾಚಾರ ಶಂಕೆ : ಬಾಲಕಿಯನ್ನು ಅಪಹರಿಸಿರುವ ಯುವಕರು ಆಕೆಗೆ ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ, ಬಲವಂತವಾಗಿ ಕುಡಿಸಿ ಅತ್ಯಾಚಾರ ನಡೆಸಲು ಯತ್ನಿಸಿದ್ದಾರೆ ಎಂದು ಶಂಕಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸ್ವಯಂ ಪ್ರೇರಿತ ಬಂದ್ : ಬಾಲಕಿ ಕೊಲೆಯನ್ನು ಖಂಡಿಸಿ ತೀರ್ಥಹಳ್ಳಿಯಲ್ಲಿ ಶನಿವಾರ ಸ್ವಯಂ ಪ್ರೇರಿತ ಬಂದ್ ನಡೆಸಲಾಗಿದೆ. ಮಾಜಿ ಶಾಸಕ ಆರಗ ಜ್ಞಾನೇಂದ್ರ ಸೇರಿದಂತೆ ಹಲವಾರು ನಾಯಕರು ರಸ್ತೆ ತಡೆ ನಡೆಸಿ, ಆರೋಪಿಗಳನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.
ಬಂದ್ಗೆ ಕರೆ : ತೀರ್ಥಹಳ್ಳಿ ಪಟ್ಟಣದಲ್ಲಿ ಪುಂಡ ಯುವಕರ ಹಾವಳಿ ಹೆಚ್ಚಾಗುತ್ತಿದೆ, ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ವಿವಿಧ ಸಂಘಟನೆಗಳು ಸೋಮವಾರ (ನ.3) ರಂದು ತೀರ್ಥಹಳ್ಳಿ ಬಂದ್ಗೆ ಕರೆ ನೀಡಿವೆ.