ಶಿವಮೊಗ್ಗ-ಬೆಂಗಳೂರು ಶತಾಬ್ದಿ ರೈಲು ಸಮಯ ಪರಿಷ್ಕರಣೆ
ಶಿವಮೊಗ್ಗ, ಅಕ್ಟೋಬರ್ 13 : ಬೆಂಗಳೂರು-ಶಿವಮೊಗ್ಗ ಜನಶತಾಬ್ದಿ ಎಕ್ಸ್ಪ್ರೆಸ್ ರೈಲಿನ ಸಮಯವನ್ನು ಪರಿಷ್ಕರಣೆ ಮಾಡಲಾಗಿದೆ. ಇನ್ನು ಮುಂದೆ 4ಗಂಟೆ 20 ನಿಮಿಷದಲ್ಲಿ ರೈಲು ಬೆಂಗಳೂರು ತಲುಪಲಿದ್ದು, ವಾರದಲ್ಲಿ 6 ದಿನ ಸಂಚಾರ ನಡೆಸಲಿದೆ.
ನೈಋತ್ಯ ರೈಲ್ವೆ ಶನಿವಾರ ಆದೇಶ ಈ ಕುರಿತು ಆದೇಶವನ್ನು ಹೊರಡಿಸಿದೆ. ಅಕ್ಟೋಬರ್ 14ರ ಸೋಮವಾರದಿಂದ ಪರಿಷ್ಕರಣೆ ಮಾಡಿದ ಸಮಯದಲ್ಲಿ ರೈಲು ಶಿವಮೊಗ್ಗ-ಬೆಂಗಳೂರು ನಡುವೆ ವಾರದ 6 ದಿನ ರೈಲು ಸಂಚಾರ ನಡೆಸಲಿದೆ.
ಇಷ್ಟು ದಿನ ಜನಶತಾಬ್ದಿ ರೈಲು ವಾರದಲ್ಲಿ 4 ದಿನಗಳು ಮಾತ್ರ ಸಂಚಾರ ನಡೆಸುತ್ತಿತ್ತು. ಸೋಮವಾರಿಂದ 6 ದಿನ ಸಂಚಾರ ನಡೆಸಲಿದ್ದು, ಬೆಂಗಳೂರು-ಶಿವಮೊಗ್ಗ ನಡುವೆ ಸಂಚಾರ ನಡೆಸುವ ಜನರಿಗೆ ಸಹಾಯಕವಾಗಲಿದೆ.

ರೈಲಿನ ವೇಳಾಪಟ್ಟಿ : ಜನಶತಾಬ್ದಿ ಎಕ್ಸ್ಪ್ರೆಸ್ ರೈಲು ಪ್ರತಿದಿನ ಬೆಳಗ್ಗೆ 5.30ಕ್ಕೆ ಶಿವಮೊಗ್ಗದಿಂದ ಹೊರಡಲಿದೆ. 9.50ಕ್ಕೆ ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣವನ್ನು ತಲುಪಲಿದೆ. ಸಂಜೆ 5.30ಕ್ಕೆ ಯಶವಂತಪುರ ರೈಲು ನಿಲ್ದಾಣದಿಂದ ಹೊರಡಲಿದ್ದು, ರಾತ್ರಿ 9.50ಕ್ಕೆ ಶಿವಮೊಗ್ಗವನ್ನು ತಲುಪಲಿದೆ.
ಬೆಂಗಳೂರು-ಶಿವಮೊಗ್ಗ ನಡುವಿನ ಸಂಚಾರಕ್ಕೆ ರೈಲು 4 ಗಂಟೆ 50 ನಿಮಿಷ ತೆಗೆದುಕೊಳ್ಳುತ್ತಿತ್ತು. ಇನ್ನು ಮುಂದೆ 4 ಗಂಟೆ 20 ನಿಮಿಷದಲ್ಲಿ ರೈಲು ಸಂಚಾರ ನಡೆಸಲಿದೆ. ವಾರದ ಆರು ದಿನ (ಮಂಗಳವಾರ ಬಿಟ್ಟು) ಈ ರೈಲು ಸೇವೆ ಲಭ್ಯವಿದೆ.
ರೈಲಿನ ಸಮಯ ಪರಿಷ್ಕರಣೆ ಮಾಡಿರುವುದರಿಂದ ಸಾರ್ವಜನಿಕರು ಬೆಂಗಳೂರಿನ ಕಚೇರಿಗಳಿಗೆ, ವಾಣಿಜ್ಯ ಉದ್ದೇಶಕ್ಕಾಗಿ ತೆರಳಿ ಅದೇ ದಿನ ವಾಪಸ್ಸು ಬರಲು ಸಹಾಯಕವಾಗಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ












Click it and Unblock the Notifications