ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತುಮಕೂರು: ಅರತಕ್ಷತೆ ಊಟ ಉಂಡು 40ಕ್ಕೂ ಅಧಿಕ ಮಂದಿ ಅಸ್ವಸ್ಥ

|
Google Oneindia Kannada News

ತುಮಕೂರು, ಮೇ 14 : ಶನಿವಾರ ಇಲ್ಲಿನ ಮಲ್ಲೆನಳ್ಳಿಯಲ್ಲಿ ನಡೆದ ಮದುವೆ ಆರತಕ್ಷತೆಯೊಂದರಲ್ಲಿ ಆಹಾರ ಸೇವಿಸಿ ಸುಮಾರು 40ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದಾರೆ.

ಮಲ್ಲೆನಳ್ಳಿ ನಿವಾಸಿ ರಮೇಶ್ ಮತ್ತು ವೀಣಾ ಎಂಬವರ ಮದುವೆ ಶುಕ್ರವಾರ ನಡೆದಿತ್ತು. ಶನಿವಾರ ಇವರು ಇಟ್ಟುಕೊಂಡಿದ್ದ ಆರತಕ್ಷತೆಯಲ್ಲಿ ಊಟ ಸೇವಿಸಿದ ಸುಮಾರು 40ಕ್ಕೂ ಹೆಚ್ಚು ಜನರಿಗೆ ವಾಂದಿ ಶುರುವಾಗಿದೆ. ಕೂಡಲೇ ಅವರನ್ನು ಚಿಕಿತ್ಸೆಗಾಗಿ ತುಮಕೂರು ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ.

Several people unwell after eating food at a marriage recepion in tumkur

ಅರಕ್ಷತೆಯಲ್ಲಿ ಮಾಡಲಾಗಿದ್ದ ಅನ್ನ ಸಾಂಬಾರ್, ಪಾಯಸ, ಚಿತ್ರಾನ್ನ ಸೇರಿದಂತೆ ವಿವಿಧ ತರಹನಾದ ಆಹಾರ ಸೇವಿಸಿದ್ದಾರೆ. ಬಳಿಕ ಕೆಲವರಿಗೆ ವಾಂತಿ, ಹೊಟ್ಟೆ ನೋವು ಕಾಣಿಸಿಕೊಂಡಿದೆ. ಈ ಬಗ್ಗೆ ಬೆಳ್ಳಾವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
Several people unwell after eat food at a marriage recepion in Mallenahalli Tumkur district on May 13.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X