ಶಿವಕುಮಾರ ಶ್ರೀಗಳಿಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ
ತುಮಕೂರು, ಮೇ 13 : ನಡೆದಾಡುವ ದೇವರು ಎಂದೇ ಪ್ರಸಿದ್ಧಿ ಪಡೆದಿರುವ ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ಬುಧವಾರ ಪದ್ಮಭೂಷಣ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಜನರು ಪರೋಪಕಾರ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದು ಸ್ವಾಮೀಜಿ ಈ ಸಂದರ್ಭದಲ್ಲಿ ಕರೆ ನೀಡಿದ್ದಾರೆ.
ಕರ್ನಾಟಕ
ಸರ್ಕಾರದ
ಹೆಚ್ಚುವರಿ
ಮುಖ್ಯ
ಕಾರ್ಯದರ್ಶಿ
ಉಮೇಶ್
ಸಿದ್ದಗಂಗಾ
ಮಠದಲ್ಲಿ
ಸ್ವಾಮೀಜಿಗೆ
ಪ್ರಶಸ್ತಿಯನ್ನು
ನೀಡಿ
ಗೌರವಿಸಿದರು.
ಜಿಲ್ಲಾಧಿಕಾರಿ
ಕೆ.ಎಸ್.ಸತ್ಯಮೂರ್ತಿ,
ಜಿಲ್ಲಾ
ಪೊಲೀಸ್
ವರಿಷ್ಠಾಧಿಕಾರಿ
ಕಾರ್ತಿಕ್
ರೆಡ್ಡಿ
ಮುಂತಾದವರು
ಈ
ಸಂದರ್ಭದಲ್ಲಿ
ಉಪಸ್ಥಿತರಿದ್ದರು.
[ನೂರೆಂಟು
ವಸಂತ
ಕಂಡ
ತ್ರಿವಿಧ
ದಾಸೋಹಿಗೆ
ಕೋಟಿ
ವಂದನೆ]
ಪ್ರಶಸ್ತಿ ಸ್ವೀಕರಿಸಿದ ನಂತರ ಸಂದೇಶ ನೀಡಿದ ಶಿವಕುಮಾರ ಸ್ವಾಮೀಜಿಗಳು, 'ಮನುಷ್ಯನಿಗೆ ಪ್ರಶಸ್ತಿ ಮುಖ್ಯವಲ್ಲ. ಪ್ರಶಸ್ತಿ ಪಡೆಯುವುದರಿಂದ ಘನತೆ, ಗೌರವ ಹೆಚ್ಚಾಗುವುದಿಲ್ಲ. ನಾನೆಂದೂ ಪ್ರಶಸ್ತಿಗಾಗಿ ಆಸೆ ಪಟ್ಟಿಲ್ಲ. ಸರ್ಕಾರ ನೀಡಿರುವ ಪ್ರಶಸ್ತಿಯನ್ನು ಸ್ವೀಕರಿಸಿರುವೆ' ಎಂದು ಹೇಳಿದರು. [ರಾಷ್ಟ್ರಪತಿಯಿಂದ ಬುಧವಾರ 'ಪದ್ಮ' ಪ್ರಶಸ್ತಿ ಪ್ರದಾನ]
'ಮನುಷ್ಯ
ಜೀವನದಲ್ಲಿ
ಪರೋಪಕಾರದ
ಮನೋಭಾವವನ್ನು
ಅಳವಡಿಸಿಕೊಳ್ಳಬೇಕು.
ಇದರಿಂದ
ಸಮಾಜಕ್ಕೆ
ಒಳ್ಳೆಯದಾಗುತ್ತದೆ'
ಎಂದು
ಸ್ವಾಮೀಜಿ
ಹೇಳಿದರು.
[ಲೋಕ
ಜಂಗಮ:
ಸಿದ್ದಗಂಗಾಶ್ರೀ
ಸಾಕ್ಷ್ಯಚಿತ್ರ
ಲೋಕಾರ್ಪಣೆ]
ಏಪ್ರಿಲ್ ತಿಂಗಳಿನಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪದ್ಮ ಪ್ರಶಸ್ತಿಗಳನ್ನು ದೆಹಲಿಯಲ್ಲಿ ಪ್ರದಾನ ಮಾಡಿದ್ದರು. 108 ವರ್ಷದ ಶಿವಕುಮಾರ ಸ್ವಾಮಿಗಳು ದೆಹಲಿಗೆ ತೆರಳು ಸಾಧ್ಯವಾಗದ ಕಾರಣ ಸರ್ಕಾರದ ಪರವಾಗಿ ಇಂದು ಮಠದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ.