ಅಮೆರಿಕಾದ ಎಡಿಸನ್ ನಲ್ಲಿ ಕೃಷ್ಣಾವತಾರ
ಶ್ರೀಕೃಷ್ಣ ಪಶ್ಚಿಮಕ್ಕೆ ತಿರುಗಿದ್ದು ಮಾತ್ರವಲ್ಲದೆ ಅಟ್ಲಾಂಟಿಕ್ ಸಾಗರವನ್ನು ದಾಟಿ ಅಮೆರಿಕಾದ ನ್ಯೂಜೆರ್ಸಿಯ ಎಡಿಸನ್ ನಗರದಲ್ಲಿ ಪ್ರತಿಷ್ಠಾಪನೆಗೊಳ್ಳಲಿದೆ.
ಉಡುಪಿ, ಮೇ 05 : ಶ್ರೀಕೃಷ್ಣ ದೇಗುಲ ಎಂದರೆ ಉಡುಪಿ. ಕನಕದಾಸರಿಗೊಲಿದ ಉಡುಪಿಯ ಶ್ರೀಕೃಷ್ಣ ಪೂರ್ವದಿಂದ ಪಶ್ಚಿಮಕ್ಕೆ ತಿರುಗಿದ ಇತಿಹಾಸವಿದೆ. ಇದೀಗ ಇತಿಹಾಸ ಮರುಕಳಿಸಲಿದೆ.
ಹೌದು, ಶ್ರೀಕೃಷ್ಣ ಪಶ್ಚಿಮಕ್ಕೆ ತಿರುಗಿದ್ದು ಮಾತ್ರವಲ್ಲದೆ ಅಟ್ಲಾಂಟಿಕ್ ಸಾಗರವನ್ನು ದಾಟಿ ಅಮೆರಿಕಾದ ನ್ಯೂಜೆರ್ಸಿಯ ಎಡಿಸನ್ ನಗರದಲ್ಲಿ ಪ್ರತಿಷ್ಠಾಪನೆಗೊಳ್ಳಲಿದೆ.
ಏನಪ್ಪಾ ವಿಶ್ವದ ದೊಡ್ಡಣ್ಣ ಎಂದೇ ಖ್ಯಾತಿ ಪಡೆದಿರುವ ಅಮೆರಿಕಾದಲ್ಲಿ ಕೃಷ್ಣನ ಪ್ರತಿಮೆಯೇ ಎಂದು ನೀವು ಅಚ್ಚರಿಪಡಬಹುದು. ಆದರೆ ಇದು ಉಡುಪಿಯಲ್ಲಿ ಆಚಾರ್ಯ ಮಧ್ವಾಚಾರ್ಯರು 700 ವರ್ಷಗಳ ಹಿಂದೆ ಪ್ರತಿಷ್ಠಾಪಿಸಿದ ಕೃಷ್ಣನಲ್ಲ.
ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರು ಸಾಲಿಗ್ರಾಮ ಶಿಲೆಯಲ್ಲಿ ನಿರ್ಮಿಸಿರುವ ಶ್ರೀಕೃಷ್ಣನ ಮೂರ್ತಿಯನ್ನು ಜೂನ್ 08 ರಂದು ಪ್ರತಿಷ್ಠಾಪಿಸಲಿದ್ದಾರೆ. ಇದರ ವಿಶೇಷಗಳೇನು? ಈ ವಿಗ್ರಹ ಪ್ರತಿಸ್ಠಾಪನೆಗೆ ತಗುಲಿರುವ ವೆಚ್ಚ ಇತರೆ ಮಾಹಿತಿಗೆ ಮುಂದೆ ಓದಿ.

35 ಕೋಟಿ ರು. ವೆಚ್ಚದಲ್ಲಿ ನಿರ್ಮಾಣ
ಅಮೆರಿಕಾದಲ್ಲಿ ತಲೆ ಎತ್ತಲಿರುವ ಈ ಪ್ರಥಮ ಕೃಷ್ಣ ಮಂದಿರದ ನಿರ್ಮಾಣ ಕಾರ್ಯಕ್ಕಾಗಿ ನ್ಯೂಜೆರ್ಸಿಯ ಎಡಿಸನ್ ನಗರದಲ್ಲಿ ಸುಮಾರು 35 ಕೋಟಿ ರು. ಅಧಿಕ ವೆಚ್ಚದಲ್ಲಿ 4.50 ಎಕರೆ ವಿಸ್ತೀರ್ಣವುಳ್ಳ ಅರಮನೆಯಂತಹ ಬೃಹತ್ ಚರ್ಚ್ ವೊಂದನ್ನು ಖರೀದಿಸಿದ್ದು, ಅದರಲ್ಲಿ ಈ ಸಾಲಿಗ್ರಾಮದಿಂದ ಮಾಡಲ್ಪಟ್ಟ ಕಡೆಗೋಲು ಕೃಷ್ಣನ ಪ್ರತಿಷ್ಠಾಪನೆ ನಡೆಯಲಿದೆ.

ಶ್ರೀಕೃಷ್ಣ ವಿಗ್ರಹದ ವೈಶಿಷ್ಟ್ಯ
ಸುಮಾರು ಮೂರೂವರೆ ಅಡಿ ಎತ್ತರದ ಕುಡುಗೋಲುಧಾರಿ ಶ್ರೀಕೃಷ್ಣನ ವಿಗ್ರಹವನ್ನು ನೇಪಾಳದ ಗಂಡಕಿ ನದಿಯ ಗೋಶಾಲೆ ಬಳಿಯೊಂದರಲ್ಲಿ ದೊರಕಿದ ಸಾಲಿಗ್ರಾಮ ಶಿಲೆಯಿಂದ ಕರಾವಳಿಯ ಶಿಲ್ಪಿಗಳು ರಚಿಸಿದ್ದಾರೆ. ಈ ಕೃಷ್ಣನ ಮೂರ್ತಿ ಮಾಡಲು ಆರು ತಿಂಗಳ ಕಾಲ ಕರಾವಳಿಯ ಶಿಲ್ಪಿಗಳು ಶ್ರಮಪಟ್ಟು ಮೂರ್ತಿ ನಿರ್ಮಾಣದ ಕಾರ್ಯವನ್ನು ಪೂರ್ಣಗೊಳಿಸಿದ್ದಾರೆ.

ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯಿಂದ ಪ್ರತಿಷ್ಠಾಪನೆ
ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರು ಸಾಲಿಗ್ರಾಮ ಶಿಲೆಯಲ್ಲಿ ನಿರ್ಮಿಸಿರುವ ಶ್ರೀಕೃಷ್ಣನ ಮೂರ್ತಿಯನ್ನು ಜೂನ್ 08 ರಂದು ಪ್ರತಿಷ್ಠಾಪಿಸಲಿದ್ದಾರೆ.

ಪೇಜಾವರ ಶ್ರೀಗಳಿಂದ ವಿಶೇಷ ಪೂಜೆ
ಪುತ್ತಿಗೆ ಶ್ರೀಗಳ ನೇತೃತ್ವದಲ್ಲಿ ಅಮೆರಿಕಾದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ಶ್ರೀಕೃಷ್ಣನ ಮೂರ್ತಿಯನ್ನು ಬುಧವಾರ ಉಡುಪಿಯಲ್ಲಿ ಸರ್ವ ಗೌರವಗಳೊಂದಿಗೆ ಆದರದಿಂದ ಸ್ವಾಗತಿಸಲಾಯಿತು. ಶ್ರೀಕೃಷ್ಣನ ಮೂರ್ತಿಯನ್ನು ನವರತ್ನ ಖಚಿತ ರಥದಲ್ಲಿಟ್ಟು, ರಥಬೀದಿಯಲ್ಲಿ ಮೆರವಣಿಗೆ ಮಾಡಿ ಬಳಿಕ ಮೂರ್ತಿಯನ್ನು ಮಧ್ವ ಸರೋವರದಲ್ಲಿ ಸ್ನಾನ ಮಾಡಿಸಿ, ಪರ್ಯಾಯ ಪೇಜಾವರ ಶ್ರೀಗಳ ಉಪಸ್ಥಿತಿಯಲ್ಲಿ ಪೂಜಿಸಲಾಯಿತು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications