ಎರಡು ಗಂಟೆಯಲ್ಲೇ ತಿಮ್ಮಪ್ಪನ ದರ್ಶನ ಭಾಗ್ಯ?
ತಿರುಮಲ, ಜು.10: ತಿರುಪತಿ ತಿಮ್ಮಪ್ಪ ದೇವರ ದರ್ಶನಕ್ಕಾಗಿ ಗಂಟೆಗಟ್ಟಲೇ, ದಿನಗಟ್ಟಲೇ ಕಾದು ಕಾದು ಸುಸ್ತಾಗುತ್ತಿದ್ದ ಭಕ್ತರಿಗೆ ಸಂತಸದ ಸುದ್ದಿ ಬಂದಿದೆ. ಇನ್ಮುಂದೆ ಕೇವಲ ಎರಡೇ ಗಂಟೆಯಲ್ಲಿ ತಿಮ್ಮಪ್ಪನ ದರ್ಶನ ಮಾಡಬಹುದಂತೆ.
ಇಂಥದ್ದೊಂದು ಕ್ರಾಂತಿಕಾರಿ ಬದಲಾವಣೆಯನ್ನು ತಿರುಮಲ ತಿರುಪತಿ ಟ್ರಸ್ಟ್ ಜಾರಿಗೆ ತರಲಿದೆ ಎಂದು ಆಂಧ್ರಪ್ರದೇಶದ ಸಚಿವ ಪೈಡಿಕೊಂಡಲ ಮಾಣಿಕ್ಯಾಲ ರಾವ್ ಹೇಳಿದ್ದಾರೆ. ದೇವುನಿಕಡಪದಲ್ಲಿ ಪುರಾತನ ದೇಗುಲ ಲಕ್ಷ್ಮಿ ವೆಂಕಟೇಶ್ವರನ ದರ್ಶನ ಪಡೆದ ನಂತರ ಮಾತನಾಡಿದ ಸಚಿವ ಮಾಣಿಕ್ಯಾಲ ರಾವ್ ಅವರು ಈ ಸಂತಸದ ಸುದ್ದಿ ನೀಡಿದ್ದಾರೆ.
ಭಕ್ತಾದಿಗಳು ಗಂಟೆಗಟ್ಟಲೇ ಕ್ಯೂ ನಿಲ್ಲುವುದನ್ನು ತಪ್ಪಿಸಲು ಒಂದು ಸಾಫ್ಟ್ ವೇರ್ ಕಂಡು ಹಿಡಿಯಲಾಗಿದು, ಇದರ ಪ್ರಕಾರ ನಿಗದಿತ ಸಮಯಕ್ಕೆ ಭಕ್ತರು ಸರತಿ ಸಾಲಿನಲ್ಲಿ ಬಂದು ಸೇರಿ ಕೊಂಡರೆ ಸಾಕು. ಈ ಮೂಲಕ ಎರಡು ಗಂಟೆಯೊಳಗೆ ದರ್ಶನ ಪಡೆದುಕೊಳ್ಳಬಹುದಾಗಿದೆ ಎಂದಿದ್ದಾರೆ.

ಈಗಾಗಲೇ ಮೂರು ರೀತಿಯ ಸಾಫ್ಟ್ ವೇರ್ ಗಳನ್ನು ಪ್ರಯೋಗಕ್ಕೆ ಒಳಪಡಿಸಲಾಗಿದ್ದು, ಶೀಘ್ರದಲ್ಲೇ ಸೂಕ್ತವಾದ ತಂತ್ರಾಂಶವನ್ನು ಅಳವಡಿಸಿಕೊಂಡು ಸರತಿ ಸಾಲಿನ ದಟ್ಟಣೆಯನ್ನು ಕರಗಿಸಲಾಗುವುದು ಎಂದರು.
ಇದೇ ವೇಳೆ ರಾಜ್ಯದಲ್ಲಿ ಸುಮಾರು 28 ಸಾವಿರ ಎಕರೆ ದತ್ತಿ ಭೂಮಿ ಒತ್ತುವರಿಯಾಗಿದ್ದು, ಈ ಬಗ್ಗೆ ತನಿಖೆ ನಡೆಸಲು ನಿವೃತ್ತ ನ್ಯಾಯಾಧೀಶರ ನೇತೃತ್ವದ ತಂಡದಿಂದ ತನಿಖೆ ಕೈಗೊಳ್ಳಲಾಗುತ್ತದೆ ಎಂದರು.
ಇತ್ತೀಚೆಗೆ ದರ್ಶನ ವ್ಯವಸ್ಥೆ ಸುಧಾರಣೆ ಮಾಡಲಾಗಿತ್ತು. ವೆಂಡಿ ವಾಕಿಲಿ ಬಳಿ (ಬೆಳ್ಳಿ ಬಾಗಿಲು ಬಳಿ) ಬಂದಾಗ 2 ಸಾಲುಗಳಲ್ಲಿ ಭಕ್ತರನ್ನು ಸರದಿಯಲ್ಲಿ ನಿಲ್ಲಿಸಲಾಗುವುದು. ಅಲ್ಲಿಂದ ಮುಂದಕ್ಕೆ, ಅನತಿ ದೂರದಲ್ಲಿರುವ (ಜಯ-ವಿಜಯ ದ್ವಾರದ ಬಳಿ) ಮಹಾಮೂರ್ತಿಯನ್ನು ನೋಡಲು 2 ಹಂತಗಳಲ್ಲಿ ಭಕ್ತರನ್ನು ಒಳಗೆ ಬಿಡಲಾಗುವುದು. ಇದಕ್ಕಾಗಿ ತುಸು ಎತ್ತರದಲ್ಲಿ, ಮರದಿಂದ ಮಾಡಿದ ವಿಶೇಷ ವೇದಿಕೆ (wooden ramp) ನಿರ್ಮಿಸಲಾಗುವುದು. ಅದರ ಮೇಲೆ ಒಂದು ಸಾಲಿನಲ್ಲಿರುವ ಭಕ್ತರನ್ನು ಬಿಟ್ಟು ದೇವರ ದರ್ಶನಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಟಿಟಿಡಿ ಪ್ರಕಟಿಸಿತ್ತು.ಇದಕ್ಕೂ ಮುನ್ನ ಸಂಜೆ ವೇಳೆಯಲ್ಲಿ VVIP ದರ್ಶನವನ್ನು ಸ್ಥಗಿತಗೊಳಿಸುವ ಬಗ್ಗೆ ಟಿಟಿಡಿ ಚಿಂತನೆ ನಡೆಸಿತ್ತು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications