'ಸಾರ್ವಜನಿಕ ಕಣ್ಣು' ಅಂದ್ರೇನು ಗೊತ್ತಾ ನಿಮಗೆ?
ಬೆಂಗಳೂರಿನ ರಸ್ತೆಯಲ್ಲಿ ಸಂಚರಿಸುತ್ತಿದ್ದಿರಿ. ನಿಮ್ಮ ಕಣ್ಣ ಮುಂದೆಯೇ ಯಾರೋ ಒಬ್ಬರು ಸಂಚಾರ ನಿಯಮವನ್ನು ಉಲ್ಲಂಘಿಸಿದ್ದಾರೆ. ದುರದೃಷ್ಟಕ್ಕೆ ಅಲ್ಲಿ ಯಾರೂ ಟ್ರಾಫಿಕ್ ಪೊಲೀಸ್ ಇಲ್ಲವೆಂದು ನೀವು ಸುಮ್ಮನಾಗಬೇಕಿಲ್ಲ. ನೀವೇ ಸವಾರರ ವಿರುದ್ಧ ಕಾರ್ಯಾಚರಣೆ ನಡೆಸಬಹುದು.
ಹೌದು. ಎಲ್ಲಾದರೂ ವಾಹನ ಸವಾರರು ಸಂಚಾರ ನಿಯಮ ಉಲ್ಲಂಘಿಸಿದ್ದು, ಕಂಡು ಬಂದಲ್ಲಿ ಸಾರ್ವಜನಿಕರು ತಮ್ಮ ಮೊಬೈಲ್, ಕ್ಯಾಮರಾಗಳಲ್ಲಿ ಅದರ ದೃಶ್ಯ ಗಳನ್ನು ಸೆರೆ ಹಿಡಿದು ಬೆಂಗಳೂರು ನಗರ ಸಂಚಾರ ಪೊಲೀಸರ ವೆಬ್ಸೈಟ್ಗೆ ರವಾನಿಸಿದರೆ ಸಾಕು, ಪೊಲೀಸರು ಅದರ ಆಧಾರ ಮೇಲೆ ವಾಹನ ಸವಾರರಿಗೆ ನೋಟಿಸ್ ಕಳುಹಿಸುವ ಮೂಲಕ ದಂಡ ವಸೂಲಿ ಮಾಡುತ್ತಿದ್ದಾರೆ.
ಬೆಂಗಳೂರಿನ ಸಂಚಾರ ಪೊಲೀಸರು ಎರಡು ವರ್ಷಗಳ ಹಿಂದೆ ಆರಂಭಿಸಿರುವ ಸಾರ್ವಜನಿಕ ಕಣ್ಣು(ಪಬ್ಲಿಕ್ ಐ) ಯಶಸ್ವಿಯಾಗಿದ್ದು ಇದೀಗ ಮೈಸೂರಿನಲ್ಲೂ ಆರಂಭಗೊಂಡಿದೆ.

ದೂರು ದಾಖಲಿಸುವುದು ಹೇಗೆ?
ಸಂಚಾರ ನಿಯಮ ಉಲ್ಲಂಘಿಸುವ ವಾಹನಗಳ ಫೋಟೋ ತೆಗೆಯುವಾಗ ವಾಹನದ ನೋಂದಣಿ ಸಂಖ್ಯೆ ಸ್ಪಷ್ಟವಾಗಿ ಕಾಣುವಂತೆ ಕ್ಲಿಕ್ ಮಾಡಬೇಕು. ಬಳಿಕ ಸಂಚಾರ ಪೊಲೀಸರ ವೆಬ್ಸೈಟ್ಗೆ ತೆರಳಿ ಪಬ್ಲಿಕ್ ಐ ವಿಭಾಗಕ್ಕೆ ಹೋಗಿ ನಿಯಮ ಉಲ್ಲಂಘಿಸಿದ ವಾಹನ ಸಂಖ್ಯೆ, ಸಂಚಾರ ಉಲ್ಲಂಘನೆಯ ಮಾದರಿ, ದಿನಾಂಕ, ಸಮಯ, ಸ್ಥಳವನ್ನು ನಮೂದಿಸಿ ತೆಗೆದ ಫೋಟೋವನ್ನು ಅಪ್ಲೋಡ್ ಮಾಡಿದರೆ ಆಯಿತು. ಸಂಚಾರ ಪೊಲೀಸರು ಈ ಮಾಹಿತಿಯ ಆಧಾರ ಮೇಲೆ ಸವಾರರ ಮೇಲೆ ದಂಡ ವಿಧಿಸುತ್ತಾರೆ. ಬೆಂಗಳೂರು ಸಂಚಾರ ಪೊಲೀಸರ ಆಂಡ್ರಾಯ್ಡ್ ಆಪ್ ಡೌನ್ಲೋಡ್ ಮಾಡುವ ಮೂಲಕವು ಸಾರ್ವಜನಿಕರು ದೂರು ದಾಖಲಿಸಬಹುದು.
ಪಬ್ಲಿಕ್ ಐ ವೆಬ್ಸೈಟ್ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ:www.bangaloretrafficpolice.gov.in
ಆಂಡ್ರಾಯ್ಡ್ ಆಪ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ: play.google.com/store/
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications