ಧಾಂಧಲೆ ಮಾಡಿದ್ದು ನಾವಲ್ಲ ವಿಶ್ವನಾಥ್ ಪುತ್ರ
ಮೈಸೂರು, ಜು. 8 : ಹುಣಸೂರು ಪಟ್ಟಣದ ಹಳ್ಳಿಮನೆ ಹೋಟೆಲ್ ನಲ್ಲಿ ನಾನು ಮತ್ತು ನನ್ನ ಸ್ನೇಹಿತರು ದಾಂಧಲೆ ಮಾಡಿಲ್ಲ ಎಂದು ಪೂರ್ವಜ್ ವಿಶ್ವನಾಥ್ ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ನಾನು ಸೋಮವಾರ ರಾತ್ರಿ ಮೈಸೂರಿನಲ್ಲಿದ್ದೆ. ಯಾರು ದಾಂಧಲೆ ಮಾಡಿದ್ದಾರೆ ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.
ಹಳ್ಳಿಮನೆ ಹೋಟೆಲ್ ಮಾಲೀಕ ಸಂದೀಪ್ ನನಗೆ ಪರಿಚಯವಿದ್ದಾರೆ. ನಮ್ಮ ಬಳಿ ಹಣಕಾಸಿನ ನೆರವನ್ನು ಪಡೆದಿದ್ದಾರೆ. ಆದರೆ, ನಮ್ಮ ವಿರುದ್ಧ ಏಕೆ ಹುಣಸೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ ಎಂದು ತಿಳಿದುಬಂದಿಲ್ಲ. ನಾವು ಹೋಟೆಲ್ ಗೆ ಹೋಗಿ ಯಾವುದೇ ದಾಂಧಲೆ ಮಾಡಿಲ್ಲ. ಘಟನೆಯ ಬಗ್ಗೆ ಸಂಪೂರ್ಣ ವಿವಿರ ಪಡೆದು ನಂತರ ಪ್ರತಿಕ್ರಿಯೆ ನೀಡುವುದಾಗಿ ಅವರು ತಿಳಿಸಿದ್ದಾರೆ.

ಹಿಂದಿನ ಸುದ್ದಿ : ಮೈಸೂರು ಕ್ಷೇತ್ರದ ಮಾಜಿ ಸಂಸದ ಎಚ್.ವಿಶ್ವನಾಥ್ ಪುತ್ರ ಸ್ನೇಹಿತರೊಂದಿಗೆ ಸೇರಿ ಹೋಟೆಲ್ ನಲ್ಲಿ ದಾಂಧಲೆ ಮಾಡಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ. ಹುಣಸೂರು ಪಟ್ಟಣದ ಹಳ್ಳಿಮನೆ ಹೋಟೆಲ್ ನಲ್ಲಿ ಪಿಠೋಪಕರಣ ಧ್ವಂಸಗೊಳಿಸಿ ದಾಂಧಲೆ ಮಾಡಿದ್ದಾರೆ.
ಮಾಜಿ ಸಂಸದ ಎಚ್.ವಿಶ್ವನಾಥ್ ಪುತ್ರ ಪೂರ್ವಜ್ ವಿಶ್ವನಾಥ್ ಹುಣಸೂರಿನಲ್ಲಿರುವ ಹಳ್ಳಿಮನೆ ಹೋಟೆಲ್ ನಲ್ಲಿ ಸ್ನೇಹಿತರೊಂದಿಗೆ ಸೇರಿ ದಾಂಧಲೆ ಮಾಡಿದ್ದಾರೆ. ಹೋಟೆಲ್ ನವರು ಬಿರಿಯಾನಿ ನೀಡಲಿಲ್ಲ ಎಂದು ಪೂರ್ವಜ್ ಗಲಾಟೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಸೋಮವಾರ ರಾತ್ರಿ ಹಳ್ಳಿಮನೆ ಹೋಟೆಲ್ ಗೆ ಸ್ನೇಹಿತರೊಂದಿಗೆ ಪೂರ್ವಜ್ ಆಗಮಿಸಿದ್ದರು. ಕುಡಿದ ಮತ್ತಿನಲ್ಲಿದ್ದ ಅವರು, ಹೋಟೆಲ್ ಸಿಬ್ಬಂದಿ ಬಿರಿಯಾನಿ ನೀಡಲಿಲ್ಲ ಎಂದು ಹೋಟೆಲ್ ನಲ್ಲಿದ್ದ ಪಾಟ್ ಗಳನ್ನು ಒಡೆದುಹಾಕಿ ಧಾಂಧಲೆ ಮಾಡಿದ್ದಾರೆ, ಹಟ್ ಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಹೋಟೆಲ್ ಸಿಬ್ಬಂದಿ ಹೇಳಿದ್ದಾರೆ.
ಹೋಟೆಲ್ ಮಾಲೀಕ ಸಂದೀಪ್ ಈ ಕುರಿತು ಹುಣಸೂರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನಲ್ಲಿ ಸೋಮವಾರ ರಾತ್ರಿ ವಿಶ್ವನಾಥ್ ಪುತ್ರ ಪೂರ್ವಜ್ 4-5 ಜನ ಸ್ನೇಹಿತರೊಂದಿಗೆ ಹೋಟೆಲ್ ಗೆ ಬಂದಿದ್ದರು. ಊಟ ಮತ್ತು ಮದ್ಯವನ್ನು ನೀಡುವಂತೆ ಕೇಳಿದರು. ಆದರೆ, ಹೋಟೆಲ್ ನಲ್ಲಿ ಮದ್ಯ ಲಭ್ಯವಿಲ್ಲ, ಊಟ ಕೊಡುತ್ತೇವೆ ಎಂದು ಹೇಳಿದೆವು. [ಚಿತ್ರ : ಪೂರ್ವಜ್ ಫೇಸ್ ಬುಕ್]
ಇದರಿಂದ ಕೋಪಗೊಂಡ ಅವರ ಸ್ನೇಹಿತರೊಂದಿಗೆ ಸೇರಿ ಹೋಟೆಲ್ ನಲ್ಲಿ ಧಾಂದಲೆ ಮಾಡಿದರು. ಪಿಠೋಪಕರಣ ದ್ವಂಸ ಮಾಡಿದರು. ಹಟ್ ಗಳಿಗೆ ಬೆಂಕಿ ಹಚ್ಚಿದರು. ಇದರಿಂದ ಹಟ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ ಎಂದು ಹೋಟೆಲ್ ಮಾಲೀಕರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications