ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಮಾಜಿ ಕ್ರಿಕೆಟರ್ ಸೌರವ್ ಗಂಗೂಲಿಗೆ ಜೀವ ಬೆದರಿಕೆ!

ಮಾಜಿ ಕ್ರಿಕೆಟರ್ ಸೌರವ್ ಗಂಗೂಲಿಗೆ ಜೀವ ಬೆದರಿಕೆ ಪತ್ರ ಬಂದಿದೆ. ಜನವರಿ 19ರಂದು ಪಶ್ಚಿಮ ಮಿಡ್ನಾಪುರ್ ಜಿಲ್ಲೆಯ ವಿದ್ಯಾಸಾಗರ್ ವಿವಿಯಲ್ಲಿ ನಡೆಯುವ ಅಂತರ ಕಾಲೇಜು ಕ್ರಿಕೆಟ್‌ ಕಾರ್ಯಕ್ರಮಕ್ಕೆ ಹಾಜರಾಗದಂತೆ ಎಚ್ಚರಿಕೆ ನೀಡಲಾಗಿದೆ.

By Mahesh

ಕೋಲ್ಕತಾ, ಜನವರಿ 09: ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಅವರಿಗೆ ಜೀವ ಬೆದರಿಕೆ ಪತ್ರ ಬಂದಿದೆ.

ಜನವರಿ 19ರಂದು ಪಶ್ಚಿಮ ಮಿಡ್ನಾಪುರ್ ಜಿಲ್ಲೆಯ ವಿದ್ಯಾಸಾಗರ್ ವಿಶ್ವ ವಿದ್ಯಾಲಯದಲ್ಲಿ ಆಯೋಜನೆಗೊಂಡಿರುವ ಅಂತರ ಕಾಲೇಜು ಕ್ರಿಕೆಟ್‌ ಕಾರ್ಯಕ್ರಮಕ್ಕೆ ಗಂಗೂಲಿ ಅವರು ಮುಖ್ಯ ಅತಿಥಿಯಾಗಿ ಹೋಗಬೇಕಿದೆ.

ಆದರೆ, ಈ ಕಾರ್ಯಕ್ರಮಕ್ಕೆ ಹಾಜರಾದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಸೌರವ್ ಗಂಗೂಲಿ ಅವರ ತಾಯಿ ನಿರೂಪ ಅವರಿಗೆ ಹೆಸರಿಗೆ ಬಂದಿರುವ ಪತ್ರದಲ್ಲಿ ಬೆದರಿಕೆ ಹಾಕಲಾಗಿದೆ.

Former India captain Sourav Ganguly receives death threat

ಒಂದು ವೇಳೆ ಎಚ್ಚರಿಕೆಯನ್ನು ಮೀರಿ ಕಾರ್ಯಕ್ರಮಕ್ಕೆ ಹಾಜರಾದರೆ ನಿಮ್ಮ ಮಗನನ್ನು ನೀವು ಮತೆ ನೋಡಲು ಸಾಧ್ಯವಿಲ್ಲ ಎಂದು ಪತ್ರದಲ್ಲಿ ಹೇಳಲಾಗಿದೆ.

ಈ ಪತ್ರದ ಬಗ್ಗೆ ಪತ್ರಿಕ್ರಿಯೆ ನೀಡಿದ ಗಂಗೂಲಿ, ಜನವರಿ 7ರಂದು ಬೆದರಿಕೆ ಪತ್ರ ಬಂದಿದ್ದು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದೇನೆ ಎಂದಿದ್ದಾರೆ. ಬಂಗಾಳ ಕ್ರಿಕೆಟ್ ಅಸೋಸಿಯೇಷನ್‌‌ನ ಅಧ್ಯಕ್ಷರಾಗಿರುವ ಗಂಗೂಲಿ ಅವರು ಇನ್ನೂ ಕೂಡಾ ಕಾರ್ಯಕ್ರಮಕ್ಕೆ ಹಾಜರಾಗುವ ಬಗ್ಗೆ ತೀರ್ಮಾನ ಕೈಗೊಂಡಿಲ್ಲ. ಈ ಪ್ರಕರಣದ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ ಎಂದು ಪಶ್ಚಿಮ ಮಿಡ್ನಾಪುರದ ಎಸ್ಪಿ ಭಾರ್ತಿ ಘೋಶ್ ಹೇಳಿದ್ದಾರೆ. (ಪಿಟಿಐ)

Story first published: Wednesday, January 3, 2018, 10:04 [IST]
Other articles published on Jan 3, 2018
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X