ಬೆಂಗಳೂರು, ಆಗಸ್ಟ್ 27: ಶ್ರೀಲಂಕಾ ಪ್ರವಾಸದಲ್ಲಿರುವ ಕರ್ನಾಟಕದ ಸ್ಟಾರ್ ಆಟಗಾರರಾದ ಸ್ಟುವರ್ಟ್ ಬಿನ್ನಿ ಹಾಗೂ ಕರುಣ್ ನಾಯರ್ ಗಾಗಿ ಕೆಪಿಎಲ್ ಟೂರ್ನಿ ವೇಳಾಪಟ್ಟಿ ಬದಲಾಯಿಸಲಾಗಿದೆ ಎಂದು ಕೆಎಸ್ ಸಿಎ ವಕ್ತಾರ ವಿನಯ್ ಮೃತ್ಯುಂಜಯ ಅವರು ಹೇಳಿದ್ದಾರೆ.
ಕರ್ನಾಟಕ ಪ್ರೀಮಿಯರ್ ಲೀಗ್ (ಕೆಪಿಎಲ್) ನ 4ನೇ ಸೀಸನ್ ಪಂದ್ಯಾವಳಿಗಳು ಸೆಪ್ಟೆಂಬರ್ 2ರಿಂದ ಆರಂಭವಾಗಬೇಕಿತ್ತು. ಇದಕ್ಕೆ ಬದಲಾಗಿ ಸೆ. 3 ರಿಂದ ಆರಂಭಗೊಳ್ಳಲಿದೆ ಎಂದು ವಿನಯ್ ಮೃತ್ಯುಂಜಯ ಹೇಳಿದ್ದಾರೆ.