ನವದೆಹಲಿ, ಮೇ 29: ಗಡಿಯಾಚೆಗಿನ ಭಯೋತ್ಪಾದನಾ ಕೃತ್ಯಗಳಿಗೆ ಕುಮ್ಮುಕ್ಕು ನೀಡುತ್ತಿರುವ ಪಾಕಿಸ್ತಾನದ ಆಟಗಾರರಿಗೆ ಭಾರತದಲ್ಲಿ ಕ್ರಿಕೆಟ್ ಆಡಲು ನಿರಾಕರಿಸಲಾಗಿದೆ. ಅಲ್ಲದೆ, ಭಾರತ ಹಾಗೂ ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಸರಣಿ ಸದ್ಯಕ್ಕೆ ಸಾಧ್ಯವಿಲ್ಲ ಎಂದು ಕೇಂದ್ರ ಕ್ರೀಡಾ ಸಚಿವ ವಿಜಯ್ ಗೋಯಲ್ ಅವರು ಸೋಮವಾರ(ಮೇ 29) ದಂದು ಘೋಷಿಸಿದ್ದಾರೆ.
ಅಂತಾರಾಷ್ಟ್ರೀಯ ಕ್ರಿಕೆಟ್ ಆಯೋಜನೆಯ ಚಾಂಪಿಯನ್ಸ್ ಟ್ರೋಫಿ 2017ರ ಲೀಗ್ ಪಂದ್ಯದಲ್ಲಿ ಜೂನ್ 04ರಂದು ಭಾರತ ಹಾಗೂ ಪಾಕಿಸ್ತಾನ ತಂಡಗಳು ಪರಸ್ಪರ ಎದುರಾಗಲಿವೆ.[ಪ್ರೋ ಕಬಡ್ಡಿ ಲೀಗ್ ನಲ್ಲಿ ಪಾಕಿಸ್ತಾನಿಗಳಿಗೆ ಅವಕಾಶವಿಲ್ಲ : ಭಾರತ ಸರ್ಕಾರ]
ಕಬಡ್ಡಿ ಲೀಗ್ ಮಾತ್ರವಲ್ಲದೇ, ಹಾಕಿ ಹಾಗೂ ಕ್ರಿಕೆಟ್ ಗಳಲ್ಲೂ ಪಾಕಿಸ್ತಾನಿ ಆಟಗಾರರಿಗೆ ಆಡಲು ಅವಕಾಶ ಮಾಡಿಕೊಟ್ಟಿಲ್ಲ. ಭಾರತ-ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಸಂಬಂಧ ಹದಗೆಟ್ಟಿದ್ದು, ಇತ್ತೀಚಿನ ಕುಲಭೂಷಣ್ ಜಾಧವ್ ಪ್ರಕರಣದ ನಂತರ ಪರಿಸ್ಥಿತಿ ಇನ್ನಷ್ಟು ಉಲ್ಬಣಿಸಿದೆ.