ಬೆಂಗಳೂರು, ಜುಲೈ 30 : ಐಸಿಸಿ ಮಹಿಳಾ ವಿಶ್ವಕಪ್ ಪಂದ್ಯಾವಳಿಯಲ್ಲಿ ಟೀಂ ಇಂಡಿಯಾ ಪರ ಆಡಿದ್ದ ಇಬ್ಬರು ಕನ್ನಡತಿಯರಿಗೆ ಕರ್ನಾಟಕ ರಾಜ್ಯ ಸರ್ಕಾರ ತಲಾ 25 ರು. ಲಕ್ಷ ಬಹುಮಾನ ಘೋಷಿಸಿದೆ.
ಕನ್ನಡದ ಕ್ರಿಕೆಟ್ ಪ್ರತಿಭೆ ರಾಜೇಶ್ವರಿ ತಂದೆಗೆ ಸಚಿನ್ ಮೆಚ್ಚುಗೆ
ಚಿಕ್ಕಮಗಳೂರಿನ ವೇದಾ ಕೃಷ್ಣಮೂರ್ತಿ ಹಾಗೂ ವಿಜಯಪುರದ ರಾಜೇಶ್ವರಿ ಗಾಯಕ್ವಾಡ್ ಅವರಿಗೆ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಅಭಿನಂದನೆಗಳನ್ನು ತಿಳಿಸಿ ತಲಾ 25 ಲಕ್ಷ ರು. ನಗದು ಬಹುಮಾನ ನೀಡುವುದಾಗಿ ಘೋಷಿಸಿದರು.
ಇಂಗ್ಲೆಂಡ್ ನಲ್ಲಿ ನಡೆದ ಐಸಿಸಿ ಮಹಿಳಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ 9 ರನ್ ಗಳಿಂದ ಪರಾಭವಗೊಂಡಿತ್ತು.
ಫೈನಲ್ ಪಂದ್ಯದಲ್ಲಿ ಆಡಿದ ಆಟಗಾರ್ತಿಯರಿಗೆ ಬಾರತೀಯ ಮಹಿಳಾ ಆಟಗಾರ್ತಿಯರಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) 50 ಲಕ್ಷ ಬಹುಮಾನ ಘೋಷಿಸಿತ್ತು.