ಅಹಮದಾಬಾದ್, ಫೆಬ್ರವರಿ 05: 2ನೇ ಆವೃತ್ತಿಯ ಅಂಧರ ಟ್ವೆಂಟಿ-20 ವಿಶ್ವಕಪ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು 9 ವಿಕೆಟ್ಗಳ ಅಂತರದಿಂದ ಸೋಲಿಸಿದೆ. ಟೂರ್ನಿಯುದ್ದಕ್ಕೂ ಉತ್ತಮ ಪ್ರದರ್ಶನ ನೀಡುತ್ತಿರುವ ಭಾರತ ತಂಡ, ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡ ಎನಿಸಿಕೊಂಡಿದೆ.
ಸರ್ದಾರ್ ವಲ್ಲಭಬಾಯಿ ಪಟೇಲ್ ಸ್ಟೇಡಿಯಂನಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ತಂಡಕ್ಕೆ ಚಂದನ್ ದೇಶಪ್ರಿಯ 62 ರನ್ ಗಳಿಸಿ ಆಸರೆಯಾದರು. ಉಳಿದಂತೆ ಸುಮನ್ 30ರನ್ ಗಳಿಸಿದರು. ಶ್ರೀಲಂಕಾ 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 186 ರನ್ ಗಳಿಸಿತು.
ರನ್ ಚೇಸ್ ನಲ್ಲಿ ಟೀಂ ಇಂಡಿಯಾಕ್ಕೆ ಪ್ರಕಾಶ್ ಅವರ ಭರ್ಜರಿ ಬ್ಯಾಟಿಂಗ್ ಆಸರೆಯಾಯಿತು. 20 ಬೌಂಡರಿಗಳಿದ್ದ ಅಜೇಯ 99 ರನ್ ಬಾರಿಸಿದ ಪ್ರಕಾಶ್ ಅವರು ಗೆಲುವಿನ ದಡ ಮುಟ್ಟಿಸಿದರು. ಭಾರತ ತಂದ 13.3 ಓವರ್ಗಳಲ್ಲಿ ಗೆಲುವಿನ ಗುರಿ ಮುಟ್ಟಿ ಪಂದ್ಯ ತನ್ನದಾಗಿಸಿಕೊಂಡಿತು. ಪ್ರಕಾಶ್ ಅವರಿಗೆ ಕೇತನ್ ಪಟೇಲ್ ಅಜೇಯ 56 ರನ್ ಗಳಿಸಿ ನೆರವಾದರು.