ಮುಂಬೈ, ಆಗಸ್ಟ್ 13: ಶ್ರೀಲಂಕಾ ವಿರುದ್ಧ ನಡೆಯಲಿರುವ ಐದು ಏಕದಿನ ಪಂದ್ಯಕ್ಕೆ ಇಂದು(ಆಗಸ್ಟ್ 13) ಟೀಂ ಇಂಡಿಯಾ ಆಯ್ಕೆ ಮಾಡಲಾಗಿದೆ. ಭಾನುವಾರ ಸಂಜೆ ಬಿಸಿಸಿಐ ಆಯ್ಕೆ ಸಮಿತಿ ಸಭೆ ಸೇರಿ ತಂಡ ಪ್ರಕಟಿಸಿದ್ದು, ಕರ್ನಾಟಕದ ಮನೀಶ್ ಪಾಂಡೆ ತಂಡಕ್ಕೆ ಮರಳಿದ್ದಾರೆ. ಯುವರಾಜ್ ಸಿಂಗ್ ತಂಡಕ್ಕೆ ಅಯ್ಕೆಯಾಗಿಲ್ಲ.
ಭಾರತದಿಂದ ಶ್ರೀಲಂಕಾ ಪ್ರವಾಸ ಪರಿಷ್ಕೃತ ವೇಳಾಪಟ್ಟಿ
ನಿರೀಕ್ಷೆಯಂತೆ ಮೊಹಮ್ಮದ್ ಶಮಿ, ಆರ್ ಅಶ್ವಿನ್, ರವೀಂದ್ರ ಜಡೇಜ ಅವರಿಗೆ ವಿಶ್ರಾಂತಿ ನೀಡಲಾಗಿದೆ. ರೋಹಿತ್ ಶರ್ಮ ಅವರಿಗೆ ಉಪ ನಾಯಕನ ಸ್ಥಾನಕ್ಕೆ ಬಡ್ತಿ ನೀಡಲಾಗಿದೆ.
ಎಂಎಸ್ ಧೋನಿ ಅವರನ್ನು ಆಯ್ಕೆ ಮಾಡಲಾಗಿದ್ದರೆ, ಸುರೇಶ್ ರೈನಾ ಹಾಗೂ ವೆಸ್ಟ್ ಇಂಡೀಸ್ ಸರಣಿಯಲ್ಲಿ ಉತ್ತಮವಾಗಿ ಆಡಿದ್ದ ದಿನೇಶ್ ಕಾರ್ತಿಕ್ ಅವರನ್ನು ಮತ್ತೊಮ್ಮೆ ನಿರ್ಲಕ್ಷಿಸಲಾಗಿದೆ.
ಶ್ರೀಲಂಕಾ ಕ್ರಿಕೆಟ್ ತಂಡಕ್ಕೆ ಚಂಡಿಮಾಲ್, ಉಪುಲ್ ತರಂಗಾ ನಾಯಕರು
ಆಯ್ಕೆ ಸಮಿತಿಯ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್ ಅವರ ನೇತೃತ್ವದ ಸಭೆಗೆ ಸಂದೀಪ್ ಸಿಂಗ್ ಹಾಗೂ ಗಾಂಧಿ ಅವರು ಸ್ಕೈಪ್ ಮೂಲಕ ಭಾಗವಹಿಸಿದ್ದರು.
ತಂಡ ಇಂತಿದೆ: ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ರೋಹಿತ್ ಶರ್ಮ(ಉಪ ನಾಯಕ), ಕೆಎಲ್ ರಾಹುಲ್, ಮನೀಶ್ ಪಾಂಡೆ, ಅಜಿಂಕ್ಯ ರಹಾನೆ, ಕೇದಾರ್ ಜಾಧವ್, ಎಂಎಸ್ ಧೋನಿ(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್, ಜಸ್ ಪ್ರೀತ್ ಬೂಮ್ರಾ, ಭುವನೇಶ್ವರ್ ಕುಮಾರ್, ಶಾರ್ದೂಲ್ ಠಾಕೂರ್.