ಹೈದರಾಬಾದ್, ಜುಲೈ 30 : ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡವನ್ನು ಫೈನಲ್ ವರೆಗೆ ಯಶಸ್ವಿಯಾಗಿ ಮುನ್ನಡೆಸಿದ್ದ ನಾಯಕಿ ಮಿಥಾಲಿ ರಾಜ್ಗೆ ಬಹುಮಾನಗಳ ಮಹಾಪೂರವೇ ಹರಿದು ಬರುತ್ತಿವೆ.
ಮಿಥಾಲಿ ರಾಜ್ ಗೆ ಐಷಾರಾಮಿ ಕಾರು ಉಡುಗೊರೆ
ಇಂಗ್ಲೆಂಡ್ ನಲ್ಲಿ ಮುಕ್ತಾಯವಾದ ಐಸಿಸಿ ಮಹಿಳಾ ವಿಶ್ವಕಪ್ ಟೂರ್ನಿ ಬಳಿಕ ತವರಿಗೆ ಆಗಮಿಸಿದ ನಾಯಕಿ ಮಿಥಾಲಿ ರಾಜ್ ಅವರನ್ನು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಸನ್ಮಾನಿಸಿ ಸ್ವಾಗತ ಕೋರಿದರು. ಇದೇ ವೇಳೆ ಸರ್ಕಾರದಿಂದ ಒಂದು ನಿವೇಶನ ಹಾಗೂ 1 ಕೋಟಿ. ರು.ನಗದು ಬಹುಮಾನ ನೀಡುವುದಾಗಿ ಅವರು ಘೋಷಿಸಿದರು.
ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಮಿಥಾಲಿ ಸಾಧನೆಯನ್ನು ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಶ್ಲಾಘಿಸಿದರು. ಮಿಥಾಲಿ ರಾಜ್ ಕೋಚ್ ಆರ್ ಎಸ್ ಆರ್ ಮೂರ್ತಿ ಅವರಿಗೂ ಕೂಡ ರಾಜ್ಯ ಸರ್ಕಾರ ಸನ್ಮಾನಿಸಿ 25 ಲಕ್ಷ ರು.ನಗದು ಬಹುಮಾನ ನೀಡುವುದಾಗಿ ಹೇಳಿದೆ.