ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts

ಆಸ್ಟ್ರೇಲಿಯಾ ಓಪನ್ ಗೆದ್ದ ಶ್ರೀಕಾಂತ್ ಗೆ ಆನಂದ್ ಮಹೀಂದ್ರಾ ಒಲವಿನ ಉಡುಗೊರೆ

ಬೆಂಗಳೂರು, ಜೂನ್ 27 : ಆಸ್ಟ್ರೇಲಿಯಾ ಓಪನ್ ಸೂಪರ್ ಸೀರಿಸ್ ಮತ್ತು ಇಂಡೊನೇಷ್ಯಾ ಓಪನ್ ಗೆದ್ದ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ ಕಿಡಾಂಬಿ ಶ್ರೀಕಾಂತ್ ಗೆ ಮಹೀಂದ್ರ ಗೂಪ್ ನ ಮುಖ್ಯಸ್ಥ ಆನಂದ್ ಮಹೀಂದ್ರಾ ಅವರು ಭರ್ಜರಿ ಉಡುಗೊರೆಯೊಂದನ್ನು ಘೋಷಿಸಿದ್ದಾರೆ.

ಭಾರತದ ಕಿಡಾಂಬಿ ಶ್ರೀಕಾಂತ್ ಮುಡಿಗೆ ಇಂಡೋನೇಷಿಯನ್ ಪ್ರಶಸ್ತಿಭಾರತದ ಕಿಡಾಂಬಿ ಶ್ರೀಕಾಂತ್ ಮುಡಿಗೆ ಇಂಡೋನೇಷಿಯನ್ ಪ್ರಶಸ್ತಿ

ಕಿಡಾಂಬಿ ಶ್ರೀಕಾಂತ್ ಗೆ ಆನಂದ್ ಮಹೀಂದ್ರಾ ಅವರು ಟಿಯುವಿ 300 ಕಾರನ್ನು ಉಡುಗೊರೆ ನೀಡುವುದಾಗಿ ಘೋಷಿಸಿದ್ದಾರೆ.

Kidambi Srikanth’s record win fetches him this amazing gift from Anand Mahindra

ಟ್ವೀಟಿಗರೊಬ್ಬರು ಶ್ರೀಕಾಂತ್ ಆಸ್ಟ್ರೇಲಿಯಾ ಓಪನ್ ಗೆಲ್ಲುವ ಮೂಲಕ ದೇಶದ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಇದಕ್ಕೆ ಬ್ಯಾಡ್ಮಿಂಟನ್ ಅಸೋಷಿಯೇಷನ್ ಆಫ್ ಇಂಡಿಯಾ ಸಂಸ್ಥೆ 5 ಲಕ್ಷ ನಗದು ಬಹುಮಾನ ಘೋಷಣೆ ಮಾಡಿದೆ.

ಕ್ರಿಕೆಟ್ ಗೆ ಹೋಲಿಸಿದರೆ ಇದು ಯಾವ ಬಹುಮಾನ ಇದಕ್ಕೆ ನೀವೇ ಏನಾದರೂ ಮಾಡಬೇಕು ಎಂದು ಆನಂದ್ ಮಹೀಂದ್ರ ಅವರಿಗೆ ಟ್ವೀಟ್ ಮಾಡಿದ್ದರು.

ಈ ಟ್ವೀಟ್ ಗೆ ಸ್ಪಂದಿಸಿದ ಆನಂದ್ ಮಹೀಂದ್ರ ಅವರು ಶ್ರೀಕಾಂತ್ ಗೆ ಮಹೇಂದ್ರ ಟಿಯುವಿ 300 ಕಾರನ್ನು ಉಡುಗೊರೆಯಾಗಿ ನೀಡುವುದಾಗಿ ಘೋಷಿಸಿದ್ದಾರೆ. ಇದನ್ನು ಸ್ವತಃ ತಾವೇ ಶ್ರೀಕಾಂತ್ ಅವರಿಗೆ ನೀಡುವುದಾಗಿ ಆನಂದ್ ಮಹೀಂದ್ರ ಟ್ವೀಟ್ ಮಾಡಿದ್ದಾರೆ.

ರಿಯೋ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಜಯಿಸಿದ್ದ ಸಿಂಧು ಹಾಗೂ ಕುಸ್ತಿಯಲ್ಲಿ ಕಂಚು ಪ್ರಶಸ್ತಿ ವಿಜೇತೆ ಸಾಕ್ಷಿ ಮಲಿಕ್ ಗೆ ಇವರೇ ಮಹಿಂದ್ರಾದ ಚೇರ್ಮನ್ ಹಾಗೂ ವ್ಯವಸ್ಥಾಪಕ ನಿರ್ದೇಶಕ ಆನಂದ್ ಮಹಿಂದ್ರಾ ಅವರು "ಎಸ್ ಯು ವಿ" ಮಹಿಂದ್ರಾ ಕಾರ್ ನ್ನು ಉಡುಗೊರೆಯಾಗಿ ನೀಡಿರುವುದನ್ನು ಇಲ್ಲಿ ಸ್ಮರಿಸಬಹುದು.

Story first published: Wednesday, January 3, 2018, 10:14 [IST]
Other articles published on Jan 3, 2018
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X