ಸಮ್ಮೇಳನಾಧ್ಯಕ್ಷರಿಗೆ ತರಳಬಾಳು ಶ್ರೀಗಳ ತಿರುಗೇಟು
ಚಿತ್ರದುರ್ಗ, ಫೆ. 6 : ಸಾಹಿತ್ಯ ಸಮ್ಮೇಳನಕ್ಕೆ ಮಠಾಧೀಶರು ಬರುವುದು ಬೇಡ ಎಂದು ಅಖಿಲ ಭಾರತ 75ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಪ್ರೋ ಎಲ್ ಬವಸರಾಜು ಅವರು ಹೇಳುವುದಾದರೆ, ಚಿತ್ರದುರ್ಗದಲ್ಲಿ ಮಠಾಧೀಶರುಗಳೇ ಸಮ್ಮೇಳನ ಸಂಘಟಿಸುತ್ತಿದ್ದಾರೆ ಎಂದ ಮೇಲೂ ಅಧ್ಯಕ್ಷ ಸ್ಥಾನ ಅಲಂಕರಿಸಿದ್ದಾದರೂ ಏಕೆ ? ಆ ಸ್ಥಾನವನ್ನು ತಿರಸ್ಕರಿಸಿ ಮೈಸೂರಿನಲ್ಲಿಯೇ ಇರಬಹುದಾಗಿತ್ತು. ಇಲ್ಲಿಗೆ ಬರಬಾರದಿತ್ತು ಎಂದು ತರಳಬಾಳು ಜಗದ್ಗುರು ಡಾ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಬಸವರಾಜು ಅವರು ಮಠಾಧೀಶರು ನಮ್ಮ ಶತ್ರು ಎಂದು ಏಕೆ ಮಾತನಾಡಿದ್ದರೋ ನನಗೆ ಗೊತ್ತಿಲ್ಲ. ಸಾಹಿತಿಗಳು ಒಂದು ಸ್ಥಾನಮಾನ ಪಡೆದಿದ್ದರೆ ಅದು ಮಠಾಧೀಶರು ನಡೆಸುತ್ತಿರುವ ಶಾಲೆ, ಕಾಲೇಜಿಗಳಿಂದ, ಬಸವರಾಜು ಬಿಸಿರಕ್ತದ ಯುವಕರಾಗಿದ್ದಾಗ ಈ ಹೇಳಿಕೆ ನೀಡಿದ್ದರೆ ಸೂಕ್ತ ಇತ್ತು ಎಂದರು. ಬಸವರಾಜು ಅವರಿಗೆ ಮಠಗಳು ಶತ್ರುಗಳಾಗಿದ್ದರೆ, ಅವರು ರಚಿಸಿರುವ ಕೃತಿಯನ್ನು ಚಿತ್ರದುರ್ಗದ ಬೃಹನ್ಮಠದಿಂದ ಪ್ರಕಟಿಸಿದಾದರೂ ಏಕೆ ? ಅವರ ಶಬ್ಧಮಣಿ ದರ್ಪಣ, ಶೂನ್ಯ ಸಂಪಾದನೆ ಕೃತಿಗಳ ಬಿಡುಗಡೆಗೆ ಮಲ್ಲಿಕಾರ್ಜುನ ಮುರುಘರಾಜೇಂದ್ರ ಶೀಗಳ ಕೂಡುಗೆ ಇದೆ ಎಂಬುದನ್ನು ಮರೆಯಬಾರದು ಎಂದರು.
ಪ್ರೋ ಎಲ್ ಬಸವರಾಜು ನೀಡಿರುವ ಹೇಳಿಕೆಯನ್ನು ನಾವು ನಿರ್ಲಕ್ಷಿಸುತ್ತೇವೆ ಎಂದು ಚಿತ್ರದುರ್ಗ ಬೃಹನ್ಮಠದ ಶಿವಮೂರ್ತಿ ಮುರುಘರಾಜೇಂದ್ರ ಸ್ವಾಮೀಜಿಗಳು ಹೇಳಿದ್ದಾರೆ. ಬಸವರಾಜು ಅವರು ಯಾವ ಅರ್ಥದಲ್ಲಿ ಈ ಹೇಳಿಕೆ ಗೊತ್ತಿಲ್ಲ. ಈ ಬಗ್ಗೆ ನಾನು ಹೆಚ್ಚು ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ ಎಂದು ಅವರು ಹೇಳಿದರು.
(ದಟ್ಸ್ ಕನ್ನಡ ವಾರ್ತೆ)
ಚಿತ್ರದುರ್ಗ ಸಾಹಿತ್ಯ ಸಮ್ಮೇಳನದ ಚಿತ್ರಗಳು
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications