ಸಮ್ಮೇಳನಾಧ್ಯಕ್ಷರಿಗೆ ತರಳಬಾಳು ಶ್ರೀಗಳ ತಿರುಗೇಟು
ಚಿತ್ರದುರ್ಗ, ಫೆ. 6 : ಸಾಹಿತ್ಯ ಸಮ್ಮೇಳನಕ್ಕೆ ಮಠಾಧೀಶರು ಬರುವುದು ಬೇಡ ಎಂದು ಅಖಿಲ ಭಾರತ 75ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಪ್ರೋ ಎಲ್ ಬವಸರಾಜು ಅವರು ಹೇಳುವುದಾದರೆ, ಚಿತ್ರದುರ್ಗದಲ್ಲಿ ಮಠಾಧೀಶರುಗಳೇ ಸಮ್ಮೇಳನ ಸಂಘಟಿಸುತ್ತಿದ್ದಾರೆ ಎಂದ ಮೇಲೂ ಅಧ್ಯಕ್ಷ ಸ್ಥಾನ ಅಲಂಕರಿಸಿದ್ದಾದರೂ ಏಕೆ ? ಆ ಸ್ಥಾನವನ್ನು ತಿರಸ್ಕರಿಸಿ ಮೈಸೂರಿನಲ್ಲಿಯೇ ಇರಬಹುದಾಗಿತ್ತು. ಇಲ್ಲಿಗೆ ಬರಬಾರದಿತ್ತು ಎಂದು ತರಳಬಾಳು ಜಗದ್ಗುರು ಡಾ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಬಸವರಾಜು ಅವರು ಮಠಾಧೀಶರು ನಮ್ಮ ಶತ್ರು ಎಂದು ಏಕೆ ಮಾತನಾಡಿದ್ದರೋ ನನಗೆ ಗೊತ್ತಿಲ್ಲ. ಸಾಹಿತಿಗಳು ಒಂದು ಸ್ಥಾನಮಾನ ಪಡೆದಿದ್ದರೆ ಅದು ಮಠಾಧೀಶರು ನಡೆಸುತ್ತಿರುವ ಶಾಲೆ, ಕಾಲೇಜಿಗಳಿಂದ, ಬಸವರಾಜು ಬಿಸಿರಕ್ತದ ಯುವಕರಾಗಿದ್ದಾಗ ಈ ಹೇಳಿಕೆ ನೀಡಿದ್ದರೆ ಸೂಕ್ತ ಇತ್ತು ಎಂದರು. ಬಸವರಾಜು ಅವರಿಗೆ ಮಠಗಳು ಶತ್ರುಗಳಾಗಿದ್ದರೆ, ಅವರು ರಚಿಸಿರುವ ಕೃತಿಯನ್ನು ಚಿತ್ರದುರ್ಗದ ಬೃಹನ್ಮಠದಿಂದ ಪ್ರಕಟಿಸಿದಾದರೂ ಏಕೆ ? ಅವರ ಶಬ್ಧಮಣಿ ದರ್ಪಣ, ಶೂನ್ಯ ಸಂಪಾದನೆ ಕೃತಿಗಳ ಬಿಡುಗಡೆಗೆ ಮಲ್ಲಿಕಾರ್ಜುನ ಮುರುಘರಾಜೇಂದ್ರ ಶೀಗಳ ಕೂಡುಗೆ ಇದೆ ಎಂಬುದನ್ನು ಮರೆಯಬಾರದು ಎಂದರು.
ಪ್ರೋ ಎಲ್ ಬಸವರಾಜು ನೀಡಿರುವ ಹೇಳಿಕೆಯನ್ನು ನಾವು ನಿರ್ಲಕ್ಷಿಸುತ್ತೇವೆ ಎಂದು ಚಿತ್ರದುರ್ಗ ಬೃಹನ್ಮಠದ ಶಿವಮೂರ್ತಿ ಮುರುಘರಾಜೇಂದ್ರ ಸ್ವಾಮೀಜಿಗಳು ಹೇಳಿದ್ದಾರೆ. ಬಸವರಾಜು ಅವರು ಯಾವ ಅರ್ಥದಲ್ಲಿ ಈ ಹೇಳಿಕೆ ಗೊತ್ತಿಲ್ಲ. ಈ ಬಗ್ಗೆ ನಾನು ಹೆಚ್ಚು ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ ಎಂದು ಅವರು ಹೇಳಿದರು.
(ದಟ್ಸ್ ಕನ್ನಡ ವಾರ್ತೆ)
ಚಿತ್ರದುರ್ಗ ಸಾಹಿತ್ಯ ಸಮ್ಮೇಳನದ ಚಿತ್ರಗಳು
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications