ಪ್ರೇಮಿಗಳ ದಿನಾಚರಣೆ ಆಚರಿಸಲಿ ಬಿಡಿ: ಬಸವರಾಜು
ಚಿತ್ರದುರ್ಗ, ಫೆ. 8 : ಮತಾಂತರ ವಿರೋಧಿಸುವವರು ಅಧರ್ಮಿಷ್ಟರು, ಸ್ವಾಮಿ ಎಂದು ಕರೆಸಿಕೊಳ್ಳುವ ಅರ್ಹತೆ ಯಾರಿಗೂ ಇಲ್ಲ. ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಉದ್ಯೋಗಿ ಕೊಡಿ, ಯುವಜನತೆ ಪ್ರೇಮಿಗಳ ದಿನ ಆಚರಿಸಿದರೆ ಏನಾಗಲಿದೆ. ಅಖಿಲ ಭಾರತ 75ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಎಲ್ ಬಸವರಾಜು ಅವರ ಬೀಸಿದ ಮಾತಿನ ಚಾಟಿ ಇದು. ಶನಿವಾರ ಮಧ್ಯಾಹ್ನ ನಡೆದ ಸಮ್ಮೇಳನಾಧ್ಯರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಹಲವು ಪ್ರಶ್ನೆಗಳಿಗೆ ಅವರು ಹಾಸ್ಯ, ವಿಡಂಬನೆ, ಲೇವಡಿಯ ಬಾಣಗಳನ್ನು ಬಿಟ್ಟು ಸಾಹಿತ್ಯಾಭಿಮಾನಿಗಳ ಹೃದಯ ಗೆದ್ದರು.
ಮತಾಂತರಕ್ಕೆ ತಡೆಯೊಡ್ಡುವವರು ಸನಾತನವಾದಿಗಳು. ತಮ್ಮ ಸುಖಕ್ಕಾಗಿ ಜಾತಿ ಹೆಸರಿನಲ್ಲಿ ಶೋಷಣೆ ಮಾಡುವವರಿಗೆ ಮತಾಂತರ ಬೇಡವಾಗಿದೆ. ಹಿಂದೂ ಧರ್ಮದಲ್ಲಿ ಈಗ ಯಾರಾದರೂ ಬ್ರಾಹ್ಮಣರಾಗಲು ಸಾಧ್ಯವೇ ಎಂದು ಬಸವರಾಜು ಗುಡುಗಿದರು. ಎಲ್ಲಿಯವರೆಗೆ ಬಡತನ ನಿರ್ಮೂಲನೆ ಆಗುವುದಿಲ್ಲವೋ ಅಲ್ಲಿಯವರಿಗೂ ಯಾರಿಗೂ ಮರ್ಯಾದೆ ಸಿಗೋದಿಲ್ಲ. ಈ ವ್ಯವಸ್ಥೆ ಸುಧಾರಣೆಯಾಗುವವರೆಗೂ ಯಾರಿಗೂ ಸ್ವಾಮಿ ಅನ್ನಿಸಿಕೊಳ್ಳಲು ಅರ್ಹತೆ ಇಲ್ಲ ಎಂದು ಟೀಕಿಸಿದರು.
ಕನ್ನಡ ಮಾಧ್ಯಮದಲ್ಲಿ ಓದಿ ಎಂದು ಹೇಳುವ ಸರ್ಕಾರ, ಆ ಮಕ್ಕಳಿಗೆ ಉದ್ಯೋಗ ನೀಡಬೇಕು. ಇಲ್ಲವಾದರೆ ಕನ್ನಡ ಉಳಿಯುವುದಿಲ್ಲ ಎಂದು ಪ್ರಶ್ನಿಸಿದರು. ಶಾಸ್ತ್ರೀಯ ಸ್ಥಾನಮಾನ ಮಾತಿನಲ್ಲಿ ಬಂದಿದೆ. ಕೃತಿಯಲ್ಲಿ ಬರು ಬಗ್ಗೆ ಅನುಮಾನ. ಈ ಸಂಬಂಧದ ಪ್ರಕರಣ ಕೋರ್ಟ್ ನಲ್ಲಿ ಇದೆ. ಸಮಸ್ಯೆಯನ್ನು ಸರ್ಕಾರವೇ ಬಗೆಹರಿಸಬೇಕು. ಶಾಸ್ತ್ರಿಯ ಎಂದರೆ ಪಂಪ, ರನ್ನ, ಪೊನ್ನ ಅಷ್ಟೇ ಅಲ್ಲ. ದಾಸ, ಶಿವಶರಣ ಪರಂಪರೆಯನ್ನೂ ಪರಿಗಣಿಸಬೇಕು ಎಂದರು.
ಇಂದಿನ ಸಂಶೋಧನೆ ಛೇಡಿಸಿದ ಅವರು ಇಂದಿನ ವಿದ್ವಾಂಸರಿಗೆ ಗೊತ್ತಿರುವುದು ಹೊಗಳುವುದು, ಬೈಯುವುದು. ಜನರ ಕಷ್ಟಗಳ ಬಗ್ಗೆ ಕಾವ್ಯ ಬರೆಯುವವನೇ ವಿದ್ವಾಂಸ ಎಂದು ವ್ಯಾಖ್ಯಾನಿಸಿದರು. ಪ್ರೇಮಿಗಳ ದಿನಾಚರಣೆ ಆಚರಿಸುವುದು ಯುವಜನತೆ ವಿವೇಚನೆಗೆ ಬಿಡಿ. ಅವರೇನು ವಿವೇಚನೆ ರಹಿತರಲ್ಲ. ಜಗತ್ತಿನ ಆಗುಹೋಗುಗಳ ಅರಿವಿದೆ. ಯಾವುದು ತಪ್ಪು, ಯಾವುದು ಸರಿ ಎನ್ನುವ ತಿಳುವಳಿಕೆ ಇದೆ. ಈ ವಿಷಯದಲ್ಲಿ ವಿನಾಕಾರಣ ಮೂಗು ತೂರಿಸುವುದು ಯಾವ ಲಾಭಕ್ಕಾಗಿ ಎಂದು ಅವರು ಗಟ್ಟಿಯಾಗಿ ಪ್ರಶ್ನಿಸಿದರು.
(ದಟ್ಸ್ ಕನ್ನಡ ವಾರ್ತೆ)
ಪೂರಕ ಓದಿಗೆ
ಮೈಸೂರು ಕೆಫೆ : ದುರ್ಗದ ಹೆಮ್ಮೆಯ ಸಂಕೇತ
ಮುಗಿಯಿತು ಬಿಸಿಲುಮಳೆ ಜಾತ್ರೆಯಲ್ಲಿ ಧೂಳಹೊಳೆ
ನಾಗರಹಾವು, ದುರ್ಗಾಸ್ತಮಾನಕ್ಕೆ ಭಾರೀ ಬೇಡಿಕೆ
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications