ಸಾಹಿತ್ಯ ಸಮ್ಮೇಳನಕ್ಕೆ ಹಣದ ಕೊರತೆ ಇಲ್ಲ

ಅಕ್ಷರಜಾತ್ರೆಗೆ ಎಲ್ಲ ರೀತಿಯ ವ್ಯವಸ್ಥೆಗಳನ್ನು ಮಾಡಲಾಗುತ್ತಿದ್ದು, ಈಗಾಗಲೇ ವಿವಿಧ ಸಮಿತಿಗಳು ತಮ್ಮ ಚಟುವಟಿಕೆಗಳನ್ನು ಪ್ರಾರಂಭಿಸಿವೆ.
ತಾಯಿ ಭುವನೇಶ್ವರಿದೇವಿಯ ಆಶೀರ್ವಾದ, ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಹಯೋಗದೊಂದಿಗೆ ಸಂಪೂರ್ಣ ಯಶಸ್ವಿಗೊಳಿಸುವುದಾಗಿ ನುಡಿದರು.
ಸಾಹಿತ್ಯ ಸಮ್ಮೇಳನಕ್ಕೆ ಸಕಲ ವ್ಯವಸ್ಥೆ
* ಸಮ್ಮೇಳನಕ್ಕಾಗಿ ಈಗಾಗಲೇ 21 ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಈ ವರೆಗೆ ವಿವಿಧ ಮೂಲಗಳಿಂದ 85 ಲಕ್ಷ ರೂ.ಗಳು ನೆರವು ಸಂಗ್ರಹಿಸಲಾಗಿದೆ.
* ಸಮ್ಮೇಳನಕ್ಕೆ ಬರುವ ಪ್ರತಿನಿಧಿಗಳು, ಗಣ್ಯರು ಹಾಗೂ ಸಾರ್ವಜನಿಕರಿಗೆ ಸಹ ಊಟದ ವ್ಯವಸ್ಥೆ ಮಾಡಲಾಗಿದೆ.
* ಸಮ್ಮೇಳನಕ್ಕೆ ರಾಜ್ಯ ಸರ್ಕಾರ 1 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದು, ಆ ಪೈಕಿ 40 ಲಕ್ಷ ರೂ.ಗಳನ್ನು ಸಾಹಿತ್ಯ ಪರಿಷತ್ ಉಳಿಸಿಕೊಂಡು, 60 ಲಕ್ಷ ರೂ.ಗಳನ್ನು ಜಿಲ್ಲಾಧಿಕಾರಿಗಳಿಗೆ ನೀಡಿದೆ.
* ಈಗಾಗಲೇ 1.5 ಕೋಟಿ ರೂ.ಗಳ ವಂತಿಗೆ ಸಂಗ್ರಹವಾಗಿದ್ದು, ಇನ್ನೂ ಹಲವು ನಿಗಮ ಮಂಡಳಿ ಹಾಗೂ ಸಂಸ್ಥೆಗಳಿಂದ ದೇಣಿಗೆ, ಹಣ ನಿರೀಕ್ಷಿಸಲಾಗಿದೆ.
* ಸರ್ಕಾರದಿಂದ 50 ಲಕ್ಷ ರೂ.ಗಳ ಹೆಚ್ಚಿನ ನೆರವನ್ನು ಸಹ ಕೋರಲಾಗಿದೆ ಎಂದು ಸಚಿವ ಶ್ರೀರಾಮುಲು ಹೇಳಿದರು.
* ಸ್ವಾಗತ, ಪ್ರಚಾರ ಮತ್ತು ಮಾಧ್ಯಮ ಸಂಪರ್ಕ, ಊಟ ಉಪಹಾರ, ವಸತಿ, ಸಾರಿಗೆ, ಜಾಹೀರಾತು, ವೇದಿಕೆ, ಕಲಾ ಪ್ರದರ್ಶನ, ವಾಣಿಜ್ಯ ಮಳಿಗೆ, ಸ್ಮರಣ ಸಂಚಿಕೆ, ಅತಿಥಿ ಸತ್ಕಾರ, ಭದ್ರತೆ ಮತ್ತು ಸುರಕ್ಷತೆ, ಮಹಿಳಾ ನೆರವು ಮುಂತಾದ ಸಮಿತಿಗಳ ಕಾರ್ಯ ನಿರ್ವಹಣೆಯನ್ನು ಸಚಿವರು ಪರಿಶೀಲಿಸಿದರು.
* ಸಮ್ಮೇಳನಕ್ಕೆ ಬರುವವರಿಗೆ ಉಪಹಾರ ಹಾಗೂ ಊಟಕ್ಕಾಗಿ ರೊಟ್ಟಿ, ಪಲ್ಲೆ, ಅನ್ನ, ಸಾಂಬಾರು ಜೊತೆ ಸಿಹಿ ತಿನಸನ್ನು ಸಹ ನೀಡಲಾಗುವುದು.
* 7 ಸಾವಿರ ಪ್ರತಿನಿಧಿಗಳನ್ನು ನಿರೀಕ್ಷಿಸಲಾಗಿದೆ, ಅವರ ವ್ಯಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.
* ಅಕ್ಷರ ಹಬ್ಬಕ್ಕೆ ಆಗಮಿಸುವವರಿಗೆ ಜಿಲ್ಲೆಯ ಐತಿಹಾಸಿಕ ಸ್ಥಳ ಹಾಗೂ ಸನಿಹದ ಪ್ರೇಕ್ಷಣೀಯ ಸ್ಥಳಕ್ಕೆ ಸಾರಿಗೆ ಇಲಾಖೆಯಿಂದ ಪ್ರವಾಸಕ್ಕೆ ಏರ್ಪಾಟು ಮಾಡಲಾಗಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications