ಸಾಹಿತ್ಯ ಪ್ರೇಮಿಗಳ ಸ್ವಾಗತಕ್ಕೆ ಸಜ್ಜಾದ ಮಹಾದ್ವಾರ

ಸಮ್ಮೇಳನದ ಮುಖ್ಯ ಸಭಾಂಗಣ, ಊರಿನ ಪ್ರಮುಖ ರಸ್ತೆಗಳು ಇತೆರೆಡೆಗಳಲ್ಲಿ ನಾಡಿನ ಧೀಮಂತ ಕಲಾವಿದರ ಭಾವಚಿತ್ರವುಳ್ಳ ದ್ವಾರ, ವೇದಿಕೆ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಸಮ್ಮೇಳನದ ಪ್ರಧಾನ ವೇದಿಕೆ ಸೇರಿದಂತೆ ಇತರೆ ವೇದಿಕೆ ನಿರ್ಮಿಸುವ ಜವಾಬ್ದಾರಿಯನ್ನು ಗದಗಿನ ಕಲೆಗಾರರೇ ವಹಿಸಿಕೊಂಡಿರುವುದು ಮತ್ತೊಂದು ವಿಶೇಷ. ಇದಕ್ಕಾಗಿ ವಿಜಯ ಕಲಾಮಂದಿರ ಹಾಗೂ ಜೈನ ಕಲಾ ಶಾಲೆಯ 30 ಯುವಕರು ವೇದಿಕೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದಾರೆ. ಇಂದು ಸಂಜೆ ವೇಳೆಗೆ ಸಂಪೂರ್ಣವಾಗಿ ಕಲೆ ಕುಸುರಿ ಕೆಲಸ ಪೂರ್ಣಗೊಳ್ಳಲಿದೆ ಎಂದು ಗದಗ ಜಿಲ್ಲಾಧಿಕಾರಿ ಎನ್ ವಿ ಪ್ರಸಾದ್ ತಿಳಿಸಿದರು.
ಪ್ರಮುಖ ದ್ವಾರಗಳು: ನಾಡಿನ ಹೆಸರಾಂತ ಸಾಹಿತಿಗಳಾದ ಶಿವರಾಮ ಕಾರಂತ, ಕುವೆಂಪು, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಯು.ಆರ್. ಅನಂತಮೂರ್ತಿ, ಗಿರೀಶ್ ಕಾರ್ನಾಡ್, ಜಿ.ಪಿ. ರಾಜರತ್ನಂ. ದ.ರಾ.ಬೇಂದ್ರೆ, ಹುಯಿಲಗೋಳ ನಾರಾಯಣರಾವ್, ಆಲೂರು ವೆಂಕಟರಾಯರು, ಚನ್ನವೀರ ಕಣವಿ, ತೋಂಟದ ಸಿದ್ದಲಿಂಗ ಸ್ವಾಮೀಜಿಗಳ ಭಾವಚಿತ್ರಗಳು ಸಾಹಿತ್ಯ ಪ್ರೇಮಿಗಳನ್ನು ಸ್ವಾಗತಿಸಲು ಕಾದಿವೆ. ಜತೆಗೆ ಸಂಗೀತ ಕ್ಷೇತ್ರದ ದಿಗ್ಗಜರುಗಳಾದ ಡಾ. ಗಂಗೂಬಾಯಿ ಹಾನಗಲ್, ಪಂಡಿತ್ ಭೀಮಸೇನ್ ಜೋಶಿ, ಪಂಡಿತ್ ಪಂಚಾಕ್ಷರಿ ಗವಾಯಿ, ಪಂಡಿತ್ ಪುಟ್ಟರಾಜ ಗವಾಯಿ ಮೊದಲಾದವರಭಾವಚಿತ್ರಗಳು ದ್ವಾರಗಳ ಮೆರಗನ್ನು ಇನ್ನಷ್ಟು ಹೆಚ್ಚಿಸಿವೆ.
ವೇದಿಕೆ: ಸಮ್ಮೇಳನದ ಕೇಂದ್ರ ಬಿಂದುವಾಗಿರುವ ಪ್ರಧಾನ ವೇದಿಕೆಗೆ ದಾನ ಚಿಂತಾಮಣಿ ಅತ್ತಿಮಬ್ಬೆ ಹೆಸರಿಡಲಾಗಿದ್ದು, ಇದು ಸಮ್ಮೇಳನದ ಪ್ರಮುಖ ಆಕರ್ಷಣೆಯಾಗಿದೆ. 100 ಅಡಿ ಉದ್ದ ಹಾಗೂ 60 ಅಡಿ ಅಗಲದಲ್ಲಿ ಈ ಪ್ರಧಾನ ವೇದಿಕೆ ನಿರ್ಮಿಸಲಾಗುತ್ತಿದೆ. ವೇದಿಕೆಯ ಮುಂಭಾಗದಲ್ಲಿ ಸುಮಾರು 15 ಸಾವಿರಕ್ಕೂ ಹೆಚ್ಚು ಜನರಿಗೆ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗುತ್ತಿದೆ. ದ್ವಾರ ಮಾತ್ರವಲ್ಲದೆ ಪ್ರಧಾನ ವೇದಿಕೆಯೂ ನಾಡಿನ ಕಲೆ, ಸಂಸ್ಕೃತಿ, ಸಾಹಿತ್ಯ, ವಾಸ್ತುಶಿಲ್ಪ, ಸಂಗೀತ ಪರಂಪರೆಯನ್ನು ಬಿಂಬಿಸುವಲ್ಲಿ ಹಿಂದೆ ಬಿದ್ದಿಲ್ಲ. ಇದಕ್ಕಾಗಿ ಆಧುನಿಕ ಯುಗದ ಹೈಟೆಕ್ ತಂತ್ರಜ್ಞಾನವನ್ನು ಬಳಸಿರುವುದು ಈ ಬಾರಿಯ ವಿಶೇಷ. ಪ್ರಧಾನ ವೇದಿಕೆಗೆ ಸಮಾನಾಂತರವಾದ ಮಹಾ ಮಂಟಪಕ್ಕೆ ಕುಮಾರವ್ಯಾಸ ವೇದಿಕೆ ಎಂದು ಹೆಸರಿಡಲಾಗಿದೆ.
ಇದೇ ರೀತಿ ಮಹಾದ್ವಾರಗಳಿಗೆ ದುರ್ಗಸಿಂಹ, ನಾಗವರ್ಮ, ನಯಸೇನ, ಚಾಮರಸ, ಅಜಗಣ್ಣ,ಮುಕ್ತಾಯಕ್ಕ, ಹುಯಿಲಗೋಳ ನಾರಾಯಣರಾವ್, ಅಂದಾನಪ್ಪ ದೊಡ್ಡಮೇಟಿ, ಆಲೂರು ವೆಂಕಟರಾವ್. ಎಚ್.ಎನ್. ಹೂಗಾರ, ರಂ.ಶ್ರೀ.ಮುಗಳಿ, ಪಂ.ಪಂಚಾಕ್ಷರಿ ಗವಾಯಿ, ಮೇವುಂಡಿ ಮಲ್ಲಾರಿ ಎಂದು ಹೆಸರಿಡಲು ನಿರ್ಧರಿಸಲಾಗಿದ್ದು, ಈ ಮಹಾದ್ವಾರ ನಿರ್ಮಾಣ ಅಂತಿಮ ಹಂತದಲ್ಲಿದೆ.
ಶಿಲ್ಪಕಲೆಯ ಪ್ರತಿಬಿಂಬ:ವೇದಿಕೆ, ದ್ವಾರಬಾಗಿಲು, ಗೋಡೆ ಸಂಪೂರ್ಣವಾಗಿ ಬಟ್ಟೆ ಯಿಂದ ನಿರ್ಮಿಸಲಾಗುತ್ತಿದ್ದು, ಇವುಗಳ ಮೇಲೆ ಬಣ್ಣದ ಲೇಪನ ಮಾಡಿ ಅದಕ್ಕೆ ಉಬ್ಬು (ಎಂಬೋಸಿಂಗ್)ಕಲೆ ಮೂಲಕ ಜೀವ ತುಂಬುವ ಕೆಲಸ ಸಾಗಿದೆ. ಬಟ್ಟೆಯಿಂದಲೇ ನಿರ್ಮಿಸಲಾಗುತ್ತಿರುವ ಸುತ್ತ ಗೋಡೆಗಳ ಮೇಲೆ ನಾಡಿನ ಹಾಗೂ ಜಿಲ್ಲೆಯ ಪ್ರಮುಖ ಶಿಲ್ಪಕಲೆ ಅನಾವರಣಗೊಳ್ಳಲಿವೆ. ಇಲ್ಲಿನ ವೀರನಾರಾಯಣ, ತ್ರಿಕೂಟೇಶ್ವರ, ಸೋಮನಾಥ ದೇವಾಲಯ, ಲಕ್ಕುಂಡಿಯ ದೇವಾಲಯಗಳು, ಸೂರ್ಯ ದೇವಾಲಯ, ಬ್ರಹ್ಮ ಜಿನಾಲಯ, ಸೋಮೇಶ್ವರ ದೇವಾಲಯ ಸೇರಿದಂತೆ ಇನ್ನಿತರ ಪ್ರಮುಖ ವಾಸ್ತು ಶಿಲ್ಪಕಲೆಗಳ ಚಿತ್ರಗಳನ್ನು ಇದರ ಮೇಲೆ ಕಾಣಬಹುದು.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications