77ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷ ಪ್ರೊ. ಜಿ.ವಿ

ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಡಿ.24, 25 ಮತ್ತು 26ರಂದು 77ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ. ಸಮ್ಮೇಳನ ಅಧ್ಯಕ್ಷ ಸ್ಥಾನಕ್ಕಾಗಿ ಹಂಪ ನಾಗರಾಜಯ್ಯ,ಚಿಮೂ, ಸಿಪಿಕೆ ಸೇರಿದಂತೆ ಹಲವರ ಹೆಸರುಗಳು ಕೇಳಿ ಬಂದಿತ್ತು.
ಪ್ರೊ. ಜಿವಿ ಅವರು ನಾಡು ಕಂಡಿರುವ ಅತ್ಯುತ್ತಮ ಸಾಹಿತಿ. ಅವರ ಸಾಧನೆ ಎಲ್ಲರಿಗೂ ಮಾದರಿಯಾಗಿದೆ. ಇಷ್ಟು ವರ್ಷ ಅವರ ಯಾಕೆ ಆಗಿಲ್ಲ, ಅವರ ಆಯ್ಕೆ ವಿಳಂಬವಾಗಿದೆ ಎಂಬ ಪ್ರಶ್ನೆಗೆ ನಾನು ಹೇಗೆ ಉತ್ತರಿಸಲಿ. ನಾನು ಕಸಾಪಗೆ ಬಂದು ಎರಡು ವರ್ಷ ಆಯ್ತು. ಈ ಹಿಂದೆ ಅವರು ಯಾಕೆ ಅಧ್ಯಕ್ಷರಾಗಲಿಲ್ಲ ಎನ್ನುವುದಕ್ಕಿಂತ ಈಗ ಆಗಿರುವುದಕ್ಕೆ ಸಂತೋಷಪಡೋಣ ಎಂದು ಕಸಾಪ ಅಧ್ಯಕ್ಷ ಡಾ. ನಲ್ಲೂರು ಪ್ರಸಾದ್ ಹೇಳಿದ್ದಾರೆ.
ಪ್ರೊ.ಜಿ.ವಿ ಕಿರು ಪರಿಚಯ: ಕನ್ನಡ ನಾಡು ಕಂಡ ಅತ್ಯುತ್ತಮ ಭಾಷಾ ತಜ್ಞ ಪ್ರೊ.ವೆಂಕಟಸುಬ್ಬಯ್ಯನವರು 1913ರಲ್ಲಿ ಮೈಸೂರಿನಲ್ಲಿ ಜನಿಸಿದರು. ಮಹಾರಾಜ ಕಾಲೇಜಿನಲ್ಲಿ ಚಿನ್ನದ ಪದಕದೊಂದಿಗೆ ಎಂ.ಎ ಪದವಿ ಗಳಿಸಿದ ಕೀರ್ತಿ ಹೊಂದಿದ್ದಾರೆ. ನಂತರ ಉಪನ್ಯಾಸಕ ವೃತ್ತಿ ಆರಂಭಿಸಿದ ಅವರು ಸುಮಾರು ನಾಲ್ಕು ದಶಕಗಳ ಕಾಲ ಶಿಕ್ಷಣ ಕ್ಷೇತ್ರದಲ್ಲಿ ದುಡಿದಿದ್ದರು.
ಸುಮಾರು 25ಕ್ಕೂ ಹೆಚ್ಚು ಪುಸ್ತಕಗಳನ್ನು ಸಂಪಾದಿಸಿರುವ ಪ್ರೊ.ಜಿವಿ ಅವರು ನಿಘಂಟು ತಜ್ಞರಾಗಿ ಎಲ್ಲರಿಗೂ ಪರಿಚಿತ. ಪ್ರಜಾವಾಣಿ ದಿನಪತ್ರಿಕೆಯ 'ಇಗೋ ಕನ್ನಡ' ಅಂಕಣ ಸಮಸ್ತ ಕನ್ನಡಿಗರ ಮನದಾಳದಲ್ಲಿದೆ. ವೆಂಕಟಸುಬ್ಬಯ್ಯ ಅವರು ಇಪ್ಪತ್ತು ವರ್ಷಗಳ ಕಾಲ ಕನ್ನಡ ಸಾಹಿತ್ಯ ಪರಿಷತ್ತಿನ ಬೃಹತ್ ನಿಘಂಟಿನ ಪ್ರಧಾನ ಸಂಪಾದಕರಾಗಿ ಹತ್ತು ಸಂಪುಟಗಳನ್ನು ಹೊರತಂದಿದ್ದರು.
ಪ್ರೊ.ವೆಂಕಟಸುಬ್ಬಯ್ಯನವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ನಾಡೋಜ,ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, ಶಂಭಾ ಪ್ರಶಸ್ತಿ, ಸೇಡಿಯಾಪು, ಶಿವರಾಮ ಕಾರಂತ, ಮಾಸ್ತಿ ಹಾಗೂ ಪಂಪ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳು ಲಭಿಸಿವೆ. ಇತ್ತೀಚೆಗೆ ಧರ್ಮಸ್ಥಳ ಶ್ರೀಮಂಜುನಾಥೇಶ್ವರ ಟ್ರಸ್ಟ್ ನಿರ್ಮಾಣದ ಸುಚೇಂದ್ರ ಪ್ರಸಾದ್ ಅವರ ನಿರ್ದೇಶನದ 'ಸ್ತ್ಯುತ್ಯಂತರ' ಎಂಬ ಹೆಸರಿನ ಕಿರುಚಿತ್ರವನ್ನು ಲೋಕಾರ್ಪಣೆ ಮಾಡಲಾಗಿದ್ದು, ಇದರಲ್ಲಿ ಪ್ರೊ.ಜಿ.ವಿ ಅವರ ಜೀವನಗಾಥೆಯ ಪರಿಚಯ ಸಿಗುತ್ತದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications