ಬೆಂಗಳೂರು ಸಾಹಿತ್ಯ ಸಮ್ಮೇಳನ ಮುಂದೂಡಿಕೆ

ವಿಧಾನ ಸೌಧದದಲ್ಲಿ ನಡೆದ ಸಭೆಯಲ್ಲಿ ಮಾತನಾಡುತ್ತಿದ್ದ ಆರ್ ಅಶೋಕ್, ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳ ಹಿನ್ನೆಯಲ್ಲಿ ಜನವರಿಯಲ್ಲಿ ಸಾಹಿತ್ಯ ಸಮ್ಮೇಳನ ನಡೆಸಲು ಉದ್ದೇಶಿಸಲಾಗಿದೆ. ಶೀಘ್ರದಲ್ಲೇ ದಿನಾಂಕವನ್ನು ನಿಗದಿಪಡಿಸಲಾಗುತ್ತದೆ ಎಂದು ತಿಳಿಸಿದರು.
ಡಿಸೆಂಬರ್ 24ರಿಂದ ಮೂರು ದಿನಗಳ ಕಾಲ ಬೆಂಗಳೂರು ಸಾಹಿತ್ಯ ಸಮ್ಮೇಳನಕ್ಕೆ ಭರದಿಂದ ಸಿದ್ಧತೆಗಳು ನಡೆದಿದ್ದವು. ಅಷ್ಟರಲ್ಲೇ ದಿಢೀರ್ ಎಂದು ಸಾಹಿತ್ಯ ಸಮ್ಮೇಳನ ಮುಂದೂಡುವ ಘೋಷಣೆ ಹೊರಬಿದ್ದಿದೆ. ಈ ಬಗ್ಗೆ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಕ್ರಿಯೆ ಇನ್ನೂ ಹೊರಬಿದ್ದಿಲ್ಲ.
ರಾಜಕೀಯವೇ ಬೇರೆ ಸಾಹಿತ್ಯವೇ ಬೇರೆ ಹೀಗಿದ್ದೂ ಈ ನಿರ್ಧಾರ ಏಕೆ ಎಂಬ ಪ್ರಶ್ನೆಗೆ ಸಚಿವರು ಉತ್ತರ ಹೀಗಿತ್ತು. ಸಾಹಿತ್ಯ ಸಮ್ಮೇಳನವನ್ನು ನಡೆಸುತ್ತಿಲ್ಲ ಎಂದು ಹೇಳುತ್ತಿಲ್ಲ. ಸ್ವಲ್ಪ ತಡವಾಗಿ ನಡೆಸಲಿದ್ದೇವೆ. ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಸಾಹಿತ್ಯ ಸಮ್ಮೇಳನ ಕಳೆಗುಂದಬಾರದು ಎಂಬುದು ನಮ್ಮ ಉದ್ದೇಶ ಎಂದರು.












Click it and Unblock the Notifications