ಇದು ಬ್ಯಾಂಗಲೋರ್ ಸಿಟಿಯೋ ಬೆಂಗಳೂರು ನಗರವೋ?

* ಕನ್ನಡಿಗರ ರಾಜಧಾನಿಯ ಹೆಸರನ್ನು "ಬ್ಯಾಂಗಲೋರ್" ನಿಂದ "ಬೆಂಗಳೂರು" ಎಂದು ಅಧಿಕೃತವಾಗಿ ಬದಲಾಯಿಸಲು ರಾಜ್ಯ ಸರ್ಕಾರ ಕೇಂದ್ರದ ಮೇಲೆ ಒತ್ತಡ ಹೇರಬೇಕಾಗಿದೆ. ಯಾಕೋ ಏನೋ ಸರ್ಕಾರ, ಕನ್ನಡದ ಸಾಹಿತಿಗಳು, ಕನ್ನಡ ಪ್ರೇಮಿಗಳು ಈ ವಿಷಯವನ್ನು ಮರೆತುಬಿಟ್ಟಿದ್ದಾರೆ. ಬೆಂಗಳೂರಿನಲ್ಲಿ ಜರುಗಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಹೊತ್ತಿಗಾದರೂ ಕನ್ನಡಿಗರ ಈ ಕನಸು ನನಸಾಗುವುದೇ?
*. ಬೆಂಗಳೂರಿನಲ್ಲಿರುವ ಮಲ್ಲೇಶ್ವರಂ, ಶೇಷಾದ್ರಿಪುರಂ, ಮಹಾಲಕ್ಷ್ಮಿಪುರಂ, ಕೃಷ್ಣರಾಜಪುರಂ, ಓಕಳಿಪುರಂ, ರಾಮನಗರಂ ಇತ್ಯಾದಿ ಹೆಸರುಗಳಲ್ಲಿರುವ "ಅಂ" ಕಾರಗಳನ್ನು ತೆಗೆದು ಕನ್ನಡೀಕರಣ ಮಾಡುವ ಬಗ್ಗೆಯೂ ಸರ್ಕಾರ ಕ್ರಮ ತೆಗೆದುಕೊಳ್ಳಬೇಕೆಂದು ಕೋರುತ್ತೇನೆ.
* ಬೆಂಗಳೂರಿನಲ್ಲಿರುವ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಕನ್ನಡಕ್ಕೆ ಅಗ್ರಸ್ಥಾನ ನೀಡುವ ಬಗ್ಗೆ ಕನ್ನಡ ಅಭಿವೃದ್ದಿ ಪ್ರಾಧಿಕಾರ 10,000 ರೂಪಾಯಿಗಳ ದಂಡವನ್ನು ಹಾಕುತ್ತೇವೆ ಎಂದು ಪ್ರಕಟಿಸಿ ಬಹುದಿನಗಳಾದರೂ ಇನ್ನೂ ಇದು ಜಾರಿಯಾಗಿಲ್ಲ. ಕನ್ನಡ ಅಭಿವೃದ್ಧಿ ಪ್ರಾಧಿಕಾರ ಈಗಲಾದರೂ ಈ ಅದೇಶವನ್ನು ಜಾರಿಗೊಳಿಸಬೇಕೆಂದು ಕೋರುತ್ತೇನೆ.
* ಬೆಂಗಳೂರಿನ ಪ್ರತಿಷ್ಠಿತ ಬಡಾವಣೆಯಾದ ಬಿ.ಟಿ.ಎಂ ಬಡಾವಣೆಯನ್ನು ಕುವೆಂಪು ನಗರವೆಂದು ಬೆಂಗಳೂರು ಮಹಾನಗರ ಪಾಲಿಕೆ ಬಹಳ ಹಿಂದೆಯೇ ನಾಮಕರಣ ಮಾಡಿತ್ತು. ಆದರೆ ಇದು ಅಧಿಕೃತವಾಗಿ ಇನ್ನೂ ಜಾರಿಮಾಡದೆ ಪಾಲಿಕೆಯು ಕುವೆಂಪು ಅವರಿಗೆ ಅಗೌರವ ತೋರಿದೆ. ಇಲ್ಲಿನ ಅಂಗಡಿ ಮುಂಗಟ್ಟುಗಳು ಹಾಗೂ ಕಛೇರಿಗಳ ನಾಮಫಲಕಗಳಲ್ಲಿ ಹಾಗೂ ಜನರ ಬಾಯಲ್ಲಿ ಇನ್ನೂ ಬಿ. ಟಿ. ಎಂ ಬಡಾವಣೆ ಎಂದು ಚಲಾವಣೆಯಲ್ಲಿರುವುದು ಖೇದದ ಸಂಗತಿ.
ಆದರೆ ಬೆಂಗಳೂರು ಮಹಾನಗರ ಸಾರಿಗೆಯವರು ಇಲ್ಲಿನ ನಿಲ್ದಾಣಕ್ಕೆ ಕುವೆಂಪುನಗರ ಬಸ್ ನಿಲ್ದಾಣ ಎಂದು ನಾಮಕರಣ ಮಾಡಿರುವುದು ಅಭಿನಂದನೀಯ ವಿಷಯ. ಇದೇ ರೀತಿ ಬೆಂಗಳೂರು ಮಹಾನಗರ ಪಾಲಿಕೆಯೂ ಬಿ.ಟಿ.ಎಂ ಬಡಾವಣೆಯನ್ನು ಕುವೆಂಪು ನಗರವೆಂದು ಅಧಿಕೃತವಾಗಿ ನಾಮಕರಣ ಮಾಡಿ ಜಾರಿಗೆ ತರಬೇಕೆಂದು ಕೋರುತ್ತೇನೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications