ಇದು ಬ್ಯಾಂಗಲೋರ್ ಸಿಟಿಯೋ ಬೆಂಗಳೂರು ನಗರವೋ?

* ಕನ್ನಡಿಗರ ರಾಜಧಾನಿಯ ಹೆಸರನ್ನು "ಬ್ಯಾಂಗಲೋರ್" ನಿಂದ "ಬೆಂಗಳೂರು" ಎಂದು ಅಧಿಕೃತವಾಗಿ ಬದಲಾಯಿಸಲು ರಾಜ್ಯ ಸರ್ಕಾರ ಕೇಂದ್ರದ ಮೇಲೆ ಒತ್ತಡ ಹೇರಬೇಕಾಗಿದೆ. ಯಾಕೋ ಏನೋ ಸರ್ಕಾರ, ಕನ್ನಡದ ಸಾಹಿತಿಗಳು, ಕನ್ನಡ ಪ್ರೇಮಿಗಳು ಈ ವಿಷಯವನ್ನು ಮರೆತುಬಿಟ್ಟಿದ್ದಾರೆ. ಬೆಂಗಳೂರಿನಲ್ಲಿ ಜರುಗಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಹೊತ್ತಿಗಾದರೂ ಕನ್ನಡಿಗರ ಈ ಕನಸು ನನಸಾಗುವುದೇ?
*. ಬೆಂಗಳೂರಿನಲ್ಲಿರುವ ಮಲ್ಲೇಶ್ವರಂ, ಶೇಷಾದ್ರಿಪುರಂ, ಮಹಾಲಕ್ಷ್ಮಿಪುರಂ, ಕೃಷ್ಣರಾಜಪುರಂ, ಓಕಳಿಪುರಂ, ರಾಮನಗರಂ ಇತ್ಯಾದಿ ಹೆಸರುಗಳಲ್ಲಿರುವ "ಅಂ" ಕಾರಗಳನ್ನು ತೆಗೆದು ಕನ್ನಡೀಕರಣ ಮಾಡುವ ಬಗ್ಗೆಯೂ ಸರ್ಕಾರ ಕ್ರಮ ತೆಗೆದುಕೊಳ್ಳಬೇಕೆಂದು ಕೋರುತ್ತೇನೆ.
* ಬೆಂಗಳೂರಿನಲ್ಲಿರುವ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಕನ್ನಡಕ್ಕೆ ಅಗ್ರಸ್ಥಾನ ನೀಡುವ ಬಗ್ಗೆ ಕನ್ನಡ ಅಭಿವೃದ್ದಿ ಪ್ರಾಧಿಕಾರ 10,000 ರೂಪಾಯಿಗಳ ದಂಡವನ್ನು ಹಾಕುತ್ತೇವೆ ಎಂದು ಪ್ರಕಟಿಸಿ ಬಹುದಿನಗಳಾದರೂ ಇನ್ನೂ ಇದು ಜಾರಿಯಾಗಿಲ್ಲ. ಕನ್ನಡ ಅಭಿವೃದ್ಧಿ ಪ್ರಾಧಿಕಾರ ಈಗಲಾದರೂ ಈ ಅದೇಶವನ್ನು ಜಾರಿಗೊಳಿಸಬೇಕೆಂದು ಕೋರುತ್ತೇನೆ.
* ಬೆಂಗಳೂರಿನ ಪ್ರತಿಷ್ಠಿತ ಬಡಾವಣೆಯಾದ ಬಿ.ಟಿ.ಎಂ ಬಡಾವಣೆಯನ್ನು ಕುವೆಂಪು ನಗರವೆಂದು ಬೆಂಗಳೂರು ಮಹಾನಗರ ಪಾಲಿಕೆ ಬಹಳ ಹಿಂದೆಯೇ ನಾಮಕರಣ ಮಾಡಿತ್ತು. ಆದರೆ ಇದು ಅಧಿಕೃತವಾಗಿ ಇನ್ನೂ ಜಾರಿಮಾಡದೆ ಪಾಲಿಕೆಯು ಕುವೆಂಪು ಅವರಿಗೆ ಅಗೌರವ ತೋರಿದೆ. ಇಲ್ಲಿನ ಅಂಗಡಿ ಮುಂಗಟ್ಟುಗಳು ಹಾಗೂ ಕಛೇರಿಗಳ ನಾಮಫಲಕಗಳಲ್ಲಿ ಹಾಗೂ ಜನರ ಬಾಯಲ್ಲಿ ಇನ್ನೂ ಬಿ. ಟಿ. ಎಂ ಬಡಾವಣೆ ಎಂದು ಚಲಾವಣೆಯಲ್ಲಿರುವುದು ಖೇದದ ಸಂಗತಿ.
ಆದರೆ ಬೆಂಗಳೂರು ಮಹಾನಗರ ಸಾರಿಗೆಯವರು ಇಲ್ಲಿನ ನಿಲ್ದಾಣಕ್ಕೆ ಕುವೆಂಪುನಗರ ಬಸ್ ನಿಲ್ದಾಣ ಎಂದು ನಾಮಕರಣ ಮಾಡಿರುವುದು ಅಭಿನಂದನೀಯ ವಿಷಯ. ಇದೇ ರೀತಿ ಬೆಂಗಳೂರು ಮಹಾನಗರ ಪಾಲಿಕೆಯೂ ಬಿ.ಟಿ.ಎಂ ಬಡಾವಣೆಯನ್ನು ಕುವೆಂಪು ನಗರವೆಂದು ಅಧಿಕೃತವಾಗಿ ನಾಮಕರಣ ಮಾಡಿ ಜಾರಿಗೆ ತರಬೇಕೆಂದು ಕೋರುತ್ತೇನೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications