ಸಮ್ಮೇಳಾನಧ್ಯಕ್ಷರ ಮೆರವಣಿಗೆ: ಸಂಚಾರ, ಪಾರ್ಕಿಂಗ್ ಬದಲು

ಶುಕ್ರವಾರ ಬೆಳಗ್ಗೆ 9.30ಕ್ಕೆ ಆರಂಭವಾಗುವ ಮೆರವಣಿಗೆ ಬಿಬಿಎಂಪಿ ಕೇಂದ್ರ ಕಚೇರಿಯಿಂದ ಹೊರಟು ಜೆ.ಸಿ. ರಸ್ತೆ, ಮಿನರ್ವ ಸರ್ಕಲ್, ಮಕ್ಕಳ ಕೂಟ, ಪಂಪ ಮಹಾಕವಿ ರಸ್ತೆ ಮೂಲಕ ನ್ಯಾಷನಲ್ ಕಾಲೇಜು ಮೈದಾನ ತಲುಪಲಿದೆ.
ಸಂಚಾರ ನಿರ್ಬಂಧ: ಮೆರವಣಿಗೆ ಸಾಗುವ ಸಂದರ್ಭದಲ್ಲಿ ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಹಾಗಾಗಿ ಸಾರ್ವಜನಿಕರು ಪರ್ಯಾಯ ರಸ್ತೆಗಳಲ್ಲಿ ಸಂಚರಿಸಬೇಕೆಂದು ಕೋರಲಾಗಿದೆ. ಮೆರವಣಿಗೆಗೂ ಮುನ್ನ ಮತ್ತು ನಂತರ ಸಂಚಾರ ಎಂದಿನಂತೆ ಮುಂದುವರಿಯಲಿದೆ.
ಇಲ್ಲಿ ಸಂಚರಿಸಿ:
ಮೆರವಣಿಗೆ ಆರಂಭಗೊಂಡ ನಂತರ ಕಾರ್ಪೊರೇಶನ್ ಸುತ್ತಮುತ್ತಲ ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ.
ಕೆ.ಜಿ. ರಸ್ತೆ ಕಡೆಗೆ:
1. ಮಿನರ್ವ ಸರ್ಕಲ್, ಕುಂಬಾರಗುಂಡಿ ರಸ್ತೆ, ಟೌನ್ ಹಾಲ್.
2. ಕೊಂಡಜ್ಜಿ ಬಸಪ್ಪ ವೃತ್ತ, ಆಲ್ಬರ್ಟ್ ವಿಕ್ಟರ್ ರಸ್ತೆ, ಸಿಟಿ ಮಾರ್ಕೆಟ್ ರಸ್ತೆ.
3. ಲಾಲ್ಬಾಗ್ ವೆಸ್ಟ್ ಗೇಟ್, ಎಂಎನ್ಕೆ ರಾವ್ ರಸ್ತೆ, ಗಾಂಧಿ ಬಜಾರ್, ರಾಮಕೃಷ್ಣಾಶ್ರಮ ವೃತ್ತ, ಬಜಾರ್ ಸ್ಟ್ರೀಟ್, ಸಿರ್ಸಿ ಸರ್ಕಲ್.
4. ಉತ್ತರಹಳ್ಳಿಯಿಂದ ಬರುವ ವಾಹನಗಳು ಕದಿರೇನಹಳ್ಳಿ ಕ್ರಾಸ್, ಕಾಮಾಕ್ಯ ವೃತ್ತ, ಮಾಗಡಿ ರಸ್ತೆ ಅಥವಾ ಗೂಡ್ಸ್ಶೆಡ್ ರಸ್ತೆ ಮುಖಾಂತರ ಮೆಜಿಸ್ಟಿಕ್ ತಲುಪಬಹುದು.
5. ಜೆಬಿಎಸ್ ಬಳಿ ತಿರುವು, ಚೆನ್ನಮ್ಮ ವೃತ್ತ, ಮೈಸೂರು ರಸ್ತೆ.
6. ಕನಕಪುರ ರಿಂಗ್ ರಸ್ತೆಯಿಂದ ಬೇಂದ್ರೆ ವೃತ್ತ, ಚೆನ್ನಮ್ಮ ವೃತ್ತ, ಮೈಸೂರು ರಸ್ತೆ.
7. ಕೆ.ಆರ್. ರಸ್ತೆಯಿಂದ ಬರುವ ವಾಹನಗಳು ಭಾರತಿ ನರ್ಸಿಂಗ್ ಹೋಮ್, ಗಾಂಧಿ ಬಜಾರ್, ಆಶ್ರಮ, ಚಾಮರಾಜ್ ಪೇಟೆ, ಸಿರ್ಸಿ ಸರ್ಕಲ್.
ಕಸ್ತೂರಬಾ ರಸ್ತೆ ಕಡೆಗೆ:
1. ಜೆ.ಸಿ. ರಸ್ತೆ, ಭಾರತ್ ಜಂಕ್ಷನ್, ಸಿದ್ದಯ್ಯ ರಸ್ತೆ, ಕೆ.ಎಚ್. ರಸ್ತೆ.
2. ಮಿನರ್ವ, ಲಾಲ್ಬಾಗ್ ರಸ್ತೆ, ಲಾಲ್ಬಾಗ್ ಮೈನ್ ಗೇಟ್, ಕೆ.ಎಚ್. ರಸ್ತೆ.
3. ಸೌತ್ ಎಂಡ್ ರಸ್ತೆ, ಮಾಧವನ್ ಪಾರ್ಕ್, ಮರಿಯಪ್ಪ ರಸ್ತೆ, ಅಶೋಕ ಪಿಲ್ಲರ್, ಸಿದ್ದಾಪುರ ರಸ್ತೆ, ಕೆ.ಎಚ್. ರಸ್ತೆ.
ಜೆ.ಪಿ. ನಗರ ಕಡೆಯಿಂದ ಬರುವ ವಾಹನಗಳು:
ಕೆನರಾ ಬ್ಯಾಂಕ್ ಜಂಕ್ಷನ್, ಸಿಂಡಿಕೇಟ್ ಬ್ಯಾಂಕ್ ಜಂಕ್ಷನ್, ಟಿ. ಮರಿಯಪ್ಪ ರಸ್ತೆ, ಅಶೋಕ ಪಿಲ್ಲರ್, ಸಿದ್ದಾಪುರ ರಸ್ತೆ, ಕೆ.ಎಚ್. ರಸ್ತೆ ಬಳಸುವುದು.
ಕನಕಪುರ ರಸ್ತೆ ಕಡೆಯಿಂದ ಬರುವ ವಾಹನಗಳು:
ಸಂಗಮ್ ಸರ್ಕಲ್, ಮಾರೇನಹಳ್ಳಿ ಪೆಟ್ರೋಲ್ ಬಂಕ್, ಬನ್ನೇರುಘಟ್ಟ ರಸ್ತೆ ಬಳಸುವುದು.
ಹೊರ ವರ್ತುಲ ರಸ್ತೆ ಕಡೆಯಿಂದ ಬರುವ ವಾಹನಗಳು:
ಪುಟ್ಟೇನಹಳ್ಳಿ ಜಂಕ್ಷನ್, ಜೆ.ಡಿ. ಮರ, ಬನ್ನೇರುಘಟ್ಟ ರಸ್ತೆ ಬಳಸುವುದು.
ಹೊಸೂರು ಕಡೆಯಿಂದ ಬರುವ ವಾಹನಗಳು: ಮಿನರ್ವ ಸರ್ಕಲ್, ಕಲಾಸಿ ಪಾಳ್ಯ.
ಪಾರ್ಕಿಂಗ್ಗಂತೂ ಜಾಗವೇ ಇಲ್ಲ: ಬೆಂಗಳೂರಿನಲ್ಲಿ ಹೇಳಿಕೇಳಿ ಟ್ರಾಫಿಕ್ ಪ್ರಾಬ್ಲಂ, ಪಾರ್ಕಿಂಗ್ ಪ್ರಾಬ್ಲಂ ದಿನನಿತ್ಯದ ಸಮಸ್ಯೆ. ಅಂತಹುದರಲ್ಲಿ ಸಮ್ಮೇಳನಕ್ಕಾಗಿ ನಾನಾ ಭಾಗಗಳಿಂದ ಕನಿಷ್ಠ 2 ಲಕ್ಷ ಜನರು ಬಸ್, ಸ್ವರಾಜ್ ಮಾಜ್ಡಾ, ಮೆಟಡಾರ್ ಮತ್ತಿತರ ವಾಹಗಳಲ್ಲಿ ಆಗಮಿಸಿದರೆ ಸಂಚಾರ ಏನಾಗಬೇಡ? ಗಮನಿಸಿ: ಸಮ್ಮೇಳನದ ಕೇಂದ್ರ ಭಾಗವಾದ ಬಸವನಗುಡಿ ಪ್ರದೇಶ ತಲುಪುವುದಕ್ಕೆ ಹರಸಾಹಸ ಪಡಬೇಕಾಗುವುದು ಖಚಿತ. ಭಾರಿ ವಾಹನಗಳನ್ನಂತೂ ಮೂರ್ನಾಲ್ಕು ಕಿ.ಮೀ. ದೂರದಲ್ಲಿಯೇ ನಿಲ್ಲಿಸಬೇಕಾಗುತ್ತದೆ. ಅಲ್ಲಿಂದ ಕಾಲ್ನಡಿಗೆಯಲ್ಲಿಯೇ ಸಮ್ಮೇಳನಕ್ಕೆ ಸಾಗಿಬರಬೇಕಾದ ಅನಿವಾರ್ಯತೆ ಇರುತ್ತದೆ.
ಇನ್ನು, ನೇರವಾಗಿ ಬಸವನಗುಡಿಗೆ ವಾಹನದಲ್ಲಿಯೇ ಸಾಗಿಬರುತ್ತೇವೆ ಎನ್ನುವವರಿಗೆ ಪಾರ್ಕಿಂಗ್ ಪೆಡಂಭೂತ ಕಾಡುವುದು ನಿಶ್ಚಿತ. ಆದ್ದರಿಂದ ಜಾಣತನದದಿಂದ ಆದಷ್ಟೂ ವಾಹನಗಳನ್ನು ದೂರದ ಪ್ರದೇಶಗಳಲ್ಲಿಯೇ, ಪೊಲೀಸರಿಗೆ ಹೆಚ್ಚು ತ್ರಾಸ ನೀಡದಂತೆ ಸುರಕ್ಷಿತವಾಗಿ ನಿಲ್ಲಿಸಬೇಕಾದ ಹೊಣೆಗಾರಿಕೆ ವಾಹನ ಮಾಲೀಕರ ಮೇಲಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications