ಚಿಮೂಗೆ ಅನ್ಯಾಯವಾಗಿದೆ: ಕ್ಯಾಥೋಲಿಕ್ ಕ್ರೈಸ್ತರು

77ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ರಾಜ್ಯಪಾಲರ ವಿರುದ್ಧ ಖಂಡನಾ ನಿರ್ಣಯ ಕೈಗೊಳ್ಳಬೇಕು. ಚಿದಾನಂದ ಮೂರ್ತಿಗಳು ಕನ್ನಡ ನಾಡು ಗೌರವಿಸುವ ವಿದ್ವಾಂಸರು, ರಾಜಕೀಯ ಕಾರಣಕ್ಕೆ ರಾಜ್ಯಪಾಲರು ಅವರಿಗೆ ಡಾಕ್ಟರೇಟ್ ನಿರಾಕರಿಸಿರುವುದು ಒಕ್ಕೂಟ ವ್ಯವಸ್ಥೆಗೆ ಮಾರಕ ಎಂದು ಕ್ರೈಸ್ತ ಕನ್ನಡ ಸಂಘದ ಪ್ರಧಾನ ಕಾರ್ಯದರ್ಶಿ ರಫಾಯಲ್ ರಾಜ್ ಅಭಿಪ್ರಾಯಪಟ್ಟಿದ್ದಾರೆ.
ಚಿದಾನಂದಮೂರ್ತಿ ಕನ್ನಡ ನಾಡು ಗೌರವಿಸುವ ಹಿರಿಯ ವಿದ್ವಾಂಸರು. ಅಧ್ಯಾಪಕರಾಗಿ ಹಲವು ವಿದ್ವಾಂಸರನ್ನು ಸೃಷ್ಟಿಸಿದ್ದಾರೆ. ಎಂದು ಅವರು ಅಭಿ ಪ್ರಾಯಿಸಿದ್ದಾರೆ. ಚಿದಾನಂದ ಮೂರ್ತಿಯವರ ಹಲವು ಅಭಿಪ್ರಾ ಯಗಳನ್ನು ತಾನು ಒಪ್ಪುವುದಿಲ್ಲ. ಚಿದಾನಂದಮೂರ್ತಿ ಯಾವ ವೈಯಕ್ತಿಕ ಲಾಭಕ್ಕಾಗಿ ಹಿಂದುತ್ವದ ಪ್ರತಿಪಾದಕರಾಗಿದ್ದಾರೆಂಬುದು ತನಗೆ ತಿಳಿದಿಲ್ಲ.
ಹಿರಿಯ ವಿದ್ವಾಂಸ ಚಿದಾನಂದ ಮೂರ್ತಿಗಳಿಗೆ ಗೌರವ ಡಾಕ್ಟರೇಟ್ ನಿರಾಕರಿಸಿರುವ ರಾಜ್ಯಪಾಲರ ಕ್ರಮವನ್ನು ಖಂಡಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತ್ ಕುಮಾರ್ ಅವರು ವಿಶ್ವವಿದ್ಯಾಲಯದವರು ಸರ್ವಾನುಮತದಿಂದ ಶಿಫಾರಸ್ಸು ಮಾಡಿದ ಮೇಲೂ ರಾಜ್ಯಪಾಲರು ಈ ರೀತಿ ವರ್ತಿಸುತ್ತಿರುವುದು ಅವರ ಪಕ್ಷಪಾತತನವನ್ನು ತೋರಿಸುತ್ತಿದೆ ಎಂದಿದ್ದಾರೆ.
ನನಗೂ ಮೂರ್ತಿಗಳಿಗೂ ಅಭಿಪ್ರಾಯ ಭೇದವಿದೆ ನಿಜ. ಆದರೆ, ಇದು ಕನ್ನಡ ಸಂಶೋಧಕನಿಗೆ ಮಾಡಿದ ಅವಮಾನ. ಚಿದಾನಂದಮೂರ್ತಿ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯ ಡಾಕ್ಟರೇಟ್ ಕೊಡುವುದು ತನ್ನನ್ನೇ ತಾನು ಗೌರವಿಸಿ ಕೊಂಡಂತೆ. ಪ್ರಜಾತಂತ್ರದಲ್ಲಿ ಭಿನ್ನ ದೃಷ್ಟಿ ಉಳ್ಳವರು ಪರಸ್ಪರ ಗೌರವದಿಂದ ಇರಬೇಕಾಗಿದೆ. ನಮ್ಮ ಘನವೆತ್ತ ರಾಜ್ಯಪಾಲರು ರಾಜಕೀಯ ಕಾರಣಗಳಿಗಾಗಿ ಚಿದಾನಂದಮೂರ್ತಿ ಯವರಿಗೆ ಗೌರವ ಡಾಕ್ಟರೇಟ್ ನಿರಾಕರಿಸಿರುವುದರಿಂದ ತನಗೆ ಆಘಾತವಾಗಿದೆ ಎಂದು ಯು.ಆರ್.ಅನಂತಮೂರ್ತಿ ಅವರು ಶನಿವಾರ ಸಾಹಿತ್ಯಗೋಷ್ಠಿಯಲ್ಲಿ ಹೇಳಿದರು.
ಗವರ್ನರ್ ಸಮರ್ಥನೆ: ಚಿದಾನಂದ ಮೂರ್ತಿಗಳು ಕೋಮುವಾದಿಗಳು, ಅವರು ಚರ್ಚ್ ದಾಳಿಯನ್ನು ಸಮರ್ಥಿಸಿಕೊಂಡಿದ್ದರು, ಅವರ ಸಂಪೂರ್ಣ ಹಿನ್ನೆಲೆ ತಿಳಿದೇ ಗೌರವ ಡಾಕ್ಟರೇಟ್ ನೀಡಿಕೆಗೆ ತಡೆಯಾಜ್ಞೆ ನೀಡಿದ್ದೇನೆ. ಆ ಅಧಿಕಾರ ನನಗಿದೆ ಎಂದು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಚಿದಾನಂದ ಮೂರ್ತಿ ಹೇಳಿಕೆ: "ನಾನು ಚರ್ಚ್ ದಾಳಿಯನ್ನು ಎಂದೂ ಸಮರ್ಥಿಸಿಲ್ಲ. ಚರ್ಚ್, ದೇಗುಲ, ಮಸೀದಿ ಸೇರಿದಂತೆ ಯಾವುದೇ ಪೂಜಾ ಸ್ಥಳದ ಮೇಲೆ ದಾಳಿ ಸರಿಯಲ್ಲ. ನ್ಯಾ. ಸೋಮಶೇಖರ್ ಆಯೋಗವನ್ನು ಸಮರ್ಥಿಸಿದ್ದೇನೆ. ಗೌರವ ಡಾಕ್ಟರೇಟ್ ತಡೆ ನೀಡಿರುವುದು ಬೇಸರ ತಂದಿದೆ" ಎಂದಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications