ಸಮ್ಮೇಳನದಲ್ಲಿ ಅಶೋಕ್, ಅಶ್ವಥ್ ಮಿಂಚಿಂಗ್

ಉದ್ಯಾನ ನಗರಿಯ ಸಾಂಸ್ಕೃತಿಕ ಬೀಡು ಬಸವನಗುಡಿಯಲ್ಲಿ ನಡೆದ ಮೂರು ದಿನಗಳ ಕನ್ನಡ ಸಾಹಿತ್ಯ ಸಮ್ಮೇಳನ ಅಭೂತಪೂರ್ವ ಯಶಸ್ಸು ಸಾಧಿಸಿದೆ. ಹಾಗಂತ ಸಚಿವ ಅಶೋಕ್ ಘೋಷಿಸಿದ್ದಾರೆ.
ಮೂರು ದಿನಗಳ ಕಾಲ ನಡೆದ ಸಮ್ಮೇಳನಕ್ಕೆ ಜನ ಸಾಗರವೇ ಹರಿದು ಬಂತು. ಸುಮಾರು ಮೂರು ನಾಲ್ಕು ಲಕ್ಷಕ್ಕೂ ಹೆಚ್ಚು ಜನರು ಬಂದು ವಿವಿಧ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಅಮಿತಾನಂದ ಅನುಭವಿಸಿದರು ಅವರೆಲ್ಲರಿಗೂ ತುಂಬ ಹೃದಯದ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದರು.
ಬೆಂಗಳೂರಿನ ಸಮಸ್ತ ಕನ್ನಡಿಗರು, ಕನ್ನಡಾಭಿಮಾನಿಗಳು, ದೂರದೂರದ ಊರುಗಳಿಂದ ಆಗಮಿಸಿ ಕಾರ್ಯಕ್ರಮ ಯಶಸ್ಸುಗೊಳಿಸಿದ್ದಾರೆ. ಎಲ್ಲರೂ ಒಗ್ಗೂಡಿ ಕನ್ನಡ ತೇರು ಎಳೆದು ಧನ್ಯತಾ ಭಾವ ಮೆರೆದಿದ್ದಾರೆ. ಇದು ಸ್ವಾಗತ ಸಮಿತಿಯ ಅಧ್ಯಕ್ಷನಾಗಿ ತುಂಬು ಸಂತಸ ತಂದಿದೆ ಎಂದು ಅವರು ಆನಂದಪರವಶರಾಗಿ ನುಡಿದರು.
ಅಶೋಕ್ ಕೇಂದ್ರ ಬಿಂದು : ಬಸವನಗುಡಿಯಲ್ಲೇ ಸಮ್ಮೇಳನ ನಡೆಸಲು ಅಶೋಕ್ ಸಾಹೇಬ್ರು ನಿರ್ಧರಿಸಿದ ಮೇಲೆ ಪರಿಷತ್ತಿನ ಕಡೆಯಿಂದ ಆಯೋಜಕರು ಬಂದರೋ ಬಿಟ್ಟರೋ ಅಶೋಕ್ ಅವರ ಹಿಂಬಾಲಕರಂತೂ ಮೂರು ದಿನಗಳ ಕಾಲ ಸಾಹಿತ್ಯ ಸುಧೆಯಲ್ಲಿ ಮಿಂದು ಪಾವನರಾದರು.
ಪೂರ್ವ ಜನ್ಮದ ಸುಕೃತ: ಅಶ್ವತ್ಥನಾರಾಯಣ
ಇಷ್ಟು ದಿನಗಳ ಕಾಲ ರಾಜಕೀಯ ಸಮಾರಂಭ ಏರ್ಪಡಿಸಿ ಮಾತ್ರವೇ ಅನುಭವ ಇತ್ತು. ಆದರೆ, ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಪ್ರಧಾನ ಸಂಚಾಲಕರಾಗುವ ಅವಕಾಶ ಸಿಕ್ಕಿದ್ದು, ತಮ್ಮ ಪೂರ್ವ ಜನ್ಮದ ಸುಕೃತ ಎಂದು ವಿಧಾನ ಪರಿಷತ್ ಸದಸ್ಯ ಅಶ್ವತ್ಥನಾರಾಯಣ ಹೇಳಿದರು.
ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸುವ ಅವಕಾಶ ತಮ್ಮಬದುಕಿನಲ್ಲೊಂದು ಮೈಲಿಗಲ್ಲು, ಸಾಹಿತ್ಯ ಸರಸ್ವತಿಯ ಸೇವೆ ಮಾಡುವ ಸೌಭಾಗ್ಯ ತಮ್ಮದಾಗಿದೆ ಎಂದು ವಿಶ್ಲೇಷಿಸಿದರು.
ಆಯೋಜನೆಯಲ್ಲಿ ಕೆಲವೊಂದು ಲೋಪಗಳಾಗಿವೆ ಎಂಬುದನ್ನು ಒಪ್ಪಿಕೊಂಡ ಅವರು, ಇಂಥ ಸಮ್ಮೇಳನ ನಡೆಸುವಾಗ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರು ಮತ್ತು ಪದಾಧಿಕಾರಿಗಳಿಗೂ ಜವಾಬ್ದಾರಿ ವಹಿಸುವುದು ಅಗತ್ಯ. ತಮ್ಮ ತಮ್ಮ ಜಿಲ್ಲೆಯಿಂದ ಬರುವ ಸದಸ್ಯರ ಊಟ, ವಸತಿಯ ಹೊಣೆಯನ್ನು ಆಯಾ ಜಿಲ್ಲೆಯ ಮತ್ತು ತಾಲೂಕು ಘಟಕಗಳ ಪದಾಧಿಕಾರಿಗಳು ನಿರ್ವಹಿಸಿದೆ ಸಮಸ್ಯೆ ಉದ್ಭವಿಸುವುದಿಲ್ಲ ಎಂದು ಅಭಿಪ್ರಾಯಪಟ್ಟರು.
ಬೆಂಗಳೂರಿನ ಧಾವಂತದಲ್ಲೂ ಕನ್ನಡ ಪ್ರೇಮಿಗಳು ಸಮ್ಮೇಳನಕ್ಕೆ ನೀಡಿರುವ ಸ್ಪಂದನ ಅದ್ವಿತೀಯ ಎಲ್ಲರಿಗೂ ನಾವು ಆಭಾರಿಗಳು ಎಂದು ತಿಳಿಸಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications